ಅಖಿಲೇಶ್ ಯಾದವ್ 
ದೇಶ

'ನಗಬೇಕೋ ಅಳಬೇಕೋ'? ಕೋವಿಡ್ ತಡೆಯಲು ಸಗಣಿ ಬಳಕೆ ಬಗ್ಗೆ ಅಖಿಲೇಶ್ ಯಾದವ್ ಟ್ವೀಟ್

ಕೋವಿಡ್ ವಿರುದ್ಧ ಪ್ರತಿರೋಧ ಶಕ್ತಿ ಪಡೆಯಲು ಜನರು ದೇಹಕ್ಕೆ ಗೋಮೂತ್ರ ಬೆರೆಸಿ ಸೆಗಣಿ ಮೆತ್ತಿಕೊಂಡಿರುವ ವಿಡಿಯೋ ಬಗ್ಗೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ 'ಟ್ವೀಟ್ ಮಾಡಿದ್ದಾರೆ. 

ದೆಹಲಿ: ಕೋವಿಡ್ ವಿರುದ್ಧ ಪ್ರತಿರೋಧ ಶಕ್ತಿ ಪಡೆಯಲು ಜನರು ದೇಹಕ್ಕೆ ಗೋಮೂತ್ರ ಬೆರೆಸಿ ಸೆಗಣಿ ಮೆತ್ತಿಕೊಂಡಿರುವ ವಿಡಿಯೋ ಬಗ್ಗೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ 'ಟ್ವೀಟ್ ಮಾಡಿದ್ದಾರೆ. 

ಗುಜರಾತ್‌ನ ಅಹಮದಾಬಾದ್‌ನ ವೀಡಿಯೊವೊಂದನ್ನು ಕಾಮೆಂಟ್ ಮಾಡಿ, ಪುರುಷರು ಸೆಗಣಿ ಮತ್ತು ಮೂತ್ರದಲ್ಲಿ ಸಂತೋಷದಿಂದ ಮೀಯಿಸಿಕೊಳ್ಳುತ್ತಿರುವ ವೀಡಿಯೋ ನೋಡಿ ದಿಗ್ಭ್ರಮೆಗೊಂಡು ನಾವು ಅಳಬೇಕೇ ಅಥವಾ ನಗಬೇಕೇ ಎಂದು ಪ್ರಶ್ನಿಸಿದ್ದಾರೆ.

ಶ್ರೀ ಸ್ವಾಮಿನಾರಾಯಣ ಗುರುಕುಲ್ ವಿಶ್ವವಿದ್ಯಾ ಪ್ರತಿಷ್ಠಾನಂ ಎಂಬ ಶಾಲೆಯಲ್ಲಿ ಜನರು ದೇಹಕ್ಕೆ ಸೆಗಣಿ ಮೆತ್ತಿಕೊಂಡಿರುವುದರ ಬಗ್ಗೆ ರಾಯಿಟರ್ಸ್ ಸಂಸ್ಥೆಯ ವರದಿಯ ವಿಡಿಯೋವನ್ನು ಅಖಿಲೇಶ್ ರೀಟ್ವೀಟ್ ಮಾಡಿದ್ದಾರೆ.

ಈ ಶಾಲೆಯಲ್ಲಿ ಕೆಲವರು ವಾರಕ್ಕೊಮ್ಮೆ ಗೋವಿನ ಸಗಣಿ ಮತ್ತು ಮೂತ್ರವನ್ನು ತಮ್ಮ ದೇಹದ ಮೇಲೆ ಹಚ್ಚಿ, ಹಸುಗಳನ್ನು ತಬ್ಬಿಕೊಳ್ಳುತ್ತಾರ, ಯೋಗಾಭ್ಯಾಸ ಮಾಡುತ್ತಾರೆ. ಸುಮಾರು ಒಂದು 12 ಮಂದಿ ಪುರುಷರು ಮೈದಾನದಲ್ಲಿ ಅಂಗಿ ಬಿಚ್ಚಿ ಬಕೆಟ್ ನಲ್ಲಿರುವ ದ್ರವರೂಪದ ಹಸುವಿನ ಸೆಗಣಿಯನ್ನು ಮೈಕೈಗೆ ಹಚ್ಚಿಕೊಳ್ಳುತ್ತಿರುವುದು ವಿಡಿಯೊದಲ್ಲಿದೆ. ಸೆಗಣಿ ಹಚ್ಚಿದ ನಂತರ ವೃತ್ತಾಕಾರದಲ್ಲಿ ನಿಂತು ಎಲ್ಲರೂ ಪ್ರಾರ್ಥನೆ ಮಾಡುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT