ಸಂಗ್ರಹ ಚಿತ್ರ 
ದೇಶ

ಆಂಧ್ರ ಪ್ರದೇಶ: ಕಡಪ ಕಲ್ಲು ಗಣಿಯಲ್ಲಿ ಸ್ಫೋಟ;  9 ಮಂದಿ ಸಾವು, ಇಬ್ಬರಿಗೆ ಗಂಭೀರ ಗಾಯ

ಆಂಧ್ರಪ್ರದೇಶದ ಕಡಪದ ಕಲ್ಲುಗಣಿಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. 

ಆಂಧ್ರಪ್ರದೇಶ: ಆಂಧ್ರಪ್ರದೇಶದ ಕಡಪದ ಕಲ್ಲುಗಣಿಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. 

ಮಾಮಿಲ್ಲಪಲ್ಲೆ ಗ್ರಾಮದ ಸಮೀಪ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಜಿಲೆಟಿನ್ ಕಡ್ಡಿಗಳನ್ನು ಅನ್ಲೋಡ್ ಮಾಡುವ ವೇಳೆ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. 

ಅನುಮತಿ ಪಡೆದೇ ಸ್ಥಳದಲ್ಲಿ ಗಣಿಗಾರಿಕೆ ನಡೆಸಲಾಗುತ್ತಿತ್ತು. ಜಿಲೆಟಿನ್ ಕಡ್ಡಿಗಳನ್ನು ಬುದ್ವೆಲ್ ನಿಂದ ತರಲಾಗಿದ್ದು, ಈ ಜಿಲೆಟಿನ್ ಕಡ್ಡಿಗಳನ್ನು ಅನ್ಲೋಡ್ ಮಾಡುವ ವೇಳೆ ಸ್ಫೋಟ ಸಂಭವಿಸಿದೆ ಎಂದು ಕಡಪ ಜಿಲ್ಲೆಯ ಪೊಲೀಸ್ ಅಧಿಕಾರಿ ಕೆ.ಎ.ಅನ್ಬುರಾಜನ್ ಅವರು ಹೇಳಿದ್ದಾರೆ. 

ಸ್ಪೋಟದಿಂದ ಬಲಿಯಾದವರಲ್ಲಿ ಹೆಚ್ಚಿನವರು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಸ್ಥಳೀಯ ಗ್ರಾಮವಾದ ಪುಲಿವೆಂಡುಲ ಮೂಲದವರು ಎಂದು ಹೇಳಲಾಗುತ್ತಿದೆ. 

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿಯವರು ಕಡಪ ಜಿಲ್ಲೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೆ, ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರ ಕುರಿತು ತೀವ್ರ ಸಂತಾಪ ಸೂಚಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT