ಕೋವಿಡ್-19 ಹೆಚ್ಚಳ: ಭಾರತದಿಂದ ಬರುವ ಪ್ರಯಾಣಿಕರಿಗೆ ಶ್ರೀಲಂಕಾ ನಿರ್ಬಂಧ 
ದೇಶ

ಕೋವಿಡ್-19 ಹೆಚ್ಚಳ: ಭಾರತದಿಂದ ಬರುವ ಪ್ರಯಾಣಿಕರಿಗೆ ಶ್ರೀಲಂಕಾ ನಿರ್ಬಂಧ

ಕೋವಿಡ್-19 ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಭಾರತದಿಂದ ಬರುವ ಪ್ರಯಾಣಿಕರಿಗೆ ಶ್ರೀಲಂಕಾ ನಿರ್ಬಂಧ ವಿಧಿಸಿದೆ. 

ಕೊಲಂಬೊ: ಕೋವಿಡ್-19 ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಭಾರತದಿಂದ ಬರುವ ಪ್ರಯಾಣಿಕರಿಗೆ ಶ್ರೀಲಂಕಾ ನಿರ್ಬಂಧ ವಿಧಿಸಿದೆ. 

ತಕ್ಷಣದಿಂದಲೇ ಲಂಕಾ ನಿರ್ಬಂಧ ಜಾರಿಗೆ ಬರಲಿದೆ. ಲಂಕಾ ಅಷ್ಟೆ ಅಲ್ಲದೆ ಭಾರತದಿಂದ ಬರುವವರಿಗೆ ಬ್ರಿಟನ್, ಯುಎಇ, ಆಸ್ಟ್ರೇಲಿಯಾ, ಸಿಂಗಪೂರ್ ರಾಷ್ಟ್ರಗಳಲ್ಲಿ ನಿರ್ಬಂಧ ಜಾರಿಗೊಳಿಸಲಾಗಿದೆ. 

ಲಂಕಾದ ನಾಗರಿಕ ವಿಮಾನಯಾನ ಪ್ರಾಧಿಕಾರ ಮೇ.06 ರಂದು ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದ್ದು, "ಲಂಕಾ ಆರೋಗ್ಯ ಸಚಿವಾಲಯದ ಸಲಹೆಗಳನ್ನು ಪರಿಗಣಿಸಿ ಈ ಆದೇಶ ಹೊರಡಿಸಲಾಗಿದೆ" ಎಂದು ಪ್ರಯಾಣಿಕ ವಿಮಾನಯಾನದ ಪ್ರಧಾನ ನಿರ್ದೇಶಕರು ಮಾಹಿತಿ ನೀಡಿದ್ದಾರೆ. ಭಾರತದಲ್ಲಿ ಕೊರೋನಾ ತೀವ್ರವಾಗಿ ಹರಡುತ್ತಿರುವ ಪರಿಣಾಮ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಲಂಕಾ ತಿಳಿಸಿದೆ. 

ಕಳೆದ 5 ದಿನಗಳಿಂದ ಲಂಕಾದಲ್ಲಿ ಪ್ರತಿ ದಿನ 2,000 ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗುತ್ತಿದ್ದು, ಇದು ಏಪ್ರಿಲ್ ತಿಂಗಳಲ್ಲಿ ದಿನವೊಂದಕ್ಕೆ ಸರಾಸರಿ 200 ರಷ್ಟಿತ್ತು. ಭಾರತೀಯರು ಪಶ್ಚಿಮ ಏಷ್ಯಾಗೆ ಹಾಗೂ ಸಿಂಗಪೂರ್ ಗಳಿಗೆ ತೆರಳುವುದಕ್ಕೆ ಶ್ರೀಲಂಕಾ ಮಾರ್ಗವನ್ನೇ ಬಳಸಬೇಕಾಗಿತ್ತು. ಇದಕ್ಕೂ ಮುನ್ನ 14 ದಿನಗಳ ಕಾಲ ಕ್ವಾರಂಟೈನ್ ನಲ್ಲಿರಬೇಕೆಂಬ ನಿಯಮ ವಿಧಿಸಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT