ದೇಶ

ಟೌಕ್ಟೇ ಸೈಕ್ಲೋನ್: ಸಂಕಷ್ಟದಲ್ಲಿರುವ ಜನರಿಗೆ ಸಹಾಯಕ್ಕೆ ಧಾವಿಸುವಂತೆ ಕಾರ್ಯಕರ್ತರಿಗೆ ರಾಹುಲ್ ಸೂಚನೆ

Manjula VN

ನವದೆಹಲಿ: ಟೌಕ್ಟೇ ಚಂಡಮಾರುತ ಆರಂಭವಾಗುತ್ತಿದ್ದು, ಸಂಕಷ್ಟಕ್ಕೆ ಸಿಲುಕಿದ ಜನರಿಗೆ ಸಹಾಯಕ್ಕೆ ಧಾವಿಸುವಂತೆ ಕಾರ್ಯಕರ್ತರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಶನಿವಾರ ಸೂಚನೆ ನೀಡಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕೇರಳ, ಮಹಾರಾಷ್ಟ್ರ, ಗೋವಾ, ತಮಿಳುನಾಡು, ಗುಜರಾತ್ ಹಾಗೂ ಕರ್ನಾಟಕ ರಾಜ್ಯದಲ್ಲಿ ಚಂಡಮಾರುತದ ಎಚ್ಚರಿಕೆಯನ್ನು ನೀಡಲಾಗಿದೆ. ಹೀಗಾಗಿ ಆಗತ್ಯವಿರುವವರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಮಾಡುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ ಮಾಡಿಕೊಂಂಡಿದ್ದಾರೆ. ಅಲ್ಲದೆ, ಸುರಕ್ಷಿತತೆ ಇರುವಂತೆಯೂ ಸೂಚಿಸಿದ್ದಾರೆ. 

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಸೃಷ್ಟಿಯಾದಿರುವ ಟೌಕ್ಟೇ ಚಂಡಮಾರುತ, ಶನಿವಾರ ಗಂಭೀರ ಸ್ವರೂಪ ಪಡೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಸಾಮಾನ್ಯದಿಂದ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ. ಈ ವೇಳೆ ಗಂಟೆಗೆ 150-175 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಹೀಗಾಗಿ ಕರಾವಳಿ ಪ್ರದೇಶಗಳಲ್ಲಿನ ಜನರಿಗೆ ಎಚ್ಚರಿಕೆ ನೀಡಲಾಗಿದೆ. 

SCROLL FOR NEXT