ಸಾಂದರ್ಭಿಕ ಚಿತ್ರ 
ದೇಶ

ತೌಕ್ತೆ ಚಂಡಮಾರುತ: 'ಮಹಾ' ಪರಿಸ್ಥಿತಿ ಪರಿಶೀಲಿಸಿದ ಉದ್ಧವ್ ಠಾಕ್ರೆ, 12 ಸಾವಿರ ಜನರ ಸ್ಥಳಾಂತರ

ಮಹಾರಾಷ್ಟ್ರದಲ್ಲೂ ತೌಕ್ತೆ ಚಂಡಮಾರುತ ದೊಡ್ಡ ಅವಾಂತರ ಸೃಷ್ಟಿಸಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಸೋಮವಾರ ಮುಂಬೈ, ಥಾಣೆ ಮತ್ತು ಇತರೆ ಕರಾವಳಿ ಪ್ರದೇಶಗಳಲ್ಲಿ ಪರಿಸ್ಥಿತಿ ಪರಿಶೀಲಿಸಿದರು. 

ಮುಂಬೈ: ಮಹಾರಾಷ್ಟ್ರದಲ್ಲೂ ತೌಕ್ತೆ ಚಂಡಮಾರುತ ದೊಡ್ಡ ಅವಾಂತರ ಸೃಷ್ಟಿಸಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಸೋಮವಾರ ಮುಂಬೈ, ಥಾಣೆ ಮತ್ತು ಇತರೆ ಕರಾವಳಿ ಪ್ರದೇಶಗಳಲ್ಲಿ ಪರಿಸ್ಥಿತಿ ಪರಿಶೀಲಿಸಿದರು. 

ಅಧಿಕೃತ ಹೇಳಿಕೆಯ ಪ್ರಕಾರ, ರಾಯಗಡ್ ದಲ್ಲಿ 3380 ರತ್ನಗಿರಿ ಜಿಲ್ಲೆಯಲ್ಲಿ 3896 ಹಾಗೂ ಸಿಂಧುದುರ್ಗ್ ದಲ್ಲಿ 144 ಮಂದಿ ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ವಾಸಿಸುವ 12,420 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಮುಂಬೈ, ಥಾಣೆ ಮತ್ತು ನೆರೆಯ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಠಾಕ್ರೆ ಪರಿಶೀಲಿಸಿದರು ಮತ್ತು ಚಂಡಮಾರುತದಿಂದಾಗಿ ಈ ಪ್ರದೇಶದ ಕೋವಿಡ್ ರೋಗಿಗಳ ಚಿಕಿತ್ಸೆಗೆ ಪರಿಣಾಮ ಬೀರದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಯಗಡ್ ಜಿಲ್ಲೆಗೆ ರೆಡ್ ಅಲರ್ಟ್ ನೀಡಲಾಗಿದ್ದು, ಮುಂಬೈ, ಥಾಣೆ ಮತ್ತು ಪಾಲ್ಘರ್ ಗೆ ಕಿತ್ತಳೆ ಎಚ್ಚರಿಕೆ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಏತನ್ಮಧ್ಯೆ, ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ವಿಪತ್ತು ನಿರ್ವಹಣಾ ಕೋಶಕ್ಕೆ ಭೇಟಿ ನೀಡಿ, ಪರಿಹಾರ ಕಾರ್ಯಗಳ ಸಂಗ್ರಹವನ್ನು ಪರಿಶೀಲಿಸಿದರು.

ಅಲ್ಲದೆ ರಾಜ್ಯದ ಎಲ್ಲಾ ಕರಾವಳಿ ಜಿಲ್ಲೆಗಳ ಆಡಳಿತ ಜಾಗರೂಕರಾಗಿರವಂತೆ ಸೂಚಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್ ದೇಶಗಳ ಯಾವುದೇ ಬಂದರು ಸುರಕ್ಷಿತವಲ್ಲ; ಅಮೆರಿಕದ ಕ್ರಮ "ಕಡಲ್ಗಳ್ಳತನ"ಕ್ಕೆ ಸಮ: ಇರಾನ್ ಖಡಕ್ ವಾರ್ನಿಂಗ್

LPG Crisis: ಹೃದಯ ಶ್ರೀಮಂತಿಕೆ ಮೆರೆದ ಧ್ರುವ ಸರ್ಜಾ; ಆಟೋ ಚಾಲಕರಿಗೆ 25 ಲಕ್ಷ ರೂ. ನೆರವು - ಸರ್ಕಾರಕ್ಕೆ ಆಕ್ಷನ್‌ ಪ್ರಿನ್ಸ್‌ ಹೇಳಿದ್ದೇನು?

West Asia War: ಇರಾನ್‌ಗೆ ಮಿಲಿಟರಿ ಬೆಂಬಲ ನೀಡಿದರೆ ಶೇ 50ರಷ್ಟು ಸುಂಕ; ಚೀನಾಗೆ ಡೊನಾಲ್ಡ್ ಟ್ರಂಪ್ ಬೆದರಿಕೆ

SIR ಗೆ ಆಕ್ಷೇಪ; ಪಶ್ಚಿಮ ಬಂಗಾಳ ಚುನಾವಣೆ ರದ್ದತಿಗೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್; ವಿರೋಧಿಗಳಿಗೆ ತೀವ್ರ ಹಿನ್ನಡೆ!

ಥಾಣೆ ಬಳಿ ಕಾಂಕ್ರೀಟ್ ಮಿಕ್ಸರ್ ಲಾರಿ - ವ್ಯಾನ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ 11 ಮಂದಿ ಸಾವು

SCROLL FOR NEXT