ಶ್ರೀನಿವಾಸ್ ಬಿವಿ 
ದೇಶ

ಜನರಿಗೆ 'ಕೋವಿಡ್ ನೆರವು': ದೆಹಲಿ ಪೊಲೀಸರಿಂದ ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ವಿಚಾರಣೆ

ಕೋವಿಡ್ ಸಮಯದಲ್ಲಿ ಜನರಿಗೆ ನೆರವು ನೀಡುವ ಮೂಲಕ ಗಮನ ಸೆಳೆದಿದ್ದ ಭಾರತೀಯ ಯುವ ಕಾಂಗ್ರೆಸ್(ಐವೈಸಿ)​ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ​ಅವರನ್ನು ಶುಕ್ರವಾರ ದೆಹಲಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ನವದೆಹಲಿ: ಕೋವಿಡ್ ಸಮಯದಲ್ಲಿ ಜನರಿಗೆ ನೆರವು ನೀಡುವ ಮೂಲಕ ಗಮನ ಸೆಳೆದಿದ್ದ ಭಾರತೀಯ ಯುವ ಕಾಂಗ್ರೆಸ್(ಐವೈಸಿ)​ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ​ಅವರನ್ನು ಶುಕ್ರವಾರ ದೆಹಲಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ಇಂದು ಬೆಳಗ್ಗೆ 11.45ರ ಸುಮಾರಿಗೆ ಯುವ ಕಾಂಗ್ರೆಸ್​ ಕಚೇರಿಗೆ ಆಗಮಿಸಿದ ಪೊಲೀಸರು, ನೀವು ಪರಿಹಾರ ಸಾಮಗ್ರಿಗಳನ್ನು ಹೇಗೆ ವಿತರಣೆ ಮಾಡುತ್ತಿದ್ದೀರಿ? ಎಂದು ಪ್ರಶ್ನಿಸಿದರು ಎಂದು ಶ್ರೀನಿವಾಸ್ ಅವರು ಹೇಳಿದ್ದಾರೆ.

ಆದರೆ ದೆಹಲಿ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಶ್ರೀನಿವಾಸ್ ಅವರನ್ನು ವಿಚಾರಣೆ ನಡೆಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಕೋವಿಡ್ ಔಷಧಿಗಳು, ಆಕ್ಸಿಜನ್ ಮತ್ತು ಇತರ ವಸ್ತುಗಳ ವಿತರಣೆಯಲ್ಲಿ ಭಾಗಿಯಾಗಿರುವ ರಾಜಕಾರಣಿಗಳ ಬಗ್ಗೆ ತನಿಖೆ ನಡೆಸುವಂತೆ ಹೈಕೋರ್ಟ್ ನಗರ ಪೊಲೀಸರಿಗೆ ನಿರ್ದೇಶನ ನೀಡಿದೆ ಮತ್ತು ತಪ್ಪು ಮಾಡಿದ್ದರೆ ಎಫ್‌ಐಆರ್ ದಾಖಲಿಸುವಂತೆ ಸೂಚಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶ್ರೀನಿವಾಸ್​ ವಿರುದ್ಧ ಕೋರ್ಟ್​ಗೆ ಪಿಐಎಲ್​ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಶ್ರೀನಿವಾಸ್​ ಹಾಗೂ ಅವರ ತಂಡದ ವಿರುದ್ಧ ಸಲ್ಲಿಕೆ ಆಗಿರುವ ಪಿಐಎಲ್​ನಲ್ಲಿ ಕೋವಿಡ್​ ಸಂಬಂಧಿತ ವಸ್ತುಗಳ ಅಕ್ರಮ ದಾಸ್ತಾನು ಹಾಗೂ ವಿತರಣೆ ಬಗ್ಗೆ ದೂರಲಾಗಿದೆ. ಔಷಧಿಗಳ ಅಕ್ರಮ ವಿತರಣೆಯಲ್ಲಿ ರಾಜಕಾರಣಿಗಳು ಭಾಗಿಯಾಗಿದ್ದಾರೆ ಎಂದು ದೂರಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT