ಸಂಗ್ರಹ ಚಿತ್ರ 
ದೇಶ

ಕೋವಿಡ್-19 ನಿಂದ ಗುಣವಾಗಲು ಸೀಮೆಎಣ್ಣೆ ಕುಡಿದ ವ್ಯಕ್ತಿ ಸಾವು!

ಕೊರೋನಾದಿಂದ ಗುಣಮುಖವಾಗುವ ಇಚ್ಚೆಯಿಂದ ಸೀಮೆಎಣ್ಣೆ ಸೇವಿಸಿದ ವ್ಯಕ್ತಿಯೊಬ್ಬ ಮೃತಪಟ್ಟಿರುವ ವಿಲಕ್ಷಣ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಭೋಪಾಲ್: ಕೊರೋನಾದಿಂದ ಗುಣಮುಖವಾಗುವ ಇಚ್ಚೆಯಿಂದ ಸೀಮೆಎಣ್ಣೆ ಸೇವಿಸಿದ ವ್ಯಕ್ತಿಯೊಬ್ಬ ಮೃತಪಟ್ಟಿರುವ ವಿಲಕ್ಷಣ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮೃತನನ್ನು ಮಹೇಂದ್ರ ಎಂದು ಗುರುತಿಸಲಾಗಿದ್ದು ಈತನಿಗೆ ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡಿತ್ತು. ಆದರೆ ತನಗೆ ಕೊರೋನಾ ಇದೆ ಎಂದು ಭಾವಿಸಿದ ಆತ ಸೀಮೆಎಣ್ಣೆ ಸೇವಿಸಿದರೆ ಕೊರೋನಾದಿಂದ ಗುಣವಾಗಬಹುದು ಎಂದು ನಂಬಿದ್ದಾನೆ. ಅದಕ್ಕಾಗಿ ಅದನ್ನು ಸೇವಿಸಿದ ಪರಿಣಾಮ ಸಾವನ್ನಪ್ಪಿದ್ದಾನೆ.

ಆದರೆ ಮೃತ ಮಹೇಂದ್ರ ಅವರ ಕೊರೋನಾ ವರದಿ ನೆಗೆಟಿವ್ ಬಂದಿದೆ.

ಪೊಲೀಸರ ಪ್ರಕಾರ, ಮೃತ ಮಹೇಂದ್ರ ವೃತ್ತಿಯಲ್ಲಿ ದರ್ಜಿಯಾಗಿದ್ದ. ಅವನು ತನ್ನ ಕುಟುಂಬದೊಂದಿಗೆ ಭೋಪಾಲ್‌ನ ಶಿವನಗರ ಹಿನೋತಿಯಾ  ಪ್ರದೇಶದಲ್ಲಿ ವಾಸಿಸುತ್ತಿದ್ದ. ಮಹೇಂದ್ರ ತನಗೆ ತಾನೇ ಕೊರೋನಾ ರೋಗವಿದೆ ಎಂದು ಭಾವಿಸಿದ್ದ. ಸೀಮೆಎಣ್ಣೆ ಕುಡಿಯುವುದರಿಂದ ವೈರಸ್ ಅನ್ನು ನಾಶಪಡಿಸಬಹುದು ಎಂದು ಆತನಿಗೆ ನಂಬಿಕೆ ಇತ್ತು ಎಂದು  ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮಹೇಂದ್ರ ಬುಧವಾರ ರಾತ್ರಿ 9 ಗಂಟೆಗೆ ಸೀಮೆಎಣ್ಣೆ ಸೇವಿಸಿದ್ದ. 

ಆದಾಗ್ಯೂ, ಮಹೇಂದ್ರ ಆರೋಗ್ಯ ಕೆಟ್ಟ ನಂತರ ಅವನ ಕುಟುಂಬ ಅವನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಬೆಡ್ ಸಿಕ್ಕದೆ ಆಸ್ಪತ್ರೆ ಆಡಳಿತವು ಅವನನ್ನು ದಾಖಲಿಸಿಕೊಳ್ಳಲು ನಿರಾಕರಿಸಿದೆ. ಆ ಬಳಿಕ ಕುಟುಂಬ ಅವನನ್ನು ಹಮೀದಿಯಾ ಆಸ್ಪತ್ರೆಗೆ ಸಾಗಿಸಿದೆ.

ಮಾಧ್ಯಮ ವರದಿಗಳ ಪ್ರಕಾರ, “ಸುಮಾರು ಎರಡು ದಿನಗಳ ಹಿಂದೆ, ಅಹ್ಸೋಕಾ ಗಾರ್ಡನ್‌ನ ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಲಭ್ಯವಿದೆ ಎಂದು ಅವನ ಕುಟುಂಬ ಸದಸ್ಯರಿಗೆ ತಿಳಿಸಿದಾಗ, ಅವರು  ಅವನನ್ನು ಅಲ್ಲಿಗೆ ಸ್ಥಳಾಂತರಿಸಿದರು. ವೈದ್ಯರು ಶನಿವಾರ ಮಹೇಂದ್ರ ಸಾವನ್ನಪ್ಪಿದ್ದಾಗಿ ಘೋಷಿಸಿದರು”.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT