ಹರ್ಷವರ್ಧನ್ 
ದೇಶ

ಕೊರೋನಾ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ವಿಪರೀತ ಆಲಸ್ಯ ತೋರುತ್ತಿರುವುದು ಆಶ್ಚರ್ಯ ತಂದಿದೆ: ಐಎಂಎ

ಕೋವಿಡ್ ಸಮಸ್ಯೆಯನ್ನು ನಿಬಾಯಿಸುವಲ್ಲಿ ಕೇಂದ್ರ ಸರ್ಕಾರ ತೋರುತ್ತಿರುವ ಆಲಸ್ಯತನ ನಮಗೆ ಆಶ್ಚರ್ಯ ಮೂಡಿಸಿದೆ ಎಂದು ಭಾರತೀಯ ವೈದ್ಯಕೀಯ ಸಂಘ ಅಸಮಾಧಾನ ವ್ಯಕ್ತ ಪಡಿಸಿದೆ.

ನವದೆಹಲಿ: ಕೋವಿಡ್ ಸಮಸ್ಯೆಯನ್ನು ನಿಬಾಯಿಸುವಲ್ಲಿ ಕೇಂದ್ರ ಸರ್ಕಾರ ತೋರುತ್ತಿರುವ ಆಲಸ್ಯತನ ನಮಗೆ ಆಶ್ಚರ್ಯ ಮೂಡಿಸಿದೆ ಎಂದು ಭಾರತೀಯ ವೈದ್ಯಕೀಯ ಸಂಘ ಅಸಮಾಧಾನ ವ್ಯಕ್ತಪಡಿಸಿದೆ.

ಕೊರೋನಾ ಎರಡನೇ ಅಲೆ ಸೃಷ್ಟಿಸಿರುವ ಸಮಸ್ಯೆ ಬಿಕ್ಕಟ್ಟನ್ನು ಎದುರಿಸಲು  ತೋರುತ್ತಿರುವ ಆಲಸ್ಯ ಮತ್ತು ಸೂಕ್ತ ಕ್ರಮ ತೆಗೆದುಕೊಳ್ಳದಿರುವುದು ನಮ್ಮನ್ನು ಆಶ್ಚರ್ಯಚಕಿತಗೊಳಿಸಿದೆ ಎಂದು ತಿಳಿಸಿದೆ.

ವಾಸ್ತವ್ಯ ಅರಿಯದೇ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಐಎಂಎ ಮತ್ತು ವೃತ್ತಿಪರ ಸಹೋದ್ಯೋಗಿಗಳು ತೆಗೆದುಕೊಂಡ ಪೂರ್ವಭಾವಿ ಸಿದ್ಧತೆ ಮುಂತಾದವುಗಳನ್ನು ಗಾಳಿಗೆ ತೂರಿದ್ದಾರೆ ಎಂದು ಹೇಳಿಕೆ ಬಿಡುಗಡೆ ಮಾಡಿದೆ.

10 ದಿನಗಳಿಂದ 15 ದಿನಗಳವರೆಗೆ ಸಂಪೂರ್ಣ ಲಾಕ್‌ಡೌನ್ ಘೋಷಿಸುವ ಕೆಲವು ರಾಜ್ಯಗಳಿಗಿಂತ ಸಂಪೂರ್ಣ, ಯೋಜಿತ ಪೂರ್ವನಿರ್ಧರಿತ ರಾಷ್ಟ್ರೀಯ ಲಾಕ್‌ಡೌನ್ ಅಗತ್ಯವಿದೆ ಎಂದು ಐಎಂಎ ತಿಳಿಸಿದೆ. ಯೋಜಿತ ಲಾಕ್ ಡೌನ್ ನಿಂದ ಆರೋಗ್ಯ ಮೂಲಸೌಕರ್ಯವನ್ನು ಸಿದ್ದಪಡಿಸಲು ಸಮಯ ಸಿಗುತ್ತದೆ. ಯಾಂತ್ರಿಕ ಶಕ್ತಿ ಮತ್ತು ಮಾನವಶಕ್ತಿ ಎರಡನ್ನೂ ವ್ಯವಸ್ಥಿತಗಾಗಿ ರೂಪಿಸಬೇಕೆಂದು ತಿಳಿಸಿದೆ.

ವೇಗವಾಗಿ ಹರಡುತ್ತಿರುವ ಸೋಂಕನ್ನು ಲಾಕ್ ಡೌನ್ ಮಾಡುವುದರಿಂದ ಕಡಿಮೆ ಮಾಡಬಹುದಾಗಿದೆ. ಪ್ರತಿದಿನ ಸುಮಾರು 4 ಲಕ್ಷ ಹೊಸ ಕೊರೋನಾ ಸೋಂಕಿನ ಪ್ರಕರಣಗಳು ಪತ್ತೆಯಾಗುತ್ತಿವೆ. ಆದರೆ ಕೇಂದ್ರ ಸರ್ಕಾರ ಲಾಕ್ ಡೌನ್ ಘೋಷಿಸಲು ಹಿಂದು ಮುಂದೆ ನೋಡುತ್ತಿದೆ, ರಾತ್ರಿ ಕರ್ಫ್ಯೂ ನಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ, ಮಾನವ ಜೀವ ಅತ್ಯಮೂಲ್ಯವಾದದ್ದು ಎಂದು ಹೇಳಿಕೆಯಲ್ಲಿ ಉಲ್ಲೇಖಿಸಿದೆ.

ದೇಶದ ಆಸ್ಪತ್ರೆಗಳಲ್ಲಿ ವೈದ್ಯಕೀಯ ಆಮ್ಲಜನಕದ ತೀವ್ರ ಕೊರತೆಯಾಗುತ್ತಿದೆ ಎಂದು ಕೇಂದ್ರ ಸರ್ಕಾರಿದ ಗಮನ ಸೆಳೆದ ಐಎಂಎ, ಆಮ್ಲಜನಕದ ಬಿಕ್ಕಟ್ಟು ಪ್ರತಿದಿನ ಹೆಚ್ಚುತ್ತಿದೆ, ಹಲವರು ಆಮ್ಲಜನಕ ಕೊರತೆಯಿಂದ ಸಾವನ್ನಪ್ಪುತ್ತಿದ್ದಾರೆ. ಜನರಲ್ಲಿ ಭೀತಿ ಉಂಟಾಗುತ್ತಿದೆ ಎಂದು ಹೇಳಿದ್ದಾರೆ. ವೈದ್ಯಕೀಯ ಆಮ್ಲಜನಕ ಉತ್ಪಾದನೆ ಅಗತ್ಯ ಪ್ರಮಾಣದಲ್ಲಿ ನಡೆಯುತ್ತಿದೆ, ಆದರೆ ಅದರ ಸಮರ್ಪಕ ವಿತರಣೆಯಾಗದ ಕಾರಣ ತೊಂದರೆ ಉಂಟಾಗಿದೆ ಎಂದು ಹೇಳಿದೆ.

ಕಳೆದ 24 ಗಂಟೆಗಳಲ್ಲಿ ಭಾರತವು 4,01,078 ಹೊಸ ಕೋವಿಡ್ ಪ್ರಕರಣಗಳನ್ನು ವರದಿ ಮಾಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶದಲ್ಲಿ ಒಟ್ಟು ಪ್ರಕರಣಗಳು ಈಗ ಕೊರೋನಾ ಸೋಂಕಿತರ ಸಂಖ್ಯೆ 2,18,92,676 ಕ್ಕೆ ಏರಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

SCROLL FOR NEXT