ಕೇಂದ್ರ ಸಚಿವ ವಿ. ಮುರಳೀಧರನ್ 
ದೇಶ

ಬಂಗಾಳದಲ್ಲಿ ಕೇಂದ್ರ ಸಚಿವ ವಿ. ಮುರಳೀಧರನ್ ಬೆಂಗಾವಲು ಪಡೆ ಮೇಲೆ ದಾಳಿ: ಘಟನೆ ಹಿಂದೆ ಟಿಎಂಸಿ ಕೈವಾಡ ಎಂದ ಬಿಜೆಪಿ

ಪಶ್ಚಿಮ ಮಿಡ್ನಾಪುರ ಜಿಲ್ಲೆಯ ಪಂಚ್ ಕುರಿ ಹಳ್ಳಿಯಲ್ಲಿಂದು ವಿದೇಶಾಂಗ ವ್ಯವಹಾರಗಳ ಸಹಾಯಕ ಸಚಿವ ವಿ. ಮುರಳೀಧರ್ ಅವರ ಕಾರಿನ ಮೇಲೆ ದಾಳಿ ನಡೆಸಲಾಗಿದೆ. ಚುನಾವಣೆ ನಂತರ ಕೇಸರಿ ಪಕ್ಷದ ಕಾರ್ಯಕರ್ತರ ಮೇಲಿನ ಹಿಂಸಾಚಾರದಿಂದ ನಲುಗಿದ್ದ ಪ್ರದೇಶಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಕೊಲ್ಕತ್ತಾ: ಪಶ್ಚಿಮ ಮಿಡ್ನಾಪುರ ಜಿಲ್ಲೆಯ ಪಂಚ್ ಕುರಿ ಹಳ್ಳಿಯಲ್ಲಿಂದು ವಿದೇಶಾಂಗ ವ್ಯವಹಾರಗಳ ಸಹಾಯಕ ಸಚಿವ ವಿ. ಮುರಳೀಧರ್ ಅವರ ಕಾರಿನ ಮೇಲೆ ದಾಳಿ ನಡೆಸಲಾಗಿದೆ. ಚುನಾವಣೆ ನಂತರ ಕೇಸರಿ ಪಕ್ಷದ ಕಾರ್ಯಕರ್ತರ ಮೇಲಿನ ಹಿಂಸಾಚಾರದಿಂದ ನಲುಗಿದ್ದ ಪ್ರದೇಶಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ತಮ್ಮ ಬೆಂಗಾವಲು ವಾಹನದ ಮೇಲಿನ ದಾಳಿ ಹಿಂದೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ಕೈವಾಡವಿದೆ ಎಂದು ಆರೋಪಿಸಿ ಮುರಳೀಧರನ್ ಟ್ವೀಟ್ ಮಾಡಿದ್ದಾರೆ.

ಹಿಂಸಾಚಾರದ ವೇಳೆ ದಾಳಿಗೊಳಗಾಗಿದ್ದ ಪಕ್ಷದ ಕಾರ್ಯಕರ್ತರನ್ನು ಭೇಟಿಯಾಗಲು ಪಶ್ಚಿಮ ಮಿಡ್ನಾಪುರಕ್ಕೆ ಹೋಗಿದ್ದೆ. ತಮ್ಮ ಬೆಂಗಾವಿನೊಂದಿಗೆ ಒಂದು ಮನೆಯಿಂದ ಮತ್ತೊಂದು ಮನೆಗೆ ಹೋಗುತ್ತಿರುವಾಗ ಇದ್ದಕ್ಕಿದ್ದಂತೆ ಎದುರಾದ ಗುಂಪೊಂದು ನಮ್ಮ
ಮೇಲೆ ಗಲಾಟೆ ಮಾಡಿ, ಕಾರಿನ ಮೇಲೆ ದಾಳಿ ನಡೆಸಿದ್ದಾರೆ ಎಂದು ಮುರಳೀಧರನ್ ಹೇಳಿದ್ದಾರೆ.

ನಾನು ಸುರಕ್ಷಿತವಾಗಿದ್ದೇನೆ. ಆದರೆ, ಕಾರು ಚಾಲಕನಿಗೆ ಗಾಯವಾಗಿದೆ. ಕೆಲ ಕಾರುಗಳ ಕಿಟಕಿಗಳನ್ನು ಹೊಡೆದು ಹಾಕಲಾಗಿದೆ ಎಂದು ಸಚಿವರು ಹೇಳಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಪೊಲೀಸ್ ಸಿಬ್ಬಂದಿ ಸಮ್ಮುಖದಲ್ಲಿಯೇ ದಾಳಿ ನಡೆದಿದೆ ಎಂದು ಸಚಿವರ ಜೊತೆಗಿದ್ದ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರಾಹುಲ್ ಸಿನ್ಹಾ ಹೇಳಿದ್ದಾರೆ.ಈ ಘಟನೆ ಸಂಬಂಧ ತನಿಖೆ ನಡೆಸಲಾಗುವುದು.ಆದರೆ, ಈವರೆಗೂ ಯಾರನ್ನೂ ಬಂದಿಸಿಲ್ಲ ಎಂದು ಪಶ್ಚಿಮ 
ಮಿಡ್ನಾಪುರದ ಕೊತ್ವಾಲಿ ಠಾಣಾಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT