ಸುಪ್ರೀಂ ಕೋರ್ಟ್ 
ದೇಶ

ಕೇಂದ್ರದ ಆಮ್ಲಜನಕ ವಿತರಣಾ ಸೂತ್ರಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ

ಕೇಂದ್ರವು ಗುರುವಾರ ಸುಪ್ರೀಂ ಕೋರ್ಟ್‌ಗೆ ತನ್ನ ಆದೇಶವನ್ನು ಪಾಲಿಸಿದೆ ಹಾಗೂ 700 ಮೆಟ್ರಿಕ್ ಟನ್ ಆಮ್ಲಜನಕದ ಬದಲು ದೆಹಲಿಯ ಕೋವಿಡ್ -19 ರೋಗಿಗಳಿಗೆ 730 ಮೆಟ್ರಿಕ್ ಟನ್ ಸರಬರಾಜು ಖಚಿತಪಡಿಸಿದೆ ಎಂದು ಹೇಳಿದೆ.

ನವದೆಹಲಿ: ಕೇಂದ್ರವು ಗುರುವಾರ ಸುಪ್ರೀಂ ಕೋರ್ಟ್‌ಗೆ ತನ್ನ ಆದೇಶವನ್ನು ಪಾಲಿಸಿದೆ ಹಾಗೂ 700 ಮೆಟ್ರಿಕ್ ಟನ್ ಆಮ್ಲಜನಕದ ಬದಲು ದೆಹಲಿಯ ಕೋವಿಡ್ -19 ರೋಗಿಗಳಿಗೆ 730 ಮೆಟ್ರಿಕ್ ಟನ್ ಸರಬರಾಜು ಖಚಿತಪಡಿಸಿದೆ ಎಂದು ಹೇಳಿದೆ. ಕೇಂದ್ರವನ್ನು ಪ್ರತಿನಿಧಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎಂ.ಆರ್.ಶಾ ಅವರ ನ್ಯಾಯಪೀಠಕ್ಕೆ ಮೇ 4 ರಂದು ರಾಷ್ಟ್ರ ರಾಜಧಾನಿಯ 56 ಪ್ರಮುಖ ಆಸ್ಪತ್ರೆಗಳಲ್ಲಿ ಸಮೀಕ್ಷೆ ನಡೆಸಲಾಗಿದ್ದು, ಅವರಲ್ಲಿ ಗಮನಾರ್ಹ ಪ್ರಮಾಣದ ದ್ರವ ವೈದ್ಯಕೀಯ ಆಮ್ಲಜನಕ (ಎಲ್‌ಎಂಒ) ಇದೆ ಎಂದು ತಿಳಿದುಬಂದಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ನ್ಯಾಯಮೂರ್ತಿ ಚಂದ್ರಚೂಡ್ ಮೆಹ್ತಾ ಹೇಳಿಕೆಗೆ ತೃಪ್ತರಾಗದೆ “ನಿಮ್ಮ ಆಮ್ಲಜನಕದ ವಿತರಣೆ ಸೂತ್ರಕ್ಕೆ ಒಂದು ಪುನರ್ಮನನದ ಅಗತ್ಯವಿದೆ.ನೀವು ಸೂತ್ರವನ್ನು ಸಿದ್ಧಪಡಿಸಿದಾಗ, ಐಸಿಯುಗೆ ಹೋದ ಪ್ರತಿಯೊಬ್ಬರಿಗೂ ಆಮ್ಲಜನಕದ ಅಗತ್ಯವಿರಲಿಲ್ಲ ಆದರೆ ಈಗ ಅನೇಕ ಜೋಂ ಐಸೋಲೇಷನ್ ರೋಗಿಗಳಿಗೆ ಆಮ್ಲಜನಕದ ಅಗತ್ಯವಿದೆ. ನಿಮ್ಮ ಸೂತ್ರವು ಆಂಬುಲೆನ್ಸ್, ಕೋವಿಡ್ ಕೇರ್ ಸೌಲಭ್ಯ ಇತ್ಯಾದಿಗಳನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ, ”ಎಂದರು.

"ನಿಮ್ಮ ಆಮ್ಲಜನಕ ವಿತರಣೆ ಸೂತ್ರವು ದೆಹಲಿಯನ್ನು ಸರಿಯಾಗಿ ಅಳೆಯುವಲ್ಲಿ ವಿಫಲವಾಗಿದೆ. ಕರ್ನಾಟಕದ ನ್ಯಾಯಾಂಗ ಆದೇಶವಿದೆ, ನಾವು ಈ ಪ್ಯಾನ್ ಇಂಡಿಯಾ ಸರಬರಾಜು, ವಿತರಣೆ ನೋಡಬೇಕಿದೆ" ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

SCROLL FOR NEXT