ಪ್ರಧಾನಿ ನರೇಂದ್ರ ಮೋದಿ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ 
ದೇಶ

ಕೊರೋನ ಪರಿಸ್ಥಿತಿ: ನಾಲ್ಕು ರಾಜ್ಯಗಳ ಜೊತೆ ಪ್ರಧಾನಿ ಸಮಾಲೋಚನೆ

ರಾಜ್ಯಗಳಲ್ಲಿನ ಕೊರೋನ ಸೋಂಕು ಪರಿಸ್ಥಿತಿಯನ್ನು ನಿಭಾಯಿಸಲು ಪ್ರಧಾನಿ ನರೇಂದ್ರ ಮೋದಿ ಶನಿವಾರ ನಾಲ್ಕು ಮುಖ್ಯಮಂತ್ರಿಗಳ ಜೊತೆ ದೂರವಾಣಿಯಲ್ಲಿ ಸಮಾಲೋಚನೆ ನಡೆಸಿದರು.

ನವದೆಹಲಿ: ರಾಜ್ಯಗಳಲ್ಲಿನ ಕೊರೋನ ಸೋಂಕು ಪರಿಸ್ಥಿತಿಯನ್ನು ನಿಭಾಯಿಸಲು ಪ್ರಧಾನಿ ನರೇಂದ್ರ ಮೋದಿ ಶನಿವಾರ ನಾಲ್ಕು ಮುಖ್ಯಮಂತ್ರಿಗಳ ಜೊತೆ ದೂರವಾಣಿಯಲ್ಲಿ ಸಮಾಲೋಚನೆ ನಡೆಸಿದರು.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್,  ಮತ್ತು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರೊಂದಿಗೆ ಕೊರೋನ ಸ್ಥಿತಿ ಕುರಿತ ಮಾಹಿತಿ ಪಡೆದಿಕೊಂಡರು.

ಇದರ ಜೊತೆಗೆ ಕೊರೋನಾ ಭಾದಿತ ರಾಜ್ಯಗಳಿಗೆ ಸಾಧ್ಯವಿರುವ ಎಲ್ಲ ಸಹಾಯ ಮಾಡುವ ಭರವಸೆ ನೀಡಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ವಿಶೇಷವೆಂದರೆ, ಮೋದಿಯವರು ಕಳೆದ ಎರಡು ದಿನಗಳಿಂದ ಮುಖ್ಯಮಂತ್ರಿಗಳು ಮತ್ತು ಲೆಫ್ಟಿನೆಂಟ್ ಗವರ್ನರ್ ಗಳೊಂದಿಗೆ ದೂರವಾಣಿಯಲ್ಲಿ ಮಾತುಕತೆ ಮಾಡುತ್ತಿದ್ದಾರೆ.

ರಾಜ್ಯದಲ್ಲಿ ಕೊರೋನಾ ವೈರಸ್ ಲಸಿಕೆಗಾಗಿ ಪ್ರತ್ಯೇಕ ಆಪ್ ಅಭಿವೃದ್ಧಿಪಡಿಸಲು ಅನುಮತಿ ಕೋರಿ ಪ್ರಧಾನಿ ಮೋದಿ ಅವರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್  ಠಾಕ್ರೆ ಕೇಂದ್ರಕ್ಕೆ ಪತ್ರ ಬರೆದ ದಿನವೇ ಅವರಿಗೆ ಕರೆ ಮಾಡಿ ಮಾತನಾಡಿದರು.

ಕೊರೋನ ಸೋಂಕಿನ ಎರಡನೇ ಅಲೆಯಲ್ಲಿ ಮಹಾರಾಷ್ಟ್ರವು ಹೆಚ್ಚು  ಪರಿಣಾಮ ಬೀರಿದ ರಾಜ್ಯವಾಗಿದೆ. ಮುಂಬೈ ಸೇರಿದಂತೆ ಅದರ ಕೆಲವು ನಗರಗಳಲ್ಲಿ ಕೆಲಮಟ್ಟಿಗೆ ಸುಧಾರಣೆ ಕಂಡಿದ್ದರೂ, ರಾಜ್ಯದ ಅನೇಕ ಭಾಗಗಳಲ್ಲಿನ ಪರಿಸ್ಥಿತಿ ಕಳವಳಕಾರಿಯಾಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 54,000 ಹೊಸ ಕೊರೋನ ಪ್ರಕರಣಗಳು ದಾಖಲಾಗಿವೆ.

ನಂತರ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮೋದಿಗೆ ರಾಜ್ಯದಲ್ಲಿನ ಚಿತ್ರಣ ನೀಡಿದರು. ಸೋಂಕು ಪ್ರಕರಣ ಕಡಿಮೆಯಾಗುತ್ತಿರುವ ಬಗ್ಗೆ ಮತ್ತು ಶೀಘ್ರವಾಗಿ ಚೇತರಿಕೆ ಪ್ರಮಾಣ ಹೆಚ್ಚಿಸುವ ಬಗ್ಗೆ ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT