ಕೇರಳ ಮಹಿಳೆಯ ಪಾರ್ಥೀವ ಶರೀರ 
ದೇಶ

ಇಸ್ರೇಲ್ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟಿದ್ದ ಕೇರಳ ಮಹಿಳೆಯ ಪಾರ್ಥೀವ ಶರೀರ ಭಾರತಕ್ಕೆ

ಇಸ್ರೇಲ್-ಪ್ಯಾಲೆಸ್ತೀನ್ ನಡುವೆ ನಡೆದ ಸಂಘರ್ಷದಲ್ಲಿ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟಿದ್ದ ಕೇರಳ ಮೂಲದ ಮಹಿಳೆಯ ಪಾರ್ಥೀವ ಶರೀರವನ್ನು ಭಾರತಕ್ಕೆ ತರಲಾಗಿದೆ.

ನವದೆಹಲಿ: ಇಸ್ರೇಲ್-ಪ್ಯಾಲೆಸ್ತೀನ್ ನಡುವೆ ನಡೆದ ಸಂಘರ್ಷದಲ್ಲಿ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟಿದ್ದ ಕೇರಳ ಮೂಲದ ಮಹಿಳೆಯ ಪಾರ್ಥೀವ ಶರೀರವನ್ನು ಭಾರತಕ್ಕೆ ತರಲಾಗಿದೆ.

ಇಸ್ರೇಲ್ ಮತ್ತು ಪ್ಯಾಲೆಸ್ತೇನ್‌ನ ಹಮಾಸ್ ಬಂಡುಕೋರರ ನಡುವಿನ ಸಂಘರ್ಷದ ನಡುವೆಯೇ ಪ್ಯಾಲೆಸ್ತೇನ್‌ನ ರಾಕೆಟ್ ಅಪ್ಪಳಿಸಿದ ಪರಿಣಾಮ, ಇಸ್ರೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಕೇರಳದ ಮಹಿಳೆ ಸೌಮ್ಯ ಮೃತಪಟ್ಟಿದ್ದರು. 31 ವರ್ಷದ ಸೌಮ್ಯ ಅವರು ಇಸ್ರೇಲ್ ನ ಆಶ್ಕೆಲಾನ್‌ನಲ್ಲಿ ನೆಲೆಸಿದ್ದ ನಿವಾಸದ ಮೇಲೆ  ಪ್ಯಾಲೆಸ್ತೇನ್‌ನ ರಾಕೆಟ್ ಬಿದ್ದಿದೆ. ಸಂಜೆ ವೇಳೆ ಅವರು ಕೇರಳದಲ್ಲಿರುವ ಪತಿ ಸಂತೋಷ್ ಜತೆ ವಿಡಿಯೋ ಕಾಲ್‌ನಲ್ಲಿ ಮಾತನಾಡುವಾಗಲೇ ಈ ಅವಘಡ ಸಂಭವಿಸಿ ಸೌಮ್ಯ ಸಾವನ್ನಪ್ಪಿದ್ದರು.

ಕೇರಳದ ಇಡುಕ್ಕಿ ಜಿಲ್ಲೆಯ ಕೀರಿಥೊಡು ಮೂಲದವರಾದ ಸೌಮ್ಯ, ಕಳೆದ ಏಳು ವರ್ಷಗಳಿಂದ ಇಸ್ರೇಲ್‌ನಲ್ಲಿ ಮನೆಗೆಲಸದವರಾಗಿ ಕೆಲಸ ಮಾಡುತ್ತಿದ್ದರು. ಇದೀಗ ಸೌಮ್ಯ ಅವರ ಪಾರ್ಥೀವ ಶರೀರವನ್ನು ಭಾರತಕ್ಕೆ ತರಲಾಗಿದ್ದು, ಕೇರಳದಲ್ಲಿರುವ ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ ಎಂದು ಕೇಂದ್ರ  ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ.

ಕೇಂದ್ರ ವಿದೇಶಾಂಗ ಇಲಾಖೆಯ ರಾಜ್ಯ ಸಚಿವ ವಿ ಮುರಳೀಧರನ್ ಹಾಗೂ ಇಸ್ರೇಲ್ ರಾಯಭಾರಿ ರೋನಿ ಯೆಡಿಡಿಯಾ ಕ್ಲೈನ್ ಅವರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT