ಸಾಂದರ್ಭಿಕ ಚಿತ್ರ 
ದೇಶ

ಪಶ್ಚಿಮ ಬಂಗಾಳ: ಟಿಎಂಸಿ ಮುಖಂಡ ಆದಿತ್ಯ ನಿಯೋಗಿ ಗುಂಡಿಕ್ಕಿ ಹತ್ಯೆ

ಟಿಎಂಸಿ ಮುಖಂಡ ಆದಿತ್ಯ ನಿಯೋಗಿ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.

ಚಿನ್ಸುರಾಹ್: ಟಿಎಂಸಿ ಮುಖಂಡ ಆದಿತ್ಯ ನಿಯೋಗಿ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತರಕಾರಿ ಮಾರುಕಟ್ಟೆಯಲ್ಲಿ ಆದಿತ್ಯ ನಿಯೋಗಿ ಹಣ್ಣು ತರಕಾರಿ ಖರೀದಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಗಂಭೀರ ಸ್ಥಿತಿಯಲ್ಲಿದ್ದ ಬಾನ್ಸ್‌ಬೆರಿಯಾ ಮುನ್ಸಿಪಾಲಿಟಿಯ ಮಾಜಿ ಉಪಾಧ್ಯಕ್ಷ ಆದಿತ್ಯ ನಿಯೋಗಿಯನ್ನು  ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿನ ವೈದ್ಯರು ಅವರನ್ನು ಕೋಲ್ಕತ್ತ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದರು.

ಆಡಳಿತ ಪಕ್ಷದೊಳಗಿನ ಗುಂಪುಗಾರಿಕೆ ದ್ವೇಷ ಎಂದು ಬಿಜೆಪಿ ಹೇಳಿದೆ. ಬಿಜೆಪಿ ಕಾರ್ಯಕರ್ತರು ಈ ದಾಳಿ ನಡೆಸಿದ್ದಾರೆ ಎಂದು ಮಾಜಿ ಸಚಿವ ಹಾಗೂ ಟಿಎಂಸಿ ಶಾಸಕ ತಪನ್ ದಾಸ್ ಗುಪ್ತ ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದು ಶೀಘ್ರವೇ ಆರೋಪಿಗಳನ್ನು ಬಂಧಿಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT