ಸಂಗ್ರಹ ಚಿತ್ರ 
ದೇಶ

ಡಿಆರ್‌ಡಿಒ ಅಭಿವೃದ್ಧಿಪಡಿಸಿರುವ ಆ್ಯಂಟಿ-ಕೋವಿಡ್ ಔಷಧ (2-ಡಿಜಿ) ತುರ್ತು ಬಳಕೆಗೆ ಡಿಸಿಜಿಐ ಅನುಮೋದನೆ

ದೇಶದಲ್ಲಿ ಕೋವಿಡ್ ಎರಡನೇ ಅಲೆ ತೀವ್ರ ಹಾನಿಯುನ್ನುಂಟು ಮಾಡುತ್ತಿದ್ದು ಅದರ ನಿಯಂತ್ರಣಕ್ಕಾಗಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದೀಗ ಆ್ಯಂಟಿ-ಕೋವಿಡ್ ಔಷಧಿ(2-ಡಿಯೋಕ್ಸಿ-ಡಿ-ಗ್ಲೂಕೋಸ್)ಯ ತುರ್ತು ಬಳಕೆಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ಅನುಮೋದನೆ ನೀಡಿದೆ.

ನವದೆಹಲಿ: ದೇಶದಲ್ಲಿ ಕೋವಿಡ್ ಎರಡನೇ ಅಲೆ ತೀವ್ರ ಹಾನಿಯುನ್ನುಂಟು ಮಾಡುತ್ತಿದ್ದು ಅದರ ನಿಯಂತ್ರಣಕ್ಕಾಗಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದೀಗ ಆ್ಯಂಟಿ-ಕೋವಿಡ್ ಔಷಧಿ (2-ಡಿಯೋಕ್ಸಿ-ಡಿ-ಗ್ಲೂಕೋಸ್)ಯ ತುರ್ತು ಬಳಕೆಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಅನುಮೋದನೆ ನೀಡಿದೆ. 

ಹೈದರಾಬಾದ್‌ನ ಡಾ. ರೆಡ್ಡೀಸ್ ಪ್ರಯೋಗಾಲಯಗಳ ಸಹಯೋಗದೊಂದಿಗೆ ಡಿಆರ್‌ಡಿಒನ ಪ್ರಯೋಗಾಲಯದಲ್ಲಿ 2-ಡಿಯೋಕ್ಸಿ-ಡಿ-ಗ್ಲೂಕೋಸ್ (2-ಡಿಜಿ) ಔಷಧದ ಆ್ಯಂಟಿ ಕೋವಿಡ್ ಚಿಕಿತ್ಸಕವನ್ನು ಇನ್ಸ್ಟಿಟ್ಯೂಟ್ ಆಫ್ ನ್ಯೂಕ್ಲಿಯರ್ ಮೆಡಿಸಿನ್ ಮತ್ತು ಅಲೈಡ್ ಸೈನ್ಸಸ್ (INMAS) ಅಭಿವೃದ್ಧಿಪಡಿಸಿದೆ ಎಂದು ಡಿಆರ್‌ಡಿಒ ಹೇಳಿದೆ. 

ಕ್ಲಿನಿಕಲ್ ಪ್ರಯೋಗ ಫಲಿತಾಂಶಗಳು ಈ 2-ಡಿಜಿ ಔಷಧ ಆಸ್ಪತ್ರೆಗೆ ದಾಖಲಾದ ರೋಗಿಗಳನ್ನು ವೇಗವಾಗಿ ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ. ಆಮ್ಲಜನಕದ ಅವಲಂಬನೆಯನ್ನು ಕಡಿಮೆ ಮಾಡುತ್ತದೆ. 2-ಡಿಜಿ ಯೊಂದಿಗೆ ಚಿಕಿತ್ಸೆ ಪಡೆದ ಹೆಚ್ಚಿನ ಕೋವಿಡ್ ರೋಗಿಗಳ ಆರ್ಟಿ-ಪಿಸಿಆರ್ ಪರೀಕ್ಷೆಯಲ್ಲಿ ನೆಗೆಟಿವ್ ಬರುತ್ತಿದೆ. ಎರಡನೇ ಅಲೆ ತೀವ್ರ ಸ್ವರೂಪದಲ್ಲಿ ಕೋವಿಡ್-19ನಿಂದ ಬಳಲುತ್ತಿರುವ ಜನರಿಗೆ ಈ ಔಷಧವು ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ ಎಂದು ಡಿಆರ್‌ಡಿಒ ಹೇಳಿದೆ.

2020ರ ಏಪ್ರಿಲ್ ಸಾಂಕ್ರಾಮಿಕ ರೋಗದ ಮೊದಲ ಅಲೆ ಶುರವಾದಾಗಲೇ ಐಎನ್‌ಎಂಎಎಸ್-ಡಿಆರ್‌ಡಿಒ ವಿಜ್ಞಾನಿಗಳು ಹೈದರಾಬಾದ್‌ನ ಸೆಂಟರ್ ಫಾರ್ ಸೆಲ್ಯುಲಾರ್ ಮತ್ತು ಮಾಲಿಕ್ಯೂಲರ್ ಬಯಾಲಜಿ(ಸಿಸಿಎಂಬಿ) ಪ್ರಯೋಗಾಲಯದಲ್ಲಿ ಪ್ರಯೋಗಗಳನ್ನು ಶುರು ಮಾಡಿತ್ತು. ಈ ಔಷಧ ಎಸ್‌ಎಆರ್ಎಸ್-ಕೋವಿ-2 ವೈರಸ್ ವಿರುದ್ಧ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ, ಜೊತೆಗೆ ಸೋಂಕನ್ನು ತಡೆಯುತ್ತದೆ ಎಂಬುದನ್ನು ಕಂಡುಹಿಡಿದಿದೆ ಎಂದು ಡಿಆರ್ ಡಿಒ ಹೇಳಿದೆ. 

ಈ ಫಲಿತಾಂಶಗಳ ಆಧಾರದ ಮೇಲೆ, ಡಿಸಿಜಿಐ-ಸಿಡಿಎಸ್ಕೊ ಕೋವಿಡ್ ರೋಗಿಗಳಲ್ಲಿ 2-ಡಿಜಿ 2ನೇ ಹಂತದ ಕ್ಲಿನಿಕಲ್ ಪ್ರಯೋಗವನ್ನು ಮೇ 2020ರಲ್ಲಿ ಅನುಮತಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT