ಇಂದು ದೆಹಲಿಯಲ್ಲಿ ಔಷಧ ಬಿಡುಗಡೆ ಮಾಡಿದ ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್ ಮತ್ತು ಡಾ ಹರ್ಷವರ್ಧನ್ 
ದೇಶ

ಡಿಆರ್ ಡಿಒ ಅಭಿವೃದ್ಧಿಪಡಿಸಿರುವ 2ಡಯಾಕ್ಸಿ-ಡಿ-ಗ್ಲೂಕೋಸ್ ಔಷಧಿ ಬಿಡುಗಡೆ: ಕೊರೋನಾ ವಿರುದ್ಧ ಪರಿಣಾಮಕಾರಿ ಎಂದ ಕೇಂದ್ರ ಸಚಿವರು

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ ಡಿಒ) ಅಭಿವೃದ್ಧಿಪಡಿಸಿರುವ ಕೋವಿಡ್ ವಿರುದ್ಧ ರೋಗಿಗಳಿಗೆ ನೀಡುವ ಔಷಧಿ 2ಡಯಾಕ್ಸಿ-ಡಿ-ಗ್ಲೂಕೋಸ್ ನ್ನು ಸೋಮವಾರ ದೆಹಲಿಯಲ್ಲಿ ಆರೋಗ್ಯ ಸಚಿವ ಡಾ ಹರ್ಷವರ್ಧನ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬಿಡುಗಡೆ ಮಾಡಿದರು.

ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ ಡಿಒ) ಅಭಿವೃದ್ಧಿಪಡಿಸಿರುವ ಕೋವಿಡ್ ವಿರುದ್ಧ ರೋಗಿಗಳಿಗೆ ನೀಡುವ ಔಷಧಿ 2ಡಯಾಕ್ಸಿ-ಡಿ-ಗ್ಲೂಕೋಸ್ ನ್ನು ಸೋಮವಾರ ದೆಹಲಿಯಲ್ಲಿ ಆರೋಗ್ಯ ಸಚಿವ ಡಾ ಹರ್ಷವರ್ಧನ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬಿಡುಗಡೆ ಮಾಡಿದರು.

ಡಿಆರ್ ಡಿಒ ಅವರ ನೆರವಿನಿಂದ, ರಕ್ಷಣಾ ಸಚಿವರ ಸಹಕಾರದಿಂದ ಮೊದಲ ದೇಶೀಯ ಸಂಸೋಧನಾ ಆಧಾರಿತ ಔಷಧಿಯನ್ನು ಕೋವಿಡ್ ವಿರುದ್ಧ ಚಿಕಿತ್ಸೆ ನೀಡಲು ಅಭಿವೃದ್ಧಿಪಡಿಸಲಾಗಿದೆ. ಕೋವಿಡ್ ಸೋಂಕಿನಿಂದ ಶೀಘ್ರ ಗುಣಮುಖ ಹೊಂದಲು ಮತ್ತು ಆಕ್ಸಿಜನ್ ಮೇಲೆ ಹೆಚ್ಚು ಅವಲಂಬನೆಯನ್ನು ಈ ಔಷಧಿ ಕಡಿಮೆ ಮಾಡಲಿದೆ ಎಂದು ಆರೋಗ್ಯ ಸಚಿವ ಡಾ ಹರ್ಷವರ್ಧನ್ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೋವಿಡ್ ಎರಡನೇ ಅಲೆ ಎದ್ದ ನಂತರ ನಾವು ಸಂಕಷ್ಟದಲ್ಲಿದ್ದೇವೆ,ಕಳೆದೊಂದು ವರ್ಷದಿಂದ ಸಾಕಾಗಿ ಹೋಗಿದೆ. ಆದರೂ ನಮ್ಮ ಹೋರಾಟ ಮುಂದುವರಿಯಲಿದೆ, ಕೋವಿಡ್ ವಿರುದ್ಧ ಹೋರಾಡಿ ಖಂಡಿತಾ ಗೆದ್ದು ಬರುತ್ತೇವೆ. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಆಕ್ಸಿಜನ್ ಉತ್ಪಾದನೆಯನ್ನು ಸಾಮೂಹಿಕ ಪ್ರಯತ್ನ ಮೂಲಕ ಬಗೆಹರಿಸಲಾಗುತ್ತಿದೆ. ಈಗ ಔಷಧಿಯ ಕೊರತೆ ಕೂಡ ಅಷ್ಟೊಂದು ಇಲ್ಲ ಎಂದು ಹೇಳಿದರು.

ಡಿಆರ್ ಡಿಒ ಅಭಿವೃದ್ಧಿಪಡಿಸಿರುವ 2ಡಯಾಕ್ಸಿ-ಡಿ-ಗ್ಲೂಕೋಸ್ ಔಷಧಿ ಕೋವಿಡ್ ವಿರುದ್ಧ ಸೆಣಸಾಡಲು ಬಹಳ ಉಪಕಾರಿಯಾಗಲಿದ್ದು ಆಸ್ಪತ್ರೆಗಳಲ್ಲಿ ದಾಖಲಾಗಿರುವ ರೋಗಿಗಳ ಚಿಕಿತ್ಸೆಗೆ ಮತ್ತು ರೋಗಿಗಳು ಹೆಚ್ಚು ಆಕ್ಸಿಜನ್ ಮೇಲೆ ಅವಲಂಬಿತವಾಗುವುದನ್ನು ಇದು ತಪ್ಪಿಸಬಹುದು. ಪಿಎಂ-ಕೇರ್ಸ್ ಫಂಡ್ ನಡಿ 322.5 ಕೋಟಿ ರೂಪಾಯಿ ವೆಚ್ಚದಲ್ಲಿ 1.5 ಲಕ್ಷ ಘಟಕಗಳನ್ನು ಸಂಗ್ರಹಿಸಲಾಗುತ್ತದೆ.

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಿಂದ ಅಭಿವೃದ್ಧಿಪಡಿಸಲಾಗಿರುವ 2ಡಯಾಕ್ಸಿ-ಡಿ-ಗ್ಲೂಕೋಸ್ ಔಷಧ ತೆಗೆದುಕೊಂಡರೆ ಸೋಂಕಿತರ ಆಕ್ಸಿಜನ್ ಬಳಕೆ ಪ್ರಮಾಣ ತಗ್ಗಲಿದೆ ಎಂದು ಡಿಆರ್‌ಡಿಒ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ. ಸದ್ಯದಲ್ಲೇ ರಾಜ್ಯದಲ್ಲೂ ಇದನ್ನು ಪರಿಚಯಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ: ಕೆ. ಸುಧಾಕರ್ ಈ ಹಿಂದೆ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ನಾಳೆ ವಿಜಯ್ ಪ್ರಮಾಣವಚನ ಡೌಟ್; ಮತ್ತೆ ಸಂಖ್ಯಾಬಲ ಇಲ್ಲ ಎಂದ ಗವರ್ನರ್!

Google Trends ನಲ್ಲಿಯೂ ವಿಜಯ್- TVK ಅರ್ಭಟ! ಮತಗಳು, ಗೆಲುವಿನ ಬಗ್ಗೆ ಹೆಚ್ಚಿನ ಹುಡುಕಾಟ

IPL 2026: ಫಿನ್ ಅಲೆನ್ ಶತಕದ ಅಬ್ಬರ, ಡೆಲ್ಲಿ ವಿರುದ್ಧ KKR ಗೆ 8 ವಿಕೆಟ್ ಗಳ ಭರ್ಜರಿ ಜಯ!

ಹೌದು 2025 ರ ಯುದ್ಧದಲ್ಲಿ ಪಾಕಿಸ್ತಾನಕ್ಕೆ ಸಹಾಯ ಮಾಡಿದ್ವಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ 1 ವರ್ಷದ ಬಳಿಕ ಚೀನಾ ಒಪ್ಪಿಗೆ!

ಕಾಂಗ್ರೆಸ್‌ನ್ನು ಕಿತ್ತು ಹಾಕದೇ ಯುವಕರಿಗೆ ಉದ್ಯೋಗವಿಲ್ಲ! ನಿಖಿಲ್ ಕುಮಾರಸ್ವಾಮಿ ಕಿಡಿ

SCROLL FOR NEXT