ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಗಲಭೆ (ಸಂಗ್ರಹ ಚಿತ್ರ) 
ದೇಶ

ಪಶ್ಚಿಮ ಬಂಗಾಳ ಚುನಾವಣೋತ್ತರ ಹಿಂಸಾಚಾರ: ತನಿಖೆಗೆ ನಾಲ್ವರು ಸದಸ್ಯರ ಸಮಿತಿ ರಚಿಸಿದ ಗೃಹ ಸಚಿವಾಲಯ 

ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ನಾಲ್ವರು ಸದಸ್ಯರ ಸಮಿತಿಯನ್ನು ಕೇಂದ್ರ ಗೃಹ ಸಚಿವಾಲಯ ರಚಿಸಿದೆ. 

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ನಾಲ್ವರು ಸದಸ್ಯರ ಸಮಿತಿಯನ್ನು ಕೇಂದ್ರ ಗೃಹ ಸಚಿವಾಲಯ ರಚಿಸಿದೆ. ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವುದರ ಜೊತೆಗೆ ಸ್ಥಳೀಯ ಪರಿಸ್ಥಿತಿಯ ಬಗ್ಗೆ ಕೂಡ ಈ ಸಮಿತಿ ವರದಿ ನೀಡಲಿದೆ. 

ಗೃಹ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ನೇತೃತ್ವದಲ್ಲಿ ಈ ಸಮಿತಿ ಕಾರ್ಯನಿರ್ವಹಣೆ ಮಾಡಲಿದ್ದು, ಸಮಿತಿಯ ಸದಸ್ಯರು ಈಗಾಗಲೇ ಪಶ್ಚಿಮ ಬಂಗಾಳಕ್ಕೆ ತೆರಳಿದ್ದಾರೆ. ಮೇ.05 ರಂದು ಗೃಹ ಸಚಿವಾಲಯ ರಾಜ್ಯಕ್ಕೆ ವರದಿ ಸಲ್ಲಿಸುವಂತೆ ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದೆ. 

ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾದರೆ ಅದನ್ನು ಸಚಿವಾಲಯ ಗಂಭೀರವಾಗಿ ಪರಿಗಣಿಸುವುದಾಗಿ ಎಚ್ಚರಿಸಿದೆ. ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವನೋತ್ತರ ಗಲಭೆಯಲ್ಲಿ ಕನಿಷ್ಟ 6 ಮಂದಿ ಸಾವನ್ನಪ್ಪಿದ್ದಾರೆ. ಬಿಜೆಪಿ ಕಾರ್ಯಕರ್ತರನ್ನು ಟಿಎಂಸಿ ಬೆಂಬಲಿತ ಗೂಂಡಾಗಳು ಹತ್ಯೆ ಮಾಡುತ್ತಿದ್ದಾರೆಂದು ಬಿಜೆಪಿ ಆರೋಪಿಸಿದೆ. 14 ಮಂದಿ ಬಿಜೆಪಿ ಕಾರ್ಯಕರ್ತರನ್ನು ಈ ವರೆಗೂ ಹತ್ಯೆ ಮಾಡಲಾಗಿದೆ ಎಂದು ಬಿಜೆಪಿ ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT