ಗೌತಮ್ ಗಂಭೀರ್ 
ದೇಶ

ಆ್ಯಂಟಿ ವೈರಲ್ ಔಷಧಿ ವಿತರಣೆ: ಬಿಜೆಪಿ ಸಂಸದ ಗಂಭೀರ್ ರಿಂದ ವಿವರಣೆ ಕೋರಿದ ದೆಹಲಿ ಪೊಲೀಸ್

ತಮ್ಮ ಕಚೇರಿಯಲ್ಲಿ ಆ್ಯಂಟಿ ವೈರಲ್ ಔಷಧಿ ವಿತರಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರಿಂದ ದೆಹಲಿ ಪೊಲೀಸರು ವಿವರ ಕೋರಿದ್ದಾರೆ.

ಬೆಂಗಳೂರು: ತಮ್ಮ ಕಚೇರಿಯಲ್ಲಿ ಆ್ಯಂಟಿ ವೈರಲ್ ಔಷಧಿ ವಿತರಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರಿಂದ ದೆಹಲಿ ಪೊಲೀಸರು ವಿವರ ಕೋರಿದ್ದಾರೆ.

ಮೂಲಗಳ ಪ್ರಕಾರ ಗೌತಮ್ ಗಂಭೀರ್ ಅವರ ತಮ್ಮ ಕಚೇರಿಯಲ್ಲಿ ಆಂಟಿವೈರಲ್ ಔಷಧಿ ಫ್ಯಾಬಿಫ್ಲು ಅನ್ನು ಸಂಗ್ರಹಿಸಿ ವಿತರಿಸಿದ್ದಾರೆ ಎಂಬ ವರದಿಗಳ ಮೇರೆಗೆ ದೆಹಲಿ ಪೊಲೀಸರು ಪ್ರತಿಕ್ರಿಯೆ ಕೋರಿದ್ದಾರೆ. ದೆಹಲಿಯಲ್ಲಿ ಕೋವಿಡ್ ಸಾಂಕ್ರಾಮಿಕದಿಂದಾಗಿ ಆಂಟಿವೈರಲ್ ಔಷಧಿ ಫ್ಯಾಬಿಫ್ಲುಗೆ ತೀವ್ರ ಕೊರತೆ ಇದ್ದು,  ಇದರ ಅಕ್ರಮ ಸಂಗ್ರಹಣೆ ಅಥವಾ ದಾಸ್ತಾನಿನ ಕುರಿತು ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಇದೇ ಔಷಧಿಯ ವಿತರಣೆ ಮಾಡಿದ್ದ ಗಂಭೀರ್ ಅವರನ್ನು ಪೊಲೀಸರು ಪ್ರಶ್ನಿಸಿದ್ದಾರೆ.

ಇನ್ನು ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಸಂಸದ ಗೌತಮ್ ಗಂಭೀರ್, 'ನಾವು ಎಲ್ಲಾ ವಿವರಗಳನ್ನು ಒದಗಿಸಿದ್ದೇವೆ. ನಾನು ದೆಹಲಿ ಹಾಗೂ ಅದರ ಜನರಿಗೆ ಯಾವಾಗಲೂ ನನ್ನ ಅತ್ಯುತ್ತಮ ಸಾಮರ್ಥ್ಯದೊಂದಿಗೆ ಸೇವೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಇನ್ನು ಇದಕ್ಕೂ ಮೊದಲು ಶುಕ್ರವಾರ, ದೆಹಲಿ ಪೊಲೀಸ್ ಅಪರಾಧ ವಿಭಾಗದ ಅಧಿಕಾರಿಗಳು ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಅವರನ್ನು ಕೋವಿಡ್ ಪರಿಹಾರ ಕಾರ್ಯಗಳಿಗೆ ಸಂಬಂಧಿಸಿದಂತೆ ಪ್ರಶ್ನಿಸಿದ್ದರು. ಗೌತಮ್ ಗಂಭೀರ್ ಹಾಗೂ ಶ್ರೀನಿವಾಸ್ ಬಿ.ವಿ ಅವರಲ್ಲದೆ ದೆಹಲಿ ಪೊಲೀಸರು ಬಿಜೆಪಿ ವಕ್ತಾರ  ಹರೀಶ್ ಖುರಾನಾ ಅವರನ್ನು ಕೋವಿಡ್-19 ಪರಿಹಾರ ಸಾಮಗ್ರಿಗಳ ವಿತರಣೆಗೆ ಸಂಬಂಧಿಸಿದಂತೆ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT