ಸಂಗ್ರಹ ಚಿತ್ರ 
ದೇಶ

ಕೊರೋನಾ ಮಧ್ಯೆ ಮತ್ತೊಂದು ಟೆನ್ಷನ್: ಮಹಾರಾಷ್ಟ್ರದಲ್ಲಿ ಬ್ಲ್ಯಾಕ್ ಫಂಗಸ್ ಗೆ 52 ಮಂದಿ ಸಾವು!

ಮಹಾಮಾರಿ ಕೋವಿಡ್‌ ಸಾಂಕ್ರಾಮಿಕ ಅಟ್ಟಹಾಸ ತೀವ್ರಗೊಂಡಿರುವ ನಡುವೆಯೇ ಬ್ಲ್ಯಾಕ್‌ ಫಂಗಸ್‌ ಹಾವಳಿ ಉಲ್ಬಣಗೊಳ್ಳುತ್ತಿದೆ. ಮಹಾರಾಷ್ಟ್ರದಲ್ಲಿ ಹೊಸ ರೋಗದ 52 ಮಂದಿ ಬಲಿಯಾಗಿದ್ದಾರೆ. 

ಮುಂಬೈ: ಮಹಾಮಾರಿ ಕೋವಿಡ್‌ ಸಾಂಕ್ರಾಮಿಕ ಅಟ್ಟಹಾಸ ತೀವ್ರಗೊಂಡಿರುವ ನಡುವೆಯೇ ಬ್ಲ್ಯಾಕ್‌ ಫಂಗಸ್‌ ಹಾವಳಿ ಉಲ್ಬಣಗೊಳ್ಳುತ್ತಿದೆ. ಮಹಾರಾಷ್ಟ್ರದಲ್ಲಿ ಹೊಸ ರೋಗದ 52 ಮಂದಿ ಬಲಿಯಾಗಿದ್ದಾರೆ. 

ಹೆಚ್ಚು ಕಾಲ ಆಸ್ಪತ್ರೆಗಳಲ್ಲಿ ಉಳಿಯುವ ಕೋವಿಡ್‌ ಸೋಂಕಿತರು ಹಾಗೂ ಸೋಂಕಿನಿಂದ ಗುಣಮುಖರಾಗಿ ಮಲೀನ ಪರಿಸರದಲ್ಲಿ ವಾಸ ಮಾಡುವ ದುರ್ಬಲ ಕಾಯರಿಗೆ ಫಂಗಸ್‌ ರೋಗ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ. ಮಹಾರಾಷ್ಟ್ರದಲ್ಲಿ ಇಂತಹ ಪ್ರಕರಣಗಳು ಇತ್ತೀಚೆಗೆ ಉಲ್ಬಣಿಸಿದ್ದು, ಈ ವರೆಗೂ 52 ಮಂದಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. 

ಕೊರೋನಾ ಸೋಂಕಿನಿಂದ ಚೇತರಿಸಿಕೊಂಡವರಲ್ಲಿ ಇದು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ರೋಗಿಗಳಲ್ಲಿ ಅತೀವ್ರ ಜ್ವರ, ಕಣ್ಣಿನ ನೋವು, ಮೂಗು ಕಟ್ಟುವುದು, ಕಣ್ಣಿನ ದೃಷ್ಠಿ ಭಾಗಶಃ ನಷ್ಟಗೊಂಡಿರುವ ಲಕ್ಷಣಗಳು ಕಂಡುಬಂದಿವೆ. 

ಪ್ರಸ್ತುತ ಸಾವನ್ನಪ್ಪಿರುವ ಈ 52 ಮಂದಿಯೂ ಕೊರೋನಾ ಸೋಂಕಿಗೊಳಗಾಗಿ ಚೇತರಿಸಿಕೊಂಡವರೇ ಆಗಿದ್ದರೆಂದು ಆಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಈ ನಡುವೆ ಇದೇ ಮೊದಲ ಬಾರಿಗೆ ಮಹಾರಾಷ್ಟ್ರ ಆರೋಗ್ಯ ಸಚಿವಾರ ಬ್ಲ್ಯಾಕ್ ಫಂಗಸ್ ನಿಂದ ಸಾವನ್ನಪ್ಪಿದ್ದವರ ಕುರಿತಂತೆಯು ಪ್ರತ್ಯೇಕವಾಗಿ ಮಾಹಿತಿ ನೀಡಲು ಆರಂಭಿಸಿದೆ. 

ಬುಧವಾರವಷ್ಟೇ ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೋಪೆಯವರು, ರಾಜ್ಯದಲ್ಲಿ ಈ ವರೆಗಲೂ 1,500 ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದೆ. ಕೊರೋನಾ 2ನೇ ಅಲೆ ವೇಳೆ ತೀವ್ರಗೊಂಡಿದೆ ಎಂದು ಹೇಳಿದ್ದಾರೆ. 

ಮ್ಯೂಕೋರ್ಮೈಕೋಸಿಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ತಗುಲಿದವರ ಚಿಕಿತ್ಸೆಗೆ ಬಹುಶಿಸ್ತೀಯ ವಿಧಾನದ ಅಗತ್ಯವಿರುತ್ತದೆ, ಇದರಿಂದ ಆರೋಗ್ಯದ ಮೂಲಸೌಕರ್ಯಗಳ ಮೇಲೆ ಮತ್ತಷ್ಟು ಹೊರೆ ಬೀಳುವ ಸಾಧ್ಯತೆಗಳಿವೆ.

ಪರಿಸ್ಥಿತಿ ನಿಭಾಯಿಸಲು ಈಗಾಗಲೇ 1 ಲಕ್ಷ ಡೋಸ್ ಗಳ ಆಂಫೊಟೆರಿಸಿನ್ ಬಿ ಕಳುಹಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ದೀರ್ಘಕಾಲಿಕ ರೋಗದಿಂದ ಬಳಲುತ್ತಿರುವವರ ಮೇಲೆ ಈದು ಅತ್ಯಂತ ಗಂಭೀರ ಪರಿಣಾಮ ಬೀರುತ್ತಿದೆ ಎಂದು ತೋಪೆ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT