ಸುವೇಂದು ಅಧಿಕಾರಿ 
ದೇಶ

ನಾರದ ಪ್ರಕರಣ: ಸುವೇಂದು ಅಧಿಕಾರಿ, ಇತರ 3 ಸಂಸದರ ವಿರುದ್ಧ ಕ್ರಮಕ್ಕಾಗಿ ಸ್ಪೀಕರ್ ಅನುಮತಿಗಾಗಿ ಕಾಯುತ್ತಿದೆ ಸಿಬಿಐ

ನಾರದ ಕುಟುಕು ಕಾರ್ಯಾಚರಣೆ ಪ್ರಕರಣದ ಆರೋಪಿ, ಪಶ್ಚಿಮ ಬಂಗಾಳ ವಿಧಾನಸಭೆಯ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ಸೇರಿದಂತೆ ನಾಲ್ವರು ರಾಜಕೀಯ ಮುಖಂಡರನ್ನು ವಿಚಾರಣೆಗೆ ಒಳಪಡಿಸಲು ಸಿಬಿಐ, ಲೋಕಸಭಾ ಸ್ಪೀಕರ್ ಅನುಮತಿಗಾಗಿ ಕಾಯುತ್ತಿದೆ.

ಕೋಲ್ಕತಾ: ನಾರದ ಕುಟುಕು ಕಾರ್ಯಾಚರಣೆ ಪ್ರಕರಣದ ಆರೋಪಿ, ಪಶ್ಚಿಮ ಬಂಗಾಳ ವಿಧಾನಸಭೆಯ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ಸೇರಿದಂತೆ ನಾಲ್ವರು ರಾಜಕೀಯ ಮುಖಂಡರನ್ನು ವಿಚಾರಣೆಗೆ ಒಳಪಡಿಸಲು ಸಿಬಿಐ, ಲೋಕಸಭಾ ಸ್ಪೀಕರ್ ಅನುಮತಿಗಾಗಿ ಕಾಯುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ಹೇಳಿದ್ದಾರೆ.

ಬಿಜೆಪಿಯ ಸುವೇಂದು ಅಧಿಕಾರಿ ನಾರದ ಪ್ರಕರಣ ನಡೆದಾ ಟಿಎಂಸಿ ಸಂಸದರಾಗಿದ್ದರು. ಈಗ ಬಿಜೆಪಿಯಲ್ಲಿದ್ದು, ಪ್ರತಿಪಕ್ಷ ನಾಯಕರಾಗಿದ್ದಾರೆ.

ಸ್ಟಿಂಗ್ ಕಾರ್ಯಾಚರಣೆಯ ತನಿಖೆಗೆ ಸಂಬಂಧಿಸಿದಂತೆ ಸಿಬಿಐ ಸೋಮವಾರ ಇಬ್ಬರು ರಾಜ್ಯ ಸಚಿವರಾದ ಫಿರ್ಹಾದ್ ಹಕೀಮ್ ಮತ್ತು ಸುಬ್ರತಾ ಮುಖರ್ಜಿ ಹಾಗೂ ಶಾಸಕ ಮದನ್ ಮಿತ್ರ ಮತ್ತು ಪಕ್ಷದ ಮಾಜಿ ಮುಖಂಡ ಸೋಮನ್ ಚಟರ್ಜಿ ಅವರನ್ನು ಬಂಧಿಸಿತ್ತು.

 ನಾಲ್ಕು ಟಿಎಂಸಿ ನಾಯಕರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ಜಗದೀಪ್ ಧಂಕರ್ ಅವರು ಇತ್ತೀಚೆಗೆ ಅನುಮತಿ ನೀಡಿದ್ದರು, ಅದರ ನಂತರ ಸಿಬಿಐ, ಚಾರ್ಜ್‌ಶೀಟ್ ಅಂತಿಮಗೊಳಿಸಿ ಅವರನ್ನು ಬಂಧಿಸಿದೆ.

ಕಾರ್ಯಾಚರಣೆ ನಡೆಸಿದಾಗ ಟಿಎಂಸಿ ಸಂಸದರಾಗಿದ್ದ ಸುವೆಂದು ಅಧಿಕಾರಿ, ಸೌಗತಾ ರಾಯ್, ಪ್ರಸೂನ್ ಬ್ಯಾನರ್ಜಿ ಮತ್ತು ಕಾಕಲಿ ಘೋಷ್ ದಸ್ತಿದಾರ್ ಅವರನ್ನು ವಿಚಾರಣೆಗೆ ಒಳಪಡಿಸಲು ಸಿಬಿಐ ಲೋಕಸಭಾ ಸ್ಪೀಕರ್ ಅನುಮತಿ ಕೋರಿದೆ ಎಂದು ಅಧಿಕಾರಿ ವಿವರಿಸಿದರು.

ಸಿಬಿಐನಿಂದ ತಪ್ಪಿಸಿಕೊಳ್ಳುವುದಕ್ಕಾಗಿಯೇ ಸುವೇಂದು ಅಧಿಕಾರಿ ಮತ್ತು ಮುಕುಲ್ ರಾಯ್ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದು ಟಿಎಂಸಿ ವಕ್ತಾರ ಕುನಾಲ್ ಘೋಷ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT