ಮಲೇರ್ಕೋಟ್ಲಾ ವಿಷಯವಾಗಿ ಉತ್ತರ ಪ್ರದೇಶ-ಪಂಜಾಬ್ ಸಿಎಂಗಳ ನಡುವೆ ವಾಗ್ಯುದ್ಧ 
ದೇಶ

ಮಲೇರ್ಕೋಟ್ಲಾ ವಿಷಯವಾಗಿ ಉತ್ತರ ಪ್ರದೇಶ-ಪಂಜಾಬ್ ಸಿಎಂಗಳ ನಡುವೆ ವಾಗ್ಯುದ್ಧ 

ಪಂಜಾಬ್ ಹಾಗೂ ಉತ್ತರ ಪ್ರದೇಶಗಳ ವಿಧಾನಸಭಾ ಚುನಾವಣೆಗಳಿಗೆ ಇನ್ನು 9 ತಿಂಗಳಷ್ಟೇ ಬಾಕಿ ಇದ್ದು, ಪಂಜಾಬ್ ನಲ್ಲಿ ಹೊಸ ಜಿಲ್ಲೆ ಸೃಷ್ಟಿಯ ಸಂಬಂಧ ಇಬ್ಬರೂ ಮುಖ್ಯಮಂತ್ರಿಗಳ ನಡುವೆ ವಾಗ್ಯುದ್ಧ ನಡೆದಿದೆ. 

ಚಂಡೀಗಢ: ಪಂಜಾಬ್ ಹಾಗೂ ಉತ್ತರ ಪ್ರದೇಶಗಳ ವಿಧಾನಸಭಾ ಚುನಾವಣೆಗಳಿಗೆ ಇನ್ನು 9 ತಿಂಗಳಷ್ಟೇ ಬಾಕಿ ಇದ್ದು, ಪಂಜಾಬ್ ನಲ್ಲಿ ಹೊಸ ಜಿಲ್ಲೆ ಸೃಷ್ಟಿಯ ಸಂಬಂಧ ಇಬ್ಬರೂ ಮುಖ್ಯಮಂತ್ರಿಗಳ ನಡುವೆ ವಾಗ್ಯುದ್ಧ ನಡೆದಿದೆ. 

ಈದ್ ದಿನದಂದು ಪಂಜಾಬ್ ಮುಖ್ಯಮಂತ್ರಿ, ರಾಜ್ಯದಲ್ಲಿ ಮುಸ್ಲಿಂ ಬಾಹುಳ್ಯ ಹೆಚ್ಚಿರುವ ಮಲೇರ್ಕೋಟ್ಲಾ ಪ್ರದೇಶವನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸಿದ್ದರು. 

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಸೈದ್ಧಾಂತಿಕ ಅಥವಾ ಧಾರ್ಮಿಕ ಆಧಾರದಲ್ಲಿ ತಾರತಮ್ಯ ಮಾಡುವುದು ಸಂವಿಧಾನದ ಮೂಲಭೂತ ಚೈತನ್ಯಕ್ಕೆ ವಿರುದ್ಧವಾದುದ್ದಾಗಿದ್ದು, ಮಲೇರ್ಕೋಟ್ಲಾವನ್ನು ಹೊಸ ಜಿಲ್ಲೆಯನ್ನಾಗಿ ಘೋಷಣೆ ಮಾಡಿರುವುದು ಇಂಥಹದ್ದೇ ತಾರತಮ್ಯಕ್ಕೆ ಹಿಡಿದ ಕೈಗನ್ನಡಿ  ಎಂದು ಹೇಳಿದ್ದಾರೆ. 

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅಮರಿಂದರ್ ಸಿಂಗ್, " ಯೋಗಿ ಆದತ್ಯನಾಥ್ ಪಂಜಾಬ್ ನಲ್ಲಿ ಕೋಮುಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಪಂಜಾಬ್ ನ ಗುಣಲಕ್ಷಣಗಳ ಬಗ್ಗೆ ಯೋಗಿ ಆದತ್ಯನಾಥ್ ಅವರಿಗೇನು ಗೊತ್ತು? ಅಥವಾ ಮಲೇರ್ಕೋಟ್ಲಾದ ಬಗ್ಗೆ ಆದಿತ್ಯನಾಥ್ ಏನು ಬಲ್ಲರು?  ಎಂದು ಅಮರಿಂದರ್ ಸಿಂಗ್ ಪ್ರಶ್ನಿಸಿದ್ದಾರೆ. 

ಬಿಜೆಪಿಯ ಕೋಮು ವಿಭಜಕ ರಾಜಕಾರಣ ಇಡೀ ಪ್ರಪಂಚಕ್ಕೇ ತಿಳಿದಿದೆ. ಪ್ರಮುಖವಾಗಿ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅವರ ಸರ್ಕಾರದ ಕೋಮು ವಿಭಜಕ ರಾಜಕಾರಣ ತಿಳಿದಿದೆ ಎಂದು ಅಮರಿಂದರ್ ಸಿಂಗ್ ತಿರುಗೇಟು ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT