ಸಾಂದರ್ಭಿಕ ಚಿತ್ರ 
ದೇಶ

ತೌಕ್ತೆ ಚಂಡಮಾರುತ: 'ಮಹಾ' ಪರಿಸ್ಥಿತಿ ಪರಿಶೀಲಿಸಿದ ಉದ್ಧವ್ ಠಾಕ್ರೆ, 12 ಸಾವಿರ ಜನರ ಸ್ಥಳಾಂತರ

ಮಹಾರಾಷ್ಟ್ರದಲ್ಲೂ ತೌಕ್ತೆ ಚಂಡಮಾರುತ ದೊಡ್ಡ ಅವಾಂತರ ಸೃಷ್ಟಿಸಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಸೋಮವಾರ ಮುಂಬೈ, ಥಾಣೆ ಮತ್ತು ಇತರೆ ಕರಾವಳಿ ಪ್ರದೇಶಗಳಲ್ಲಿ ಪರಿಸ್ಥಿತಿ ಪರಿಶೀಲಿಸಿದರು. 

ಮುಂಬೈ: ಮಹಾರಾಷ್ಟ್ರದಲ್ಲೂ ತೌಕ್ತೆ ಚಂಡಮಾರುತ ದೊಡ್ಡ ಅವಾಂತರ ಸೃಷ್ಟಿಸಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಸೋಮವಾರ ಮುಂಬೈ, ಥಾಣೆ ಮತ್ತು ಇತರೆ ಕರಾವಳಿ ಪ್ರದೇಶಗಳಲ್ಲಿ ಪರಿಸ್ಥಿತಿ ಪರಿಶೀಲಿಸಿದರು. 

ಅಧಿಕೃತ ಹೇಳಿಕೆಯ ಪ್ರಕಾರ, ರಾಯಗಡ್ ದಲ್ಲಿ 3380 ರತ್ನಗಿರಿ ಜಿಲ್ಲೆಯಲ್ಲಿ 3896 ಹಾಗೂ ಸಿಂಧುದುರ್ಗ್ ದಲ್ಲಿ 144 ಮಂದಿ ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ವಾಸಿಸುವ 12,420 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಮುಂಬೈ, ಥಾಣೆ ಮತ್ತು ನೆರೆಯ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಠಾಕ್ರೆ ಪರಿಶೀಲಿಸಿದರು ಮತ್ತು ಚಂಡಮಾರುತದಿಂದಾಗಿ ಈ ಪ್ರದೇಶದ ಕೋವಿಡ್ ರೋಗಿಗಳ ಚಿಕಿತ್ಸೆಗೆ ಪರಿಣಾಮ ಬೀರದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಯಗಡ್ ಜಿಲ್ಲೆಗೆ ರೆಡ್ ಅಲರ್ಟ್ ನೀಡಲಾಗಿದ್ದು, ಮುಂಬೈ, ಥಾಣೆ ಮತ್ತು ಪಾಲ್ಘರ್ ಗೆ ಕಿತ್ತಳೆ ಎಚ್ಚರಿಕೆ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಏತನ್ಮಧ್ಯೆ, ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ವಿಪತ್ತು ನಿರ್ವಹಣಾ ಕೋಶಕ್ಕೆ ಭೇಟಿ ನೀಡಿ, ಪರಿಹಾರ ಕಾರ್ಯಗಳ ಸಂಗ್ರಹವನ್ನು ಪರಿಶೀಲಿಸಿದರು.

ಅಲ್ಲದೆ ರಾಜ್ಯದ ಎಲ್ಲಾ ಕರಾವಳಿ ಜಿಲ್ಲೆಗಳ ಆಡಳಿತ ಜಾಗರೂಕರಾಗಿರವಂತೆ ಸೂಚಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಎಲ್ಲರ ಹುಬ್ಬೇರಿಸಿದ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT