ಕೀಟನಾಶಕ ಕಾರ್ಖಾನೆಯಲ್ಲಿ ಬೆಂಕಿ ದುರಂತ 
ದೇಶ

ತಮಿಳು ನಾಡು: ಕಡಲೂರಿನ ಕೀಟನಾಶಕ ಕಾರ್ಖಾನೆಯಲ್ಲಿ ಬೆಂಕಿ ದುರಂತ; ನಾಲ್ವರು ಸಾವು, 15 ಮಂದಿಗೆ ಗಾಯ

ಕೀಟನಾಶಕ ತಯಾರಿಕೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ನಾಲ್ವರು ಮೃತಪಟ್ಟು 15 ಮಂದಿ ಗಾಯಗೊಂಡಿರುವ ಘಟನೆ ತಮಿಳು ನಾಡಿನ ಕಡಲೂರಿನಲ್ಲಿ ಇಂದು ಬೆಳಗ್ಗೆ ನಡೆದಿದೆ.

ಚೆನ್ನೈ: ಕೀಟನಾಶಕ ತಯಾರಿಕೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ನಾಲ್ವರು ಮೃತಪಟ್ಟು 15 ಮಂದಿ ಗಾಯಗೊಂಡಿರುವ ಘಟನೆ ತಮಿಳು ನಾಡಿನ ಕಡಲೂರಿನಲ್ಲಿ ಇಂದು ಬೆಳಗ್ಗೆ ನಡೆದಿದೆ.

ಕಡಲೂರಿನ ಕುಡಿಕಾಡು ಎಂಬಲ್ಲಿ ಸಿಪ್ಕೊಟ್ ಕೈಗಾರಿಕಾ ಎಸ್ಟೇಟ್ ನಲ್ಲಿರುವ ಕೀಟನಾಶಕ ತಯಾರಿಕಾ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದೆ.

ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂತಹ ಬೆಂಕಿ ಅವಘಡದಂತಹ ದುರ್ಘಟನೆಗಳು ನಡೆಯುವುದನ್ನು ತಪ್ಪಿಸದಿದ್ದರೆ ಕಂಪೆನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸಿ ವಿ ಗಣೇಶನ್ ತಿಳಿಸಿದ್ದಾರೆ.

ಮೃತಪಟ್ಟವರಲ್ಲಿ ಮೂವರನ್ನು ರಾಜ್ ಕುಮಾರ್, ಗಣಪತಿ ಮತ್ತು ಸವಿತಾ ಎಂದು ಗುರುತಿಸಲಾಗಿದ್ದು ನಾಲ್ಕನೇ ವ್ಯಕ್ತಿ ಗುರುತು ಪತ್ತೆಯಾಗಿಲ್ಲ. ಗಾಯಗೊಂಡವರನ್ನು ಕಡಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಕಿ ಅವಘಡ ಸಂಭವಿಸುವ ವೇಳೆ ಸುಮಾರು 15 ಮಂದಿ ಕಾರ್ಮಿಕರು ಒಳಗಿದ್ದರು. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸಿದ್ದರಿಂದ ಹೆಚ್ಚಿನ ಅವಘಡ ತಪ್ಪಿಹೋಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT