ಪ್ರಿಯಾಂಕಾ ಗಾಂಧಿ 
ದೇಶ

'ಇದು ಅಮಾನವೀಯ, ಅಪರಾಧ': ಗಂಗಾ ನದಿಯಲ್ಲಿ ತೇಲುತ್ತಿರುವ ಶವಗಳ ಬಗ್ಗೆ ನ್ಯಾಯಾಂಗ ತನಿಖೆಗೆ ಪ್ರಿಯಾಂಕಾ ಗಾಂಧಿ ಆಗ್ರಹ

ಉತ್ತರ ಪ್ರದೇಶದ ಗಂಗಾ ನದಿಯಲ್ಲಿ ಶಂಕಿತ ಕೋವಿಡ್ ಶವಗಳು ತೇಲಿ ಬರುತ್ತಿರುವುದು ಅಮಾನವೀಯ ಮತ್ತು ಅಪರಾಧ ಎಂದಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು...

ನವದೆಹಲಿ: ಉತ್ತರ ಪ್ರದೇಶದ ಗಂಗಾ ನದಿಯಲ್ಲಿ ಶಂಕಿತ ಕೋವಿಡ್ ಶವಗಳು ತೇಲಿ ಬರುತ್ತಿರುವುದು ಅಮಾನವೀಯ ಮತ್ತು ಅಪರಾಧ ಎಂದಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ಈ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇ ಎಂದು ಗುರುವಾರ ಒತ್ತಾಯಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವುದು ಅಮಾನವೀಯ ಮತ್ತು ಅಪರಾಧ. ಜನ ಊಹಿಸಲಾಗದಷ್ಟು ತೊಂದರೆ ಅನುಭವಿಸುತ್ತಿರುವಾಗ ಉತ್ತರ ಪ್ರದೇಶ ಸರ್ಕಾರ ಮಾತ್ರ ತನ್ನ ಗೌರವ ಹೆಚ್ಚಿಸಿಕೊಳ್ಳುತ್ತಿರುವುದರಲ್ಲಿ ನಿರತವಾಗಿದೆ ಎಂದು ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

"ಈ ಘಟನೆಗಳ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತಕ್ಷಣ ನ್ಯಾಯಾಂಗ ತನಿಖೆ ನಡೆಸಬೇಕು" ಎಂದು ಕಾಂಗ್ರೆಸ್ ನಾಯಕಿ ಟ್ವೀಟರ್ ಮೂಲಕ ಆಗ್ರಹಿಸಿದ್ದಾರೆ.

ಬಲ್ಲಿಯಾದ ಗಂಗಾನದಿಯಲ್ಲಿ ಮತ್ತು ಉತ್ತರ ಪ್ರದೇಶದ ಇತರ ಸ್ಥಳಗಳಲ್ಲಿ ಹಾಗೂ ಬಿಹಾರದಲ್ಲಿ ಶಂಕಿತ ಕೋವಿಡ್ ಶವಗಳು ತೇಲಿ ಬರುತ್ತಿವೆ ಎಂಬ ವರದಿಗಳನ್ನು ಉಲ್ಲೇಖಿಸಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದು, 

"ಬಲ್ಲಿಯಾ ಮತ್ತು ಗಾಜಿಪುರದ ಗಂಗಾದಲ್ಲಿ ಶವಗಳು ತೇಲುತ್ತಿವೆ. ಉನ್ನಾವೊದಲ್ಲಿ ನದಿಯ ದಡದಲ್ಲಿ ಸಾಮೂಹಿಕ ಸಮಾಧಿ ಮಾಡುತ್ತಿರುವ ಬಗ್ಗೆ ವರದಿಗಳು ಬರುತ್ತಿವೆ. ಲಖನೌ, ಗೋರಖ್‌ಪುರ, ಝಾನ್ಸಿ ಮತ್ತು ಕಾನ್ಪುರದಂತಹ ನಗರಗಳಿಂದ ಅಧಿಕೃತ ಸಾವಿನ ಸಂಖ್ಯೆಗಳು ವರದಿಯಾಗಿಲ್ಲ" ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತೊಂದು ಟ್ವೀಟ್ ನಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT