ಸ್ಟಾಲಿನ್ 
ದೇಶ

ರೆಮ್ಡೆಸಿವಿರ್, ಆಕ್ಸಿಜನ್ ಸಿಲಿಂಡರ್‌ ಸಂಗ್ರಹಿಸುವವರ ವಿರುದ್ಧ ಗೂಂಡಾ ಕಾಯ್ದೆ ಅಡಿ ಕೇಸ್: ತಮಿಳುನಾಡು ಸಿಎಂ ಸ್ಟಾಲಿನ್

ರೆಮ್ಡೆಸಿವಿರ್ ಮತ್ತು ಆಕ್ಸಿಜನ್ ಸಿಲಿಂಡರ್‌ ಗಳನ್ನು ಅಕ್ರಮವಾಗಿ ಸಂಗ್ರಹಿಸಲಾಗುತ್ತಿದೆ ಎಂಬ ವ್ಯಕ್ತಿಗಳ ವರದಿಗಳ ಮಧ್ಯೆ, ರೆಮ್ಡೆಸಿವಿರ್, ಆಕ್ಸಿಜನ್ ಸಿಲಿಂಡರ್‌ಗಳನ್ನು ಸಂಗ್ರಹಿಸಿಟ್ಟುಕೊಂಡವರ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್

ಚೆನ್ನೈ: ರೆಮ್ಡೆಸಿವಿರ್ ಮತ್ತು ಆಕ್ಸಿಜನ್ ಸಿಲಿಂಡರ್‌ ಗಳನ್ನು ಅಕ್ರಮವಾಗಿ ಸಂಗ್ರಹಿಸಲಾಗುತ್ತಿದೆ ಎಂಬ ವ್ಯಕ್ತಿಗಳ ವರದಿಗಳ ಮಧ್ಯೆ, ರೆಮ್ಡೆಸಿವಿರ್, ಆಕ್ಸಿಜನ್ ಸಿಲಿಂಡರ್‌ಗಳನ್ನು ಸಂಗ್ರಹಿಸಿಟ್ಟುಕೊಂಡವರ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್ ದಾಖಲಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಶನಿವಾರ ಪೊಲೀಸ್ ಇಲಾಖೆಗೆ ಆದೇಶಿಸಿದ್ದಾರೆ.

ಈ ಸಂಬಂಧ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿರುವ ಸಿಎಂ ಸ್ಟಾಲಿನ್ ಅವರು, ಕೊರೋನಾ ವೈರಸ್ ಸೋಂಕಿನಿಂದ ಜನರ ಪ್ರಾಣ ರಕ್ಷಿಸುವುದು ರಾಜ್ಯ ಸರ್ಕಾರದ ಮೊದಲ ಜವಾಬ್ದಾರಿಯಾಗಿದ್ದು, ರೆಮ್ಡೆಸಿವಿರ್, ಆಕ್ಸಿಜನ್ ಸಿಲಿಂಡರ್‌ ಸಂಗ್ರಹಿಸಿ ಅದನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರ ವಿರುದ್ಧ ಗೂಂಡಾ ಕಾಯ್ದೆ ಅಡಿ ಕೇಸ್ ದಾಖಲಿಸುವಂತೆ ಸೂಚಿಸಿದ್ದಾರೆ.

ಸರ್ಕಾರದ ಉದ್ದೇಶಕ್ಕೆ ವಿರುದ್ಧವಾಗಿ ವರ್ತಿಸುವವರ ಚಟುವಟಿಕೆಗಳನ್ನು ನಿಯಂತ್ರಿಸುವ ಅವಶ್ಯಕತೆ ಇದೆ ಎಂದಿರುವ ಸಿಎಂ, ದೇಶಾದ್ಯಂತ ಬಿಕ್ಕಟ್ಟನ್ನು ಸೃಷ್ಟಿಸಿರುವ ಕೋವಿಡ್‌ನ ಎರಡನೇ ಅಲೆಯ ಪ್ರಭಾವದಿಂದ ತಮಿಳುನಾಡು ಹೊರತಾಗಿಲ್ಲ ಎಂದು ಹೇಳಿದ್ದಾರೆ.

ಇಂತಹ ಸಮಯದಲ್ಲಿ, ಕೆಲವು ಸಾಮಾಜ ವಿರೋಧಿ ಶಕ್ತಿಗಳು ರೆಮ್‌ಡೆಸಿವಿರ್ ಔಷಧಿ ಸಂಗ್ರಹಿಸಿ ಅದನ್ನು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿವೆ. ಅಂತೆಯೇ, ಆಮ್ಲಜನಕ ಸಿಲಿಂಡರ್‌ಗಳನ್ನು ಅತಿಯಾದ ಬೆಲೆಗೆ ಮಾರಾಟ ಮಾಡುವ ಬಗ್ಗೆ ದೂರುಗಳಿವೆ. ರಾಜ್ಯವು ಸಾಂಕ್ರಾಮಿಕ ರೋಗವನ್ನು ಎದುರಿಸುತ್ತಿರುವಾಗ ಇವು ಗಂಭೀರ ಸ್ವಭಾವದ ಅಪರಾಧಗಳಾಗಿದ್ದು, ರೆಮ್ಡಿಸಿವಿರ್ ಇಂಜೆಕ್ಷನ್ ಮತ್ತು ಆಕ್ಸಿಜನ್ ಸಿಲಿಂಡರ್‌ಗಳನ್ನು ಸಂಗ್ರಹಿಸುವವರನ್ನು ಗೂಂಡಾ ಕಾಯ್ದೆಯಡಿ ಕೇಸ್ ದಾಖಲಿಸಲು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದ್ದೇನೆ ಎಂದು ಸ್ಟಾಲಿನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT