ಸಂಗ್ರಹ ಚಿತ್ರ 
ದೇಶ

ಕೋವಿಡ್ ಮಾರ್ಗಸೂಚಿ ದಿಕ್ಕರಿಸಿ ವ್ಯಕ್ತಿಯನ್ನು ಸಮಾಧಿ ಮಾಡಿದ ನಂತರ ರಾಜಸ್ಥಾನದ ಗ್ರಾಮವೊಂದರಲ್ಲಿ 21 ಜನರ ಸಾವು!

ಕೋವಿಡ್ ಸೋಂಕಿತನ ಶವವನ್ನು ಕೊರೋನಾ ಮಾರ್ಗಸೂಚಿ ಅನುಸರಿಸದೆ ಸಮಾಧಿ ಮಾಡಿದ ನಂತರ ಕಳೆದ ಕೆಲ ದಿನಗಳಲ್ಲೇ ರಾಜಸ್ಥಾನದ ಸಿಕಾರ್ ಜಿಲ್ಲೆಯ ಹಳ್ಳಿಯಲ್ಲಿ ಇಪ್ಪತ್ತೊಂದು ಜನರು ಸಾವನ್ನಪ್ಪಿದ್ದಾರೆ. 

ಜೈಪುರ: ಕೋವಿಡ್ ಸೋಂಕಿತನ ಶವವನ್ನು ಕೊರೋನಾ ಮಾರ್ಗಸೂಚಿ ಅನುಸರಿಸದೆ ಸಮಾಧಿ ಮಾಡಿದ ನಂತರ ಕಳೆದ ಕೆಲ ದಿನಗಳಲ್ಲೇ ರಾಜಸ್ಥಾನದ ಸಿಕಾರ್ ಜಿಲ್ಲೆಯ ಹಳ್ಳಿಯಲ್ಲಿ ಇಪ್ಪತ್ತೊಂದು ಜನರು ಸಾವನ್ನಪ್ಪಿದ್ದಾರೆ. 

ಏಪ್ರಿಲ್ 15ರಿಂದ ಮೇ 5ರ ನಡುವೆ ವೈರಸ್‌ನಿಂದ ಕೇವಲ ನಾಲ್ಕು ಸಾವುಗಳು ಸಂಭವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಏಪ್ರಿಲ್ 21ರಂದು ಕೋವಿಡ್ ಸೋಂಕಿತನ ದೇಹವನ್ನು ಖೀರ್ವಾ ಗ್ರಾಮಕ್ಕೆ ತರಲಾಯಿತು. ಅಂತ್ಯಕ್ರಿಯೆಯಲ್ಲಿ ಸುಮಾರು 150 ಜನರು ಭಾಗಿಯಾಗಿದ್ದರು. ಆದರೆ ಈ ವೇಳೆ ಕೊರೋನಾ ಮಾರ್ಗಸೂಚಿ ಅನ್ನು ಅನುಸರಿಸದೆ ಸಮಾಧಿ ಮಾಡಲಾಯಿತು. ಶವವನ್ನು ಪ್ಲಾಸ್ಟಿಕ್ ಚೀಲದಿಂದ ಹೊರತೆಗೆದು ಸಮಾಧಿ ಸಮಯದಲ್ಲಿ ಹಲವಾರು ಜನರು ಅದನ್ನು ಮುಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದರು.

'21 ಸಾವುಗಳಲ್ಲಿ ಕೋವಿಡ್ ಕಾರಣದಿಂದಾಗಿ ಕೇವಲ 3-4 ಸಾವುಗಳು ಸಂಭವಿಸಿವೆ. ಹೆಚ್ಚಿನ ಸಾವುಗಳು ವೃದ್ಧಾಪ್ಯದಿಂದ ಆಗಿವೆ. 'ನಾವು ಕೋವಿಡ್ -19 ಸಮುದಾಯ ಪ್ರಸರಣವಾಗಿದೆಯೇ ಎಂದು ಪರೀಕ್ಷಿಸಲು ಸಾವು ಸಂಭವಿಸಿದ 147 ಕುಟುಂಬಗಳ ಮಾದರಿಯನ್ನು ನಾವು ತೆಗೆದುಕೊಂಡಿದ್ದೇವೆ ಎಂದು ಲಕ್ಷ್ಮನ್‌ಗಡದ ಉಪ ವಿಭಾಗೀಯ ಅಧಿಕಾರಿ ಕುಲ್ರಾಜ್ ಮೀನಾ ತಿಳಿಸಿದ್ದಾರೆ.

ಗ್ರಾಮದಲ್ಲಿ ಸ್ಯಾನಿಟೈಸೇಶನ್ ಡ್ರೈವ್ ನಡೆಸಲಾಗಿದೆ. ಸಮಸ್ಯೆಯ ತೀವ್ರತೆಯ ಬಗ್ಗೆ ಗ್ರಾಮಸ್ಥರಿಗೆ ವಿವರಿಸಲಾಗಿದ್ದು, ಈಗ ಅವರು ಸಹಕರಿಸುತ್ತಿದ್ದಾರೆ ಎಂದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT