ಕೋವ್ಯಾಕ್ಸಿನ್ ಲಸಿಕೆ 
ದೇಶ

ನಮ್ಮ ಲಸಿಕೆ ಪೂರೈಕೆ ಬಗ್ಗೆ ಕೆಲ ರಾಜ್ಯಗಳು ದೂರುತ್ತಿರುವುದು ನಿರಾಶಾದಾಯಕ: ಭಾರತ್ ಬಯೋಟೆಕ್

ಕೋವಾಕ್ಸಿನ್ ಲಸಿಕೆ ಪೂರೈಕೆಯ ನಮ್ಮ ಉದ್ದೇಶಗಳ ಬಗ್ಗೆ ಕೆಲವು ರಾಜ್ಯಗಳು ದೂರುತ್ತಿರುವುದು ನಿರಾಶಾದಾಯಕವಾಗಿದೆ ಎಂದು ಲಸಿಕೆ ತಯಾರಕ ಭಾರತ್ ಬಯೋಟೆಕ್ ಕಂಪನಿಯ ಉನ್ನತ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ನವದೆಹಲಿ: ಕೋವಾಕ್ಸಿನ್ ಲಸಿಕೆ ಪೂರೈಕೆಯ ನಮ್ಮ ಉದ್ದೇಶಗಳ ಬಗ್ಗೆ ಕೆಲವು ರಾಜ್ಯಗಳು ದೂರುತ್ತಿರುವುದು ನಿರಾಶಾದಾಯಕವಾಗಿದೆ ಎಂದು ಲಸಿಕೆ ತಯಾರಕ ಭಾರತ್ ಬಯೋಟೆಕ್ ಕಂಪನಿಯ ಉನ್ನತ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಕಂಪನಿಯೂ ಈಗಾಗಲೇ ಮೇ 10 ರಂದು 18 ರಾಜ್ಯಗಳಿಗೆ ಕೋವಾಕ್ಸಿನ್ ಲಾಟ್‌ಗಳನ್ನು ರವಾನಿಸಿದೆ ಎಂದು ಭಾರತ್ ಬಯೋಟೆಕ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ಸುಚಿತ್ರಾ ಎಲ್ಲಾ ಅವರು ಟ್ವೀಟ್‌ ಮಾಡಿದ್ದಾರೆ.

ಸಣ್ಣ ಸಾಗಣೆಯಲ್ಲಿ 18 ರಾಜ್ಯಗಳಿಗೆ ಲಸಿಕೆ ರವಾನಿಸಲಾಗಿದೆ. ಕೆಲವು ರಾಜ್ಯಗಳು ನಮ್ಮ ಉದ್ದೇಶಗಳ ಬಗ್ಗೆ ದೂರುವುದನ್ನು ಕೇಳಿ ನಮ್ಮ ತಂಡಗಳಿಗೆ ಸಾಕಷ್ಟು ನಿರಾಶೆಯಾಗಿದೆ. ನಮ್ಮ 50 ಉದ್ಯೋಗಿಗಳು ಕೋವಿಡ್ ಕಾರಣದಿಂದಾಗಿ ಕೆಲಸದಿಂದ ಹೊರಗುಳಿದಿದ್ದಾರೆ, ಆದರೂ ನಾವು ಸಮರೋಪಾದಿಯಲ್ಲಿ ಸಾಂಕ್ರಾಮಿಕ ಲಾಕ್ ಡೌನ್ ಮಧ್ಯೆಯೂ ದಿನದ 24 ಗಂಟೆ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ ಎಂದು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಹೈದರಾಬಾದ್ ಮೂಲದ ಲಸಿಕೆ ತಯಾರಿಕಾ ಸಂಸ್ಥೆಯು ಆಂಧ್ರಪ್ರದೇಶ, ಕರ್ನಾಟಕ, ಹರಿಯಾಣ, ಒಡಿಶಾ, ಅಸ್ಸಾಂ, ಜಮ್ಮು ಮತ್ತು ಕಾಶ್ಮೀರ, ತಮಿಳುನಾಡು, ಬಿಹಾರ, ಜಾರ್ಖಂಡ್ ಮತ್ತು ದೆಹಲಿ ಸೇರಿದಂತೆ 18 ರಾಜ್ಯಗಳಿಗೆ ಕೋವಾಕ್ಸಿನ್ ಪೂರೈಸುತ್ತಿದೆ.

ಇಂದು ಬೆಳಗ್ಗೆಯಷ್ಟೇ ರಾಷ್ಟ್ರ ರಾಜಧಾನಿಗೆ "ಹೆಚ್ಚುವರಿ" ಕೋವಾಕ್ಸಿನ್ ಡೋಸ್ ನೀಡಲು ಸಾಧ್ಯವಿಲ್ಲ ಎಂದು ಲಸಿಕೆ ತಯಾರಕ ಭಾರತ್ ಬಯೋಟೆಕ್ ದೆಹಲಿ ಸರ್ಕಾರಕ್ಕೆ ತಿಳಿಸಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದರು. ಅಲ್ಲದೆ ಕೇಂದ್ರ ಸರ್ಕಾರ ಕೋವಿಡ್ ಲಸಿಕೆ ಪೂರೈಕೆ ನಿಯಂತ್ರಿಸುತ್ತಿದೆ ಎಂದು ಆರೋಪಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT