ಮುಖ್ಯ ವಿಜ್ಞಾನಿ ಸೌಮ್ಯ ಸ್ವಾಮಿನಾಥನ್ 
ದೇಶ

ಭಾರತದ ಕೋವಿಡ್-19 ನಿರ್ವಹಣೆ ನಿಯಮಗಳಲ್ಲಿ ಸಲಹೆ ನೀಡಲಾದ ಐವರ್ಮೆಕ್ಟಿನ್ ಔಷಧಿ ಬಗ್ಗೆ ಡಬ್ಲ್ಯುಹೆಚ್ಒ ಎಚ್ಚರಿಕೆ 

ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುವುದಕ್ಕಾಗಿ ಕೋವಿಡ್-19 ನಿರ್ವಹಣೆ ನಿಯಮಗಳಲ್ಲಿ ಸಲಹೆ ನೀಡಲಾದ ಐವರ್ಮೆಕ್ಟಿನ್ ಔಷಧಿ ಬಗ್ಗೆ ಡಬ್ಲ್ಯುಹೆಚ್ಒ ಎಚ್ಚರಿಕೆ ನೀಡಿದೆ. 

ನವದೆಹಲಿ: ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುವುದಕ್ಕಾಗಿ ಕೋವಿಡ್-19 ನಿರ್ವಹಣೆ ನಿಯಮಗಳಲ್ಲಿ ಸಲಹೆ ನೀಡಲಾದ ಐವರ್ಮೆಕ್ಟಿನ್ ಔಷಧಿ ಬಗ್ಗೆ ಡಬ್ಲ್ಯುಹೆಚ್ಒ ಎಚ್ಚರಿಕೆ ನೀಡಿದೆ. 

ಪಾರಾಸಿಟಿಕ್ ಸೋಂಕುಗಳನ್ನು ನಿವಾರಿಸುವುದಕ್ಕಾಗಿ ಅನುಸರಿಸಲಾಗುತ್ತಿದ್ದ ಚಿಕಿತ್ಸಾ ವಿಧಾನದಲ್ಲಿ ಬಾಯಿಯಿಂದ ತೆಗೆದುಕೊಳ್ಳುವ ಐವರ್ಮೆಕ್ಟಿನ್ ಔಷಧಿಯನ್ನು ಕೋವಿಡ್-19 ರೋಗಿಗಳಿಗೂ ನೀಡುವುದಕ್ಕೆ ಭಾರತ ಸರ್ಕಾರ ಪ್ರಕಟಿಸಿರುವ  ಕೋವಿಡ್-19 ನಿರ್ವಹಣೆ ನಿಯಮಗಳಲ್ಲಿ ಸಲಹೆ ನೀಡಲಾಗಿತ್ತು.

ಆದರೆ ಇದರ ವಿರುದ್ಧ ಡಬ್ಲ್ಯುಹೆಚ್ಒ ಸಾರ್ವತ್ರಿಕ ಬಳಕೆಯ ವಿರುದ್ಧ ಎಚ್ಚರಿಸಿದೆ. ಪ್ರಾರಂಭಿಕ ಹಂತದ ಸೋಂಕು ಲಕ್ಷಣಗಳಿರುವವರಿಗೆ ಐವರ್ಮೆಕ್ಟಿನ್ ಔಷಧ ಬಳಕೆ ಮಾಡಲು ಹೇಳಲಾಗಿತ್ತಾದರೂ ಆದರೆ ಕೋವಿಡ್-19 ಗೆ ಈ ಔಷಧ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂಬುದಕ್ಕೆ ಯಾವುದೇ ಸ್ಪಷ್ಟ ಪುರಾವೆಗಳು ಇಲ್ಲ ಎಂದು ಹೇಳಲಾಗುತ್ತಿದೆ. 

ಹೊಸ ರೋಗಗಳಿಗೆ ಔಷಧಗಳನ್ನು ನೀಡುವಾಗ ಸುರಕ್ಷತೆ ಹಾಗೂ ಪರಿಣಾಮಕಾರಿತ್ವ ಬಹಳ ಮುಖ್ಯವಾಗುತ್ತದೆ. ಕ್ಲಿನಿಕಲ್ ಟ್ರಯಲ್ ಗಳನ್ನು ಹೊರತುಪಡಿಸಿ ಕೋವಿಡ್-19 ಗೆ ಐವರ್ಮೆಕ್ಟಿನ್ ನೀಡುವುದರ ವಿರುದ್ಧ ಡಬ್ಲ್ಯುಹೆಚ್ಒ ಶಿಫಾರಸು ಮಾಡುತ್ತದೆ ಎಂದು ಸಂಸ್ಥೆಯ ಮುಖ್ಯ ವಿಜ್ಞಾನಿ ಸೌಮ್ಯ ಸ್ವಾಮಿನಾಥನ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT