ಬಿಜೆಪಿ ಶಾಸಕ ಸುರೇಂದ್ರ ಸಿಂಗ್ 
ದೇಶ

ಕೊರೋನಾ ಸೋಂಕು ಹರಡುವಿಕೆ ನಿಲ್ಲಲು ಗೋಮೂತ್ರ ಕುಡಿಯಿರಿ: ಬಿಜೆಪಿ ಶಾಸಕ

ದೇಶದಾದ್ಯಂತ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಸೋಂಕು ಹರಡುವಿಕೆ ನಿಯಂತ್ರಿಸಲು ಗೋಮೂತ್ರ ಕುಡಿಯುವಂತೆ ಉತ್ತರಪ್ರದೇಶ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಅವರು ಹೇಳಿದ್ದಾರೆ.

ಲಖನೌ: ದೇಶದಾದ್ಯಂತ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಸೋಂಕು ಹರಡುವಿಕೆ ನಿಯಂತ್ರಿಸಲು ಗೋಮೂತ್ರ ಕುಡಿಯುವಂತೆ ಉತ್ತರಪ್ರದೇಶ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಅವರು ಹೇಳಿದ್ದಾರೆ. 

ಗೋಮೂತ್ರವನ್ನು ಹೇಗೆ ಸೇವಿಸಬೇಕು ಎಂಬ ವಿಧಾನಗಳ ಕುರಿತಾದಂತೆ ಸುರೇಂದ್ರ ಸಿಂಗ್‌ ವೀಡಿಯೋ ಮೂಲಕ ತಿಳಿಸಿದ್ದಾರೆ. ವಿಡಿಯೋದಲ್ಲಿ ಜನರಿಗೆ ಗೋಮೂತ್ರ ಹೇಗೆ ಸೇವಿಸಬೇಕು ಎಂದು ತಿಳಿಸುವುದರೊಂದಿಗೆ ತಾವೂ ಗೋಮೂತ್ರ ಕುಡಿದಿರುವುದು ಕಂಡು ಬಂದಿದೆ. 

ಪ್ರತೀನಿತ್ಯ 18 ಗಂಟೆಗಳ ಕಾಲ ನಾನು ಜನಸೇವೆ ಮಾಡುತ್ತಿದ್ದು, ಇದಕ್ಕೆ ಗೋಮೂತ್ರ ಸೇವನೆಯಿಂದ ದೊರಕಿದ ಆರೋಗ್ಯವೇ ಕಾರಣ ಎಂದು ಅವರು ಸುರೇಂದ್ರ ಸಿಂಗ್ ಅವರು ಹೇಳಿದ್ದಾರೆ.

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಮೂರು ಮುಚ್ಚಳದಷ್ಟು ಗೋಮೂತ್ರವನ್ನು ಒಂದು ಲೋಟ ನೀರಿನಲ್ಲಿ ಬೆರೆಸಿ ಸೇವಿಸಬೇಕು ಎಂದ ಅವರು, ತಾನು ವಿಜ್ಞಾನವನ್ನು ನಂಬದಿದ್ದರೂ ಗೋಮೂತ್ರವನ್ನು ನಂಬುತ್ತೇನೆ. ಒಂದು ಲೋಟ ನೀರಿಗೆ ಗೋಮೂತ್ರ ಬೆರೆಸಿ ಕುಡಿದ ಬಳಿಕ ಅರ್ಧ ಗಂಟೆ ಏನನ್ನೂ ಸೇವಿಸಬಾರದು ಎಂಬ ಸಲಹೆಯನ್ನೂ ಅವರು ನೀಡಿದ್ದಾರೆ. 

ಬಿಜೆಪಿ ಶಾಸಕರ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಹೇಳಿಕೆ ಕುರಿತು ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT