ಕೋವ್ಯಾಕ್ಸಿನ್ ಲಸಿಕೆ 
ದೇಶ

ನಮ್ಮ ಲಸಿಕೆ ಪೂರೈಕೆ ಬಗ್ಗೆ ಕೆಲ ರಾಜ್ಯಗಳು ದೂರುತ್ತಿರುವುದು ನಿರಾಶಾದಾಯಕ: ಭಾರತ್ ಬಯೋಟೆಕ್

ಕೋವಾಕ್ಸಿನ್ ಲಸಿಕೆ ಪೂರೈಕೆಯ ನಮ್ಮ ಉದ್ದೇಶಗಳ ಬಗ್ಗೆ ಕೆಲವು ರಾಜ್ಯಗಳು ದೂರುತ್ತಿರುವುದು ನಿರಾಶಾದಾಯಕವಾಗಿದೆ ಎಂದು ಲಸಿಕೆ ತಯಾರಕ ಭಾರತ್ ಬಯೋಟೆಕ್ ಕಂಪನಿಯ ಉನ್ನತ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ನವದೆಹಲಿ: ಕೋವಾಕ್ಸಿನ್ ಲಸಿಕೆ ಪೂರೈಕೆಯ ನಮ್ಮ ಉದ್ದೇಶಗಳ ಬಗ್ಗೆ ಕೆಲವು ರಾಜ್ಯಗಳು ದೂರುತ್ತಿರುವುದು ನಿರಾಶಾದಾಯಕವಾಗಿದೆ ಎಂದು ಲಸಿಕೆ ತಯಾರಕ ಭಾರತ್ ಬಯೋಟೆಕ್ ಕಂಪನಿಯ ಉನ್ನತ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಕಂಪನಿಯೂ ಈಗಾಗಲೇ ಮೇ 10 ರಂದು 18 ರಾಜ್ಯಗಳಿಗೆ ಕೋವಾಕ್ಸಿನ್ ಲಾಟ್‌ಗಳನ್ನು ರವಾನಿಸಿದೆ ಎಂದು ಭಾರತ್ ಬಯೋಟೆಕ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ಸುಚಿತ್ರಾ ಎಲ್ಲಾ ಅವರು ಟ್ವೀಟ್‌ ಮಾಡಿದ್ದಾರೆ.

ಸಣ್ಣ ಸಾಗಣೆಯಲ್ಲಿ 18 ರಾಜ್ಯಗಳಿಗೆ ಲಸಿಕೆ ರವಾನಿಸಲಾಗಿದೆ. ಕೆಲವು ರಾಜ್ಯಗಳು ನಮ್ಮ ಉದ್ದೇಶಗಳ ಬಗ್ಗೆ ದೂರುವುದನ್ನು ಕೇಳಿ ನಮ್ಮ ತಂಡಗಳಿಗೆ ಸಾಕಷ್ಟು ನಿರಾಶೆಯಾಗಿದೆ. ನಮ್ಮ 50 ಉದ್ಯೋಗಿಗಳು ಕೋವಿಡ್ ಕಾರಣದಿಂದಾಗಿ ಕೆಲಸದಿಂದ ಹೊರಗುಳಿದಿದ್ದಾರೆ, ಆದರೂ ನಾವು ಸಮರೋಪಾದಿಯಲ್ಲಿ ಸಾಂಕ್ರಾಮಿಕ ಲಾಕ್ ಡೌನ್ ಮಧ್ಯೆಯೂ ದಿನದ 24 ಗಂಟೆ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ ಎಂದು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಹೈದರಾಬಾದ್ ಮೂಲದ ಲಸಿಕೆ ತಯಾರಿಕಾ ಸಂಸ್ಥೆಯು ಆಂಧ್ರಪ್ರದೇಶ, ಕರ್ನಾಟಕ, ಹರಿಯಾಣ, ಒಡಿಶಾ, ಅಸ್ಸಾಂ, ಜಮ್ಮು ಮತ್ತು ಕಾಶ್ಮೀರ, ತಮಿಳುನಾಡು, ಬಿಹಾರ, ಜಾರ್ಖಂಡ್ ಮತ್ತು ದೆಹಲಿ ಸೇರಿದಂತೆ 18 ರಾಜ್ಯಗಳಿಗೆ ಕೋವಾಕ್ಸಿನ್ ಪೂರೈಸುತ್ತಿದೆ.

ಇಂದು ಬೆಳಗ್ಗೆಯಷ್ಟೇ ರಾಷ್ಟ್ರ ರಾಜಧಾನಿಗೆ "ಹೆಚ್ಚುವರಿ" ಕೋವಾಕ್ಸಿನ್ ಡೋಸ್ ನೀಡಲು ಸಾಧ್ಯವಿಲ್ಲ ಎಂದು ಲಸಿಕೆ ತಯಾರಕ ಭಾರತ್ ಬಯೋಟೆಕ್ ದೆಹಲಿ ಸರ್ಕಾರಕ್ಕೆ ತಿಳಿಸಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದರು. ಅಲ್ಲದೆ ಕೇಂದ್ರ ಸರ್ಕಾರ ಕೋವಿಡ್ ಲಸಿಕೆ ಪೂರೈಕೆ ನಿಯಂತ್ರಿಸುತ್ತಿದೆ ಎಂದು ಆರೋಪಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT