ಸುಪ್ರೀಂ ಕೋರ್ಟ್ 
ದೇಶ

ಸುಪ್ರೀಂ ಕೋರ್ಟ್‌ ಕಲಾಪಗಳ ನೇರ ಪ್ರಸಾರಕ್ಕೆ ಪ್ರಸ್ತಾವ ಗಂಭೀರವಾಗಿ ಪರಿಗಣನೆ: ಸಿಜೆಐ ಎನ್.ವಿ. ರಮಣ

ಸುಪ್ರೀಂ ಕೋರ್ಟ್‌ನಲ್ಲಿ ನಡೆಯುವ ಕಲಾಪಗಳ ನೇರ ಪ್ರಸಾರ ಮಾಡಬೇಕು ಎಂಬ ಪ್ರಸ್ತಾವವನ್ನು ನಾನು ಗಂಭೀರವಾಗಿ ಪರಿಗಣಿಸುತ್ತಿದ್ದೇನೆ ಎಂದು ಸುಪ್ರೀಂಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಎನ್‌.ವಿ.ರಮಣ ಅವರು ಗುರುವಾರ ಹೇಳಿದ್ದಾರೆ.

ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ ನಡೆಯುವ ಕಲಾಪಗಳ ನೇರ ಪ್ರಸಾರ ಮಾಡಬೇಕು ಎಂಬ ಪ್ರಸ್ತಾವವನ್ನು ನಾನು ಗಂಭೀರವಾಗಿ ಪರಿಗಣಿಸುತ್ತಿದ್ದೇನೆ ಎಂದು ಸುಪ್ರೀಂಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಎನ್‌.ವಿ.ರಮಣ ಅವರು ಗುರುವಾರ ಹೇಳಿದ್ದಾರೆ.

ವರ್ಚುವಲ್‌ ಮೂಲಕ ನಡೆಸುವ ಕಲಾಪಗಳನ್ನು ಮಾಧ್ಯಮ ಪ್ರತಿನಿಧಿಗಳೂ ವೀಕ್ಷಿಸಲು ಸಾಧ್ಯವಾಗುವ ಸಲುವಾಗಿ ಅಭಿವೃದ್ಧಿಪಡಿಸಿರುವ ಆ್ಯಪ್‌ ಅನಾವರಣ ಸಮಾರಂಭ ಉದ್ದೇಶಿಸಿ ವರ್ಚುವಲ್‌ ಮೂಲಕ ಮಾತನಾಡಿದ ಸಿಜೆಐ, ಕಲಾಪಗಳ ನೇರ ಪ್ರಸಾರವನ್ನು ಸಂಪೂರ್ಣವಾಗಿ ಕಾರ್ಯರೂಪಕ್ಕೆ ತರುವ ಮುನ್ನ, ಸುಪ್ರೀಂಕೋರ್ಟ್‌ನ ಸಹೋದ್ಯೋಗಿಗಳಲ್ಲಿ ಒಮ್ಮತ ಮೂಡಿಸಬೇಕು. ಈ ನಿಟ್ಟಿನಲ್ಲಿ ಪ್ರಯತ್ನಿಸುವೆ ಎಂದು ಅವರು ಹೇಳಿದರು.

ಇದೇ ವೇಳೆ ತಾವು ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ದಿನಗಳನ್ನು ಮೆಲುಕು ಹಾಕಿದ ಎನ್ ವಿ ರಮಣ ಅವರು, "ನಾನು ಸ್ವಲ್ಪ ಸಮಯದವರೆಗೆ ಪತ್ರಕರ್ತನಾಗಿದ್ದೆ. ಆ ಸಮಯದಲ್ಲಿ ನಮ್ಮಲ್ಲಿ ಕಾರು ಅಥವಾ ಬೈಕು ಇರಲಿಲ್ಲ. ಈವೆಂಟ್‌ ಆಯೋಜಕರಿಗೆ ಸಾರಿಗೆ ವ್ಯವಸ್ಥೆ ಮಾಡದಂತೆ ನಿರ್ದೇಶಿಸಲ್ಪಟ್ಟಿದ್ದರಿಂದ ನಾವು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದೆವು" ಎಂದರು.

ಕೋರ್ಟ್‌ ಕಲಾಪಗಳ ಕುರಿತು ವರದಿ ಮಾಡುವಾಗ ಪತ್ರಕರ್ತರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದು, ಅದು ನನ್ನ ಅರಿವಿಗೆ ಬಂದಿತ್ತು. ಮಾಹಿತಿಗಾಗಿ ಬಹಳಷ್ಟು ಸಂದರ್ಭಗಳಲ್ಲಿ ಅವರು ವಕೀಲರ ಮೇಲೆಯೇ ಅವಲಂಬಿತರಾಗಿರಬೇಕಾಗುತ್ತಿತ್ತು ಎಂದರು.

ಪತ್ರಕರ್ತರು ಕೋರ್ಟ್‌ ಕಲಾಪಗಳಿಗೆ ಹಾಜರಾಗಲು ಅನುಕೂಲವಾಗುವಂಥ ವ್ಯವಸ್ಥೆಯನ್ನು ರೂಪಿಸಬೇಕು ಎಂಬ ಬೇಡಿಕೆ ಆಗಲೇ ಕೇಳಿಬಂದಿದ್ದವು ಎಂದು ಸಿಜೆಐ ಹೇಳಿದರು.

ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಮಾತನಾಡಿ, ಸುಪ್ರೀಂಕೋರ್ಟ್‌ನ ಸಿಬ್ಬಂದಿಯೇ ಈ ಆ್ಯಪ್‌ನ ಅಭಿವೃದ್ಧಿಗೆ ಸಾಕಷ್ಟು
ಶ್ರಮಿಸಿದ್ದಾರೆ. ಈ ಕಾರ್ಯದಲ್ಲಿ ತೊಡಗಿದ್ದ ಆರು ಜನರಿಗೆ ಕೋವಿಡ್‌–19 ದೃಢಪಟ್ಟಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT