ಸಾಂದರ್ಭಿಕ ಚಿತ್ರ 
ದೇಶ

ಜಮ್ಮುವಿನ ಶೋಪಿಯಾನ್ ಜಿಲ್ಲೆಯಲ್ಲಿ ಎನ್ ಕೌಂಟರ್: ಮೂವರು ಉಗ್ರರು ಹತ, ಒಬ್ಬ ಪೊಲೀಸರಿಗೆ ಶರಣು 

ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಗುರುವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಸಾವಿಗೀಡಾಗಿದ್ದು ಓರ್ವ ಪೊಲೀಸರಿಗೆ ಶರಣಾಗಿದ್ದಾನೆ.

ಶ್ರೀನಗರ: ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಗುರುವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಸಾವಿಗೀಡಾಗಿದ್ದು ಓರ್ವ ಪೊಲೀಸರಿಗೆ ಶರಣಾಗಿದ್ದಾನೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ಕಂಗಿಗಾಮ್ ಪ್ರದೇಶದಲ್ಲಿ ಉಗ್ರರ ಇರುವಿಕೆ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಕಳೆದ ರಾತ್ರಿಯೇ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯವನ್ನು ಆರಂಭಿಸಿದರು.

ಅಲ್-ಬದರ್ ಉಗ್ರಗಾಮಿ ಗುಂಪಿನ ಹೊಸದಾಗಿ ನೇಮಕಗೊಂಡಿರುವ ಸ್ಥಳೀಯ ಉಗ್ರರ ಚಲನವಲನಗಳನ್ನು ಗುರುತಿಸಿದ ಪೊಲೀಸರು ಅವರನ್ನು ಕೊನೆಗೂ ಬಂಧಿಸಿ ಶರಣಾಗುವಂತೆ ಮನವೊಲಿಸಲು ಪ್ರಯತ್ನಿಸಿದರು. ಆದರೆ ಉಗ್ರರು ಅದಕ್ಕೆ ನಿರಾಕರಿಸಿ ಗುಂಡಿನ ಮಳೆಗರೆಯಲಾರಂಭಿಸಿದರು. ಭದ್ರತಾ ಪಡೆ ಮೇಲೆ ಗ್ರೆನೇಡ್ ದಾಳಿ ನಡೆಸಲು ಆರಂಭಿಸಿದರು.

ಇದಕ್ಕೆ ಪ್ರತಿಯಾಗಿ ಪೊಲೀಸರು ಗುಂಡು ಹಾರಿಸಿದಾಗ ಎನ್ ಕೌಂಟರ್ ನಡೆಯಿತು. ಈ ವೇಳೆ ಓರ್ವ ಉಗ್ರನು ಶರಣಾದನು. ಉಳಿದ ಮೂವರು ಪೊಲೀಸರ ಕೈಯಲ್ಲಿ ಹತ್ಯೆಯಾದರು. ಶರಣಾದ ಉಗ್ರನನ್ನು ತೌಸಿಫ್ ಅಹ್ಮದ್ ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ಕಿಚ್ಚು: ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್‌; ತಮಿಳುನಾಡಿಗೆ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಬಿಡುವಂತೆ CWRC ಆದೇಶ!

'ನೀ ನನಗೆ ಇಷ್ಟ ಇಲ್ಲ': ಮದುವೆಯಾದ ಮೊದಲ ದಿನವೇ ಪತ್ನಿಗೆ ಶಾಕ್​​ ಕೊಟ್ಟ ಪತಿ; ಪ್ರಭಾವಿ ಸಚಿವರ PAಯಿಂದಲೇ ದೋಖಾ?

'ಮಲ್ಲಿಕಾರ್ಜುನ ಖರ್ಗೆಯಿಂದ ಸದಾ ಒತ್ತಡಕ್ಕೆ ಒಳಗಾಗಿರುತ್ತೇನೆ': ರಾಜ್ಯಸಭೆ ಸಭಾಪತಿ ಸಿಪಿ ರಾಧಾಕೃಷ್ಣನ್

ನೀಟ್ ರದ್ದುಗೊಳಿಸುವಂತೆ ಆಗ್ರಹಿಸಿ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಜಾರ್ಖಂಡ್‌ ಪರೀಕ್ಷೆ ವಿವಾದ: 18ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ: BJPಯಿಂದ ರಾಜ್ಯವ್ಯಾಪಿ ಬಂದ್, ABVP ಕಾರ್ಯಕರ್ತರು ವಶಕ್ಕೆ..!