ದೇಶ

ಗೋವಾ ಆಸ್ಪತ್ರೆಯಲ್ಲಿ 26 ಕೋವಿಡ್ ರೋಗಿಗಳು ಸಾವು: ಆಮ್ಲಜನಕ ಕೊರತೆ ಆರೋಪ

26 ಕೋವಿಡ್ -19 ರೋಗಿಗಳು ಗೋವಾ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (ಜಿಎಂಸಿಎಚ್) ಮುಂಜಾನೆ ಸಾವನ್ನಪ್ಪಿದ್ದಾರೆ ಮತ್ತು ನಿಖರವಾದ ಕಾರಣ ತಿಳಿಯಲು ಹೈಕೋರ್ಟ್‌ನಿಂದ ತನಿಖೆಗೆ ಕೋರಿರುವುದಾಗಿ ಗೋವಾ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಮಂಗಳವಾರ ಹೇಳಿದ್ದಾರೆ. 

ಪಣಜಿ: 26 ಕೋವಿಡ್-19 ರೋಗಿಗಳು ಗೋವಾ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (ಜಿಎಂಸಿಎಚ್) ಮುಂಜಾನೆ ಸಾವನ್ನಪ್ಪಿದ್ದಾರೆ ಮತ್ತು ನಿಖರವಾದ ಕಾರಣ ತಿಳಿಯಲು ಹೈಕೋರ್ಟ್‌ನಿಂದ ತನಿಖೆಗೆ ಕೋರಿರುವುದಾಗಿ ಗೋವಾ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಮಂಗಳವಾರ ಹೇಳಿದ್ದಾರೆ. ಬೆಳಿಗ್ಗೆ 2 ರಿಂದ 6 ರವರೆಗೆ ಈ ಸಾವುನೋವುಗಳು ಸಂಭವಿಸಿವೆ ಎಂದು ಅವರು ಹೇಳಿದರು, ಆದರೆ ಇದರ ಹಿಂದಿನ ಕಾರಣ ಇನ್ನೂ ಖಚಿತವಾಗಿಲ್ಲ.

ಜಿಎಂಸಿಎಚ್‌ಗೆ ಭೇಟಿ ನೀಡಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, "ವೈದ್ಯಕೀಯ ಆಮ್ಲಜನಕದ ಲಭ್ಯತೆ ಮತ್ತು ಜಿಎಂಸಿಎಚ್‌ನಲ್ಲಿನ ಕೋವಿಡ್ ವಾರ್ಡ್‌ಗಳಿಗೆ ಅದರ ಪೂರೈಕೆಯ ನಡುವಿನ ವ್ಯತ್ಯಾಸ ರೋಗಿಗಳಿಗೆ ಕೆಲವು ಸಮಸ್ಯೆಗಳನ್ನು ಉಂಟುಮಾಡಿರಬಹುದು" ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ರಾಣೆ, ಸೋಮವಾರದವರೆಗೆ ಜಿಎಂಸಿಎಚ್‌ನಲ್ಲಿ ವೈದ್ಯಕೀಯ ಆಮ್ಲಜನಕದ ಪೂರೈಕೆಯಲ್ಲಿನ ಕೊರತೆಯನ್ನು ಒಪ್ಪಿಕೊಂಡಿದ್ದಾರೆ. "ಈ ಸಾವುಗಳ ಹಿಂದಿನ ಕಾರಣಗಳನ್ನು ಹೈಕೋರ್ಟ್ ತನಿಖೆ ಮಾಡಬೇಕು. ಜಿಎಂಸಿಎಚ್‌ಗೆ ಆಮ್ಲಜನಕದ ಪೂರೈಕೆಯ ಬಗ್ಗೆ ಹೈಕೋರ್ಟ್ ಸಹ ಮಧ್ಯಪ್ರವೇಶಿಸಿ ಶ್ವೇತಪತ್ರವನ್ನು ಸಿದ್ಧಪಡಿಸಬೇಕು, ಇದು ವಿಷಯಗಳನ್ನು ಸರಿಯಾಗಿ ನಿರೂಪಿಸಲು ಸಹಾಯ ಮಾಡುತ್ತದೆ" ಎಂದು ಆರೋಗ್ಯ ಸಚಿವರು ಜಿಎಂಸಿಎಚ್‌ಗೆ ಭೇಟಿ ನೀಡಿದ ನಂತರ ಹೇಳಿದರು.

ಸೋಮವಾರದವರೆಗೆ ವೈದ್ಯಕೀಯ ಆಮ್ಲಜನಕದ ಅವಶ್ಯಕತೆ 1,200 ಜಂಬೋ ಸಿಲಿಂಡರ್‌ಗಳಷ್ಟಿದ್ದು , ಅದರಲ್ಲಿ 400 ಮಾತ್ರ ಸರಬರಾಜು ಮಾಡಲಾಗಿದೆ ಎಂದು ರಾಣೆ ಹೇಳಿದರು. "ವೈದ್ಯಕೀಯ ಆಮ್ಲಜನಕದ ಪೂರೈಕೆಯಲ್ಲಿ ಕೊರತೆಯಿದ್ದರೆ, ಆ ವ್ಯತ್ಯಾಸವನ್ನು ಹೇಗೆ ನಿವಾರಿಸುವುದು ಎಂಬುದರ ಕುರಿತು ಚರ್ಚೆಯನ್ನು ನಡೆಸಬೇಕು" ಎಂದು ಅವರು ಹೇಳಿದರು.

ಜಿಎಂಸಿಎಚ್‌ನಲ್ಲಿ ಕೋವಿಡ್19 ಚಿಕಿತ್ಸೆಯನ್ನು ಮೇಲ್ವಿಚಾರಣೆ ಮಾಡಲು ರಾಜ್ಯ ಸರ್ಕಾರ ನೇಮಿಸಿರುವ ನೋಡಲ್ ಅಧಿಕಾರಿಗಳ ಮೂರು ಸದಸ್ಯರ ತಂಡವು ಸಿಎಂಗೆ ಸಮಸ್ಯೆಗಳ ಬಗ್ಗೆ ಅದರ ಆಳ ಅಗಲದ ಬಗ್ಗೆ ವಿವರ ನೀಡಬೇಕು.  ಹಿಂದಿನ ದಿನ, ಪಿಪಿಇ ಕಿಟ್ ಧರಿಸಿದ ಸಿಎಂ ಜಿಎಂಸಿಎಚ್‌ನ ಕೋವಿಡ್ 19 ವಾರ್ಡ್‌ಗಳಿಗೆ ಭೇಟಿ ನೀಡಿ ಅಲ್ಲಿ ರೋಗಿಗಳು ಮತ್ತು ಅವರ ಸಂಬಂಧಿಕರನ್ನು ಭೇಟಿಯಾದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT