ವೈರಾಣು ಶಾಸ್ತ್ರಜ್ಞ ಶಾಹಿದ್ ಜಮೀಲ್ 
ದೇಶ

ಕೇಂದ್ರದ ಕೋವಿಡ್-19 ಜಿನೋಮ್ ಅಧ್ಯಯನ ಯೋಜನೆಯ ಸಲಹೆಗಾರ ಹುದ್ದೆಗೆ ಹಿರಿಯ ವೈರಾಣು ಶಾಸ್ತ್ರಜ್ಞ ಶಾಹಿದ್ ಜಮೀಲ್ ರಾಜೀನಾಮೆ!

ಸೂಕ್ಷ್ಮರೋಗಾಣು ಅಥವಾ ವೈರಾಣು ಶಾಸ್ತ್ರಜ್ಞ ಶಾಹಿದ್ ಜಮೀಲ್, ಕೇಂದ್ರ ಸರ್ಕಾರದ ಕೋವಿಡ್-19 ಜಿನೋಮ್ ಅಧ್ಯಯನ ಅಥವಾ ಅದರ ಕುರಿತು ನಿಗಾ ವಹಿಸುವ ಯೋಜನೆಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನವದೆಹಲಿ: ಸೂಕ್ಷ್ಮರೋಗಾಣು ಅಥವಾ ವೈರಾಣು ಶಾಸ್ತ್ರಜ್ಞ ಶಾಹಿದ್ ಜಮೀಲ್, ಕೇಂದ್ರ ಸರ್ಕಾರದ ಕೋವಿಡ್-19 ಜಿನೋಮ್ ಅಧ್ಯಯನ ಅಥವಾ ಅದರ ಕುರಿತು ನಿಗಾ ವಹಿಸುವ ಯೋಜನೆಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕೋವಿಡ್-19 ಏರಿಕೆಯಾಗುತ್ತಿರುವ ಸಂದರ್ಭದಲ್ಲಿ ವೈರಾಣು ಶಾಸ್ತ್ರಜ್ಞ ಶಾಹಿದ್ ಜಮೀಲ್ ರಾಜೀನಾಮೆ ನೀಡಿರುವುದು ಕೇಂದ್ರಕ್ಕೆ ತೀವ್ರ ಮುಜುಗರ ಉಂಟುಮಾಡಿದೆ. ಕೋವಿಡ್-19 ವೈರಾಣುಗಳ ವಂಶವಾಹಿ ಹಾಗೂ ರೂಪಾಂತರಗಳನ್ನು ಅಧ್ಯಯನ ಮಾಡುವ ಸಂಬಂಧ ಕಳೆದ ವರ್ಷ ಡಿಸೆಂಬರ್ ನಲ್ಲಿ ಕೇಂದ್ರ ಸರ್ಕಾರ ಇಂಡಿಯನ್ SARS-CoV-2 ಜಿನೋಮಿಕ್ಸ್ ಒಕ್ಕೂಟ (INSACOG)ವನ್ನು ರಚಿಸಿತ್ತು. 

ಅಶೋಕಾ ವಿಶ್ವವಿದ್ಯಾನಿಲಯದಲ್ಲಿ ತ್ರಿವೇದಿ ಸ್ಕೂಲ್ ಆಫ್ ಬಯೋಸೈನ್ಸಸ್ ನ ನಿರ್ದೇಶಕರೂ ಆಗಿರುವ ಜಮೀಲ್ ಸಲಹೆಗಾರರ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಆದರೆ ಕೇಂದ್ರದ ಕೋವಿಡ್-19 ನೀತಿಗಳನ್ನು ಅವರು ತೀವ್ರವಾಗಿ ಟೀಕಿಸಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ. 

ನ್ಯೂಯಾರ್ಕ್ ಟೈಮ್ಸ್ ನಲ್ಲಿ ಇತ್ತೀಚೆಗಷ್ಟೇ ಲೇಖನ ಬರೆದಿದ್ದ ಅವರು, ಪುರಾವೆ ಆಧಾರಿತ ನೀತಿ ತಯಾರಿಕೆಗೆ ಭಾರತದಲ್ಲಿನ ವಿಜ್ಞಾನಿಗಳು ಮೊಂಡುತನದ ಪ್ರತಿಕ್ರಿಯೆಗಳನ್ನು ಪಡೆಯುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ನೀತಿಗಳನ್ನು ಟೀಕಿಸಿದ್ದರು. 

ಹೆಪಿಟೈಟಿಸ್ ಇ ವೈರಾಣುವಿನ ತಮ್ಮ ಅಧ್ಯಯನಕ್ಕೆ ಖ್ಯಾತಿ ಪಡೆದಿರುವ ಜಮೀಲ್, ತಾವು ರಾಜೀನಾಮೆ ನೀಡುತ್ತಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಸ್ಪಷ್ಟಪಡಿಸಿದ್ದಾರೆ, ಆದರೆ ಹೆಚ್ಚಿನ ಮಾಹಿತಿಯನ್ನು ಹಂಚಿಕೊಳ್ಳುವುದಕ್ಕೆ ನಿರಾಕರಿಸಿದ್ದಾರೆ. ಈ ಬೆಳವಣಿಗೆ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT