ಪೊಲೀಸ್ ಅಧಿಕಾರಿ ಪರಮ್ ಬೀರ್ ಸಿಂಗ್ 
ದೇಶ

ಪರಂ ಬಿರ್ ಸಿಂಗ್ ಅರ್ಜಿ ವಿಚಾರಣೆಯಿಂದ ಹಿಂದೆಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ಆರ್. ಗವಾಯಿ

ಮುಂಬೈ ನ ಪೊಲೀಸ್ ಅಧಿಕಾರಿ ಪರಮ್ ಬಿರ್ ಸಿಂಗ್ ಅವರ ಅರ್ಜಿಯ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ಆರ್ ಗವಾಯಿ ಹಿಂದೆ ಸರಿದಿದ್ದಾರೆ. 

ನವದೆಹಲಿ: ತಮ್ಮ ವಿರುದ್ಧದ ಎಲ್ಲಾ ತನಿಖೆಗಳನ್ನು ಮಹಾರಾಷ್ಟ್ರದಿಂದ ಹೊರಗೆ ಯಾವುದಾದರೂ ಸ್ವತಂತ್ರ ಸಂಸ್ಥೆಗೆ ವಹಿಸಬೇಕೆಂಬ ಮುಂಬೈ ನ ಪೊಲೀಸ್ ಅಧಿಕಾರಿ ಪರಮ್ ಬಿರ್ ಸಿಂಗ್ ಅವರ ಅರ್ಜಿಯ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ಆರ್ ಗವಾಯಿ ಹಿಂದೆ ಸರಿದಿದ್ದಾರೆ. 

ಸುಪ್ರೀಂ ಕೊರ್ಟ್ ನ ರಜೆ ಪೀಠದಲ್ಲಿದ್ದ ನ್ಯಾ.ವಿನೀತ್ ಶರಣ್, ಗವಾಯಿ ಅವರ ಎದುರು ಈ ಅರ್ಜಿ ವಿಚಾರಣೆಗೆ ಬಂದಿತ್ತು. ನ್ಯಾ. ಗವಾಯಿ ಅವರಿಗೆ ಈ ವಿಷಯವನ್ನು ಕೈಗೆತ್ತಿಕೊಳ್ಳುವುದಕ್ಕೆ ಯಾವುದೋ ಸಮಸ್ಯೆ ಇದೆ ಆದ್ದರಿಂದ ಇದನ್ನು ಬೇರೆ ಪೀಠದ ಎದುರು ಸಲ್ಲಿಸುವಂತೆ ಹೇಳುತ್ತೇವೆ ಎಂದು ನ್ಯಾ.ಶರಣ್ ಹೇಳಿದ್ದಾರೆ. 

"ನಾನು ಈ ವಿಚಾರಣೆ ನಡೆಸಲು ಸಾಧ್ಯವಿಲ್ಲ" ಎಂದು ನ್ಯಾ. ಗವಾಯಿ ಹೇಳಿದ್ದಾರೆ. ಸಿಂಗ್ ಅವರ ಪರ ವಾದ ಮಂಡಿಸುತ್ತಿರುವ ಹಿರಿಯ ಅಡ್ವೊಕೇಟ್ ಪುನೀತ್ ಬಲಿ, ಪರಮ್ ಬಿರ್ ಸಿಂಗ್ ಅವರ ವಿರುದ್ಧದ ತನಿಖೆಗಳು ಅವರನ್ನು ಹಣಿಯುವುದಕ್ಕಾಗಿ ಆದೇಶಿಸಿದ್ದಾಗಿದೆ. ಇದು ಸುಪ್ರೀಂ ಕೋರ್ಟ್ ಹಾಗೂ ಬಾಂಬೆ ಹೈಕೋರ್ಟ್ ಆದೇಶದ ವಿರುದ್ಧವಾಗಿದೆ ಎಂದು ವಾದ ಮಂಡಿಸಿದ್ದಾರೆ. 

1988 ಬ್ಯಾಚ್ ನ ಐಪಿಎಸ್ ಅಧಿಕಾರಿ ಪರಮ್ ಬಿರ್ ಸಿಂಗ್ ಮಹಾರಾಷ್ಟ್ರದ ಗೃಹ ಸಚಿವ ಎನ್ ಸಿಪಿ ನಾಯಕ ಅನಿಲ್ ದೇಶ್ ಮುಖ್ ಅವರ ವಿರುದ್ಧ ಅಕ್ರಮ, ಭ್ರಷ್ಟಾಚಾರದ ಆರೋಪ ಮಾಡಿದ್ದಕ್ಕಾಗಿ ಅವರನ್ನು ಮುಂಬೈ ಪೊಲೀಸ್ ಆಯುಕ್ತರ ಹುದ್ದೆಯಿಂದ ಹೋಮ್ ಗಾರ್ಡ್ ನ ಜನರಲ್ ಕಮಾಂಡರ್ ಹುದ್ದೆಗೆ ವರ್ಗಾವಣೆ ಮಾಡಲಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT