ಬಿಜೆಪಿ ಶಾಸಕ ಸುರೇಂದ್ರ ಸಿಂಗ್ 
ದೇಶ

ಕೊರೋನಾ ಸೋಂಕು ಹರಡುವಿಕೆ ನಿಲ್ಲಲು ಗೋಮೂತ್ರ ಕುಡಿಯಿರಿ: ಬಿಜೆಪಿ ಶಾಸಕ

ದೇಶದಾದ್ಯಂತ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಸೋಂಕು ಹರಡುವಿಕೆ ನಿಯಂತ್ರಿಸಲು ಗೋಮೂತ್ರ ಕುಡಿಯುವಂತೆ ಉತ್ತರಪ್ರದೇಶ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಅವರು ಹೇಳಿದ್ದಾರೆ.

ಲಖನೌ: ದೇಶದಾದ್ಯಂತ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಸೋಂಕು ಹರಡುವಿಕೆ ನಿಯಂತ್ರಿಸಲು ಗೋಮೂತ್ರ ಕುಡಿಯುವಂತೆ ಉತ್ತರಪ್ರದೇಶ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಅವರು ಹೇಳಿದ್ದಾರೆ. 

ಗೋಮೂತ್ರವನ್ನು ಹೇಗೆ ಸೇವಿಸಬೇಕು ಎಂಬ ವಿಧಾನಗಳ ಕುರಿತಾದಂತೆ ಸುರೇಂದ್ರ ಸಿಂಗ್‌ ವೀಡಿಯೋ ಮೂಲಕ ತಿಳಿಸಿದ್ದಾರೆ. ವಿಡಿಯೋದಲ್ಲಿ ಜನರಿಗೆ ಗೋಮೂತ್ರ ಹೇಗೆ ಸೇವಿಸಬೇಕು ಎಂದು ತಿಳಿಸುವುದರೊಂದಿಗೆ ತಾವೂ ಗೋಮೂತ್ರ ಕುಡಿದಿರುವುದು ಕಂಡು ಬಂದಿದೆ. 

ಪ್ರತೀನಿತ್ಯ 18 ಗಂಟೆಗಳ ಕಾಲ ನಾನು ಜನಸೇವೆ ಮಾಡುತ್ತಿದ್ದು, ಇದಕ್ಕೆ ಗೋಮೂತ್ರ ಸೇವನೆಯಿಂದ ದೊರಕಿದ ಆರೋಗ್ಯವೇ ಕಾರಣ ಎಂದು ಅವರು ಸುರೇಂದ್ರ ಸಿಂಗ್ ಅವರು ಹೇಳಿದ್ದಾರೆ.

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಮೂರು ಮುಚ್ಚಳದಷ್ಟು ಗೋಮೂತ್ರವನ್ನು ಒಂದು ಲೋಟ ನೀರಿನಲ್ಲಿ ಬೆರೆಸಿ ಸೇವಿಸಬೇಕು ಎಂದ ಅವರು, ತಾನು ವಿಜ್ಞಾನವನ್ನು ನಂಬದಿದ್ದರೂ ಗೋಮೂತ್ರವನ್ನು ನಂಬುತ್ತೇನೆ. ಒಂದು ಲೋಟ ನೀರಿಗೆ ಗೋಮೂತ್ರ ಬೆರೆಸಿ ಕುಡಿದ ಬಳಿಕ ಅರ್ಧ ಗಂಟೆ ಏನನ್ನೂ ಸೇವಿಸಬಾರದು ಎಂಬ ಸಲಹೆಯನ್ನೂ ಅವರು ನೀಡಿದ್ದಾರೆ. 

ಬಿಜೆಪಿ ಶಾಸಕರ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಹೇಳಿಕೆ ಕುರಿತು ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT