ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ 
ದೇಶ

ಭಾರತದ ಕೋವಿಡ್-19 ವಿರುದ್ಧದ ಹೋರಾಟ ನೆಹರು-ಗಾಂಧಿಗಳು ಸೃಷ್ಟಿಸಿದ ವ್ಯವಸ್ಥೆಯಿಂದ ಸಾಧ್ಯವಾಗಿದೆ: ಶಿವಸೇನೆ

ಕೋವಿಡ್-19 ನಿಂದ ಉಂಟಾಗಿರುವ ಪರಿಸ್ಥಿತಿಯನ್ನು ನಿಭಾಯಿಸುವ ವಿಷಯದಲ್ಲಿ ಮೋದಿ ಸರ್ಕಾರದ ವಿರುದ್ಧ ಶಿವಸೇನೆ ತೀವ್ರ ಟೀಕೆ ಮಾಡಿದೆ. 

ಮುಂಬೈ: ಕೋವಿಡ್-19 ನಿಂದ ಉಂಟಾಗಿರುವ ಪರಿಸ್ಥಿತಿಯನ್ನು ನಿಭಾಯಿಸುವ ವಿಷಯದಲ್ಲಿ ಮೋದಿ ಸರ್ಕಾರದ ವಿರುದ್ಧ ಶಿವಸೇನೆ ತೀವ್ರ ಟೀಕೆ ಮಾಡಿದೆ. "ಭಾರತದಲ್ಲಿ ಕೋವಿಡ್-19 ನಿಭಾಯಿಸುವುದಕ್ಕಾಗಿ ನೆರೆಯ ಸಣ್ಣರಾಷ್ಟ್ರಗಳೂ ಸಹಾಯಹಸ್ತ ಚಾಚುತ್ತಿವೆ, ಆದರೆ ಮೋದಿ ಸರ್ಕಾರ, ಬಹುಕೋಟಿ ರೂಪಾಯಿ ವೆಚ್ಚದ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ಸ್ಥಗಿತಗೊಳಿಸುವುದಕ್ಕೂ ಸಿದ್ಧವಿಲ್ಲ ಎಂದು ಸಾಮ್ನಾದಲ್ಲಿ ಟೀಕಿಸಿದೆ. 

ಭಾರತ ಇಂದು ಕೊರೋನಾದ ವಿರುದ್ಧ ಹೋರಾಡುತ್ತಿದ್ದರೆ, ಅದಕ್ಕೆ ಈ ಹಿಂದಿನ 70 ವರ್ಷಗಳಲ್ಲಿ ಪಂಡಿತ್ ನೆಹರು, ಇಂದಿರಾ ಗಾಂಧಿ, ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಸೃಷ್ಟಿಸಲಾದ ವ್ಯವಸ್ಥೆ ಕಾರಣ. ಈ ವ್ಯವಸ್ಥೆ ಭಾರತ ಸಂಕಷ್ಟದ ಕಾಲವನ್ನು ನಿಭಾಯಿಸುವುದಕ್ಕೆ ಸಾಧ್ಯವಾಗಿದೆ. 

ಯುಎನ್ಐಸಿಇಎಫ್ ಕೂಡ ಭಾರತದಲ್ಲಿರುವ ಕೋವಿಡ್-19 ಪರಿಸ್ಥಿತಿಯಿಂದಾಗಿ ವಿಶ್ವಕ್ಕೆ ಅಪಾಯವಿದೆ ಎಂಬ ಆತಂಕ ವ್ಯಕ್ತಪಡಿಸಿದೆ. ಅಷ್ಟೇ ಅಲ್ಲದೇ ಸಾಧ್ಯವಾದಷ್ಟೂ ಹೆಚ್ಚಿನ ದೇಶಗಳು ಸಹಾಯ ಮಾಡಬೇಕೆಂದು ವಿಶ್ವಸಂಸ್ಥೆ ಕರೆ ನೀಡಿದೆ. ಬಾಂಗ್ಲಾದೇಶ 10,000 ರೆಮ್ಡಿಸಿವರ್ ಔಷಧಗಳನ್ನು ಕಳಿಸಿದೆ, ಭೂತಾನ್ ವೈದ್ಯಕೀಯ ಆಕ್ಸಿಜನ್ ನ್ನು ಕಳಿಸಿದೆ. ನೇಪಾಳ, ಮ್ಯಾನ್ಮಾರ್ ಹಾಗೂ ಶ್ರೀಲಂಕಾಗಳೂ ಸಹ ಆತ್ಮನಿರ್ಭರ ಭಾರತದ ಸಹಾಯಕ್ಕೆ ಧಾವಿಸಿವೆ. ಇಂದು ಭಾರತ ಉಳಿದಿರುವುದು ನೆಹರು-ಗಾಂಧಿಗಳ ವ್ಯವಸ್ಥೆಯ ಸೃಷ್ಟಿಯಿಂದ, ಬೇರೆ ರಾಷ್ಟ್ರಗಳಿಂದ ಸಹಾಯ ಪಡೆಯುತ್ತಿದ್ದ ಪಾಕಿಸ್ತಾನ, ಕಾಂಗೋ, ರುವಾಂಡಾಗಳಂತಹ ರಾಷ್ಟ್ರಗಳು ಇಂದು ಭಾರತಕ್ಕೆ ಸಹಾಯ ಮಾಡುವ ಮಾತನ್ನಾಡುತ್ತಿವೆ, ಇದು ಇಂದಿನ ಆಳುವವರ ತಪ್ಪಾದ ನೀತಿಗಳ ಪರಿಣಾಮ ಎಂದು ಶಿವಸೇನೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

SCROLL FOR NEXT