ಸಂಗ್ರಹ ಚಿತ್ರ 
ದೇಶ

ಕೋವಿಡ್ ಮಾರ್ಗಸೂಚಿ ದಿಕ್ಕರಿಸಿ ವ್ಯಕ್ತಿಯನ್ನು ಸಮಾಧಿ ಮಾಡಿದ ನಂತರ ರಾಜಸ್ಥಾನದ ಗ್ರಾಮವೊಂದರಲ್ಲಿ 21 ಜನರ ಸಾವು!

ಕೋವಿಡ್ ಸೋಂಕಿತನ ಶವವನ್ನು ಕೊರೋನಾ ಮಾರ್ಗಸೂಚಿ ಅನುಸರಿಸದೆ ಸಮಾಧಿ ಮಾಡಿದ ನಂತರ ಕಳೆದ ಕೆಲ ದಿನಗಳಲ್ಲೇ ರಾಜಸ್ಥಾನದ ಸಿಕಾರ್ ಜಿಲ್ಲೆಯ ಹಳ್ಳಿಯಲ್ಲಿ ಇಪ್ಪತ್ತೊಂದು ಜನರು ಸಾವನ್ನಪ್ಪಿದ್ದಾರೆ. 

ಜೈಪುರ: ಕೋವಿಡ್ ಸೋಂಕಿತನ ಶವವನ್ನು ಕೊರೋನಾ ಮಾರ್ಗಸೂಚಿ ಅನುಸರಿಸದೆ ಸಮಾಧಿ ಮಾಡಿದ ನಂತರ ಕಳೆದ ಕೆಲ ದಿನಗಳಲ್ಲೇ ರಾಜಸ್ಥಾನದ ಸಿಕಾರ್ ಜಿಲ್ಲೆಯ ಹಳ್ಳಿಯಲ್ಲಿ ಇಪ್ಪತ್ತೊಂದು ಜನರು ಸಾವನ್ನಪ್ಪಿದ್ದಾರೆ. 

ಏಪ್ರಿಲ್ 15ರಿಂದ ಮೇ 5ರ ನಡುವೆ ವೈರಸ್‌ನಿಂದ ಕೇವಲ ನಾಲ್ಕು ಸಾವುಗಳು ಸಂಭವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಏಪ್ರಿಲ್ 21ರಂದು ಕೋವಿಡ್ ಸೋಂಕಿತನ ದೇಹವನ್ನು ಖೀರ್ವಾ ಗ್ರಾಮಕ್ಕೆ ತರಲಾಯಿತು. ಅಂತ್ಯಕ್ರಿಯೆಯಲ್ಲಿ ಸುಮಾರು 150 ಜನರು ಭಾಗಿಯಾಗಿದ್ದರು. ಆದರೆ ಈ ವೇಳೆ ಕೊರೋನಾ ಮಾರ್ಗಸೂಚಿ ಅನ್ನು ಅನುಸರಿಸದೆ ಸಮಾಧಿ ಮಾಡಲಾಯಿತು. ಶವವನ್ನು ಪ್ಲಾಸ್ಟಿಕ್ ಚೀಲದಿಂದ ಹೊರತೆಗೆದು ಸಮಾಧಿ ಸಮಯದಲ್ಲಿ ಹಲವಾರು ಜನರು ಅದನ್ನು ಮುಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದರು.

'21 ಸಾವುಗಳಲ್ಲಿ ಕೋವಿಡ್ ಕಾರಣದಿಂದಾಗಿ ಕೇವಲ 3-4 ಸಾವುಗಳು ಸಂಭವಿಸಿವೆ. ಹೆಚ್ಚಿನ ಸಾವುಗಳು ವೃದ್ಧಾಪ್ಯದಿಂದ ಆಗಿವೆ. 'ನಾವು ಕೋವಿಡ್ -19 ಸಮುದಾಯ ಪ್ರಸರಣವಾಗಿದೆಯೇ ಎಂದು ಪರೀಕ್ಷಿಸಲು ಸಾವು ಸಂಭವಿಸಿದ 147 ಕುಟುಂಬಗಳ ಮಾದರಿಯನ್ನು ನಾವು ತೆಗೆದುಕೊಂಡಿದ್ದೇವೆ ಎಂದು ಲಕ್ಷ್ಮನ್‌ಗಡದ ಉಪ ವಿಭಾಗೀಯ ಅಧಿಕಾರಿ ಕುಲ್ರಾಜ್ ಮೀನಾ ತಿಳಿಸಿದ್ದಾರೆ.

ಗ್ರಾಮದಲ್ಲಿ ಸ್ಯಾನಿಟೈಸೇಶನ್ ಡ್ರೈವ್ ನಡೆಸಲಾಗಿದೆ. ಸಮಸ್ಯೆಯ ತೀವ್ರತೆಯ ಬಗ್ಗೆ ಗ್ರಾಮಸ್ಥರಿಗೆ ವಿವರಿಸಲಾಗಿದ್ದು, ಈಗ ಅವರು ಸಹಕರಿಸುತ್ತಿದ್ದಾರೆ ಎಂದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT