ದೇಶ

ಕೋವಿಡ್-19 ತಡೆಗೆ ಇರುವ ಏಕೈಕ ಮಾರ್ಗ ದೇಶಾದ್ಯಂತ ಸಂಪೂರ್ಣ ಲಾಕ್ ಡೌನ್: ರಾಹುಲ್ ಗಾಂಧಿ

Nagaraja AB

ನವದೆಹಲಿ: ದೇಶದಲ್ಲಿ ಕೋವಿಡ್-19 ಸಾವಿನ ಪ್ರಕರಣಗಳು ಹೆಚ್ಚಾಗುತ್ತಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಕೊರೋನಾವೈರಸ್ ಹರಡದಂತೆ ತಡೆಯುವಲ್ಲಿ ಇರುವ ಏಕೈಕ ಮಾರ್ಗ ದೇಶಾದ್ಯಂತ ಸಂಪೂರ್ಣ ಲಾಕ್ ಡೌನ್ ಎಂದಿದ್ದಾರೆ.

ಕೋವಿಡ್-19 ಸಾಂಕ್ರಾಮಿಕದಿಂದ ಅನೇಕ ಅಮಾಯಕ ಜನರು ಬಲಿಯಾಗುತ್ತಿದ್ದರೂ, ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಕೋವಿಡ್ -19 ಸೋಂಕು ಹರಡದಂತೆ ಈಗ ಇರುವ ಏಕೈಕ ಮಾರ್ಗ,ದುರ್ಬಲ ವರ್ಗಗಳಿಗೆ ನ್ಯಾಯ ರಕ್ಷಣೆಯೊಂದಿಗೆ ದೇಶಾದ್ಯಂತ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡುವುದಾಗಿದೆ. ಅನೇಕ ಅಮಾಯಕ ಜನರು ಸಾಯುತ್ತಿದ್ದರೂ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಕಳೆದ ತಿಂಗಳು ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸೂಕ್ಷ್ಮ ಕಂಟೈನ್ ಮೆಂಟ್ ವಲಯದತ್ತ ಗಮನ ಹರಿಸಿ. ಕೊನೆಯ ಮಾರ್ಗವಾಗಿ ಲಾಕ್ ಡೌನ್ ಬಳಸಿ ಎಂದು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದ್ದರು.

SCROLL FOR NEXT