ಪ್ರಜ್ಞಾ ಸಿಂಗ್ ಠಾಕೂರ್ 
ದೇಶ

ಪ್ರಜ್ಞಾ ಠಾಕೂರ್ 'ಗೋಮೂತ್ರ' ಹೇಳಿಕೆಯನ್ನು ವೈಜ್ಞಾನಿಕವಾಗಿ ಸಾಬೀತುಪಡಿಸಿ: ಕೇಂದ್ರ ಸಚಿವರಿಗೆ ಕಾಂಗ್ರೆಸ್ ಶಾಸಕ ಪತ್ರ

ಕೊರೋನಾ ವಿರುದ್ಧದ 'ಗೋಮೂತ್ರ' ದ ಸಂರಕ್ಷಣೆ ಬಗ್ಗೆ ಭೋಪಾಲ್ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರ ಹೇಳಿಕೆಯನ್ನು ವೈಜ್ಞಾನಿಕವಾಗಿ ಸಾಬೀತುಪಡಿಸುವಂತೆ ಕಾಂಗ್ರೆಸ್ ಶಾಸಕರೊಬ್ಬರು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ ಗೆ ಮನವಿ ಮಾಡಿದ್ದಾರೆ.

ಭೋಪಾಲ್: ಕೊರೋನಾ ವಿರುದ್ಧದ 'ಗೋಮೂತ್ರ' ದ ಸಂರಕ್ಷಣೆ ಬಗ್ಗೆ ಭೋಪಾಲ್ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರ ಹೇಳಿಕೆಯನ್ನು ವೈಜ್ಞಾನಿಕವಾಗಿ ಸಾಬೀತುಪಡಿಸುವಂತೆ ಕಾಂಗ್ರೆಸ್ ಶಾಸಕರೊಬ್ಬರು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ ಗೆ ಮನವಿ ಮಾಡಿದ್ದಾರೆ.

ಹರ್ಷ್ ವರ್ಧನ್ ಅವರಿಗೆ ಬರೆದ ಪತ್ರದಲ್ಲಿ, ಕಾಂಗ್ರೆಸ್ ಹಿರಿಯ ಮುಖಂಡ ಪಿಸಿ ಶರ್ಮಾ, "ಪ್ರಜ್ಞಾ ಸಿಂಗ್ ಠಾಕೂರ್ ಅವರು ಬಿಜೆಪಿಯ ಹಿರಿಯ ಮುಖಂಡರು, ಭೋಪಾಲ್ ಸಂಸದರಾಗಿದ್ದಾರೆ. ಗೋಮೂತ್ರ  ಶ್ವಾಸಕೋಶದ ಸೋಂಕು ಮತ್ತು ಕೋವಿಡ್-19 ಅನ್ನು ಗುಣಪಡಿಸುತ್ತದೆ ಎಂದು ಅವರು ಹೇಳಿದ್ದಾರೆ. ಅವರ ಮಾತುಗಳು ವಿಶ್ವಾಸಾರ್ಹವಾಗಿರಬೇಕು". ಗೋಮೂತ್ರದ ರವು ಶ್ವಾಸಕೋಶದ ಸೋಂಕು ಮತ್ತು ಕೊರೋನಾ ವಿರುದ್ಧ ರಕ್ಷಣೆ ನೀಡುತ್ತದೆ ಎಂದು ಭಾನುವಾರ ಸಂಸದೆ ಒಂದು ಕಾರ್ಯಕ್ರಮದಲ್ಲಿ ಹೇಳಿದ್ದರು.

"ಈಗ ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗ ಹರಡಿದೆ. ಠಾಕೂರ್ ಅವರ ಹೇಳಿಕೆಗಳುಗೋಮೂತ್ರದಲ್ಲಿ ಹೊಂದಿರುವ ಗ್ರಾಮಸ್ಥರನ್ನು ಗೊಂದಲಕ್ಕೀಡುಮಾಡುತ್ತವೆ ಮತ್ತು ಅಲೋಪತಿಯ ಸುಸ್ಥಾಪಿತ ಚಿಕಿತ್ಸೆಯನ್ನು ನಿರ್ಲಕ್ಷಿಸಿ ಅವರು ಈ ಔಷಧಿಗಳನ್ನು ತೆಗೆದುಕೊಳ್ಲಲು ಪ್ರಾರಂಭಿಸುತ್ತಾರೆ" ಭೋಪಾಲ್ ನೈಋತ್ಯ ಕ್ಷೇತ್ರದ ಶಾಸಕ ಶರ್ಮಾ ಹೇಳಿದರು

"ಈ ಗೊಂದಲವನ್ನು ಕೊನೆಗೊಳಿಸಲು ಮತ್ತು ಠಾಕೂರ್ ಮಾಡಿದ 'ಗೋಮೂತ್ರ' ಹಕ್ಕನ್ನು ವೈಜ್ಞಾನಿಕವಾಗಿ ಪ್ರಮಾಣೀಕರಿಸಲು" ಅವರು ಹರ್ಷ್ ವರ್ಧನ್ ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ದೇಸಿ ಹಸುವಿನ ಮೂತ್ರದ ಸಾರವನ್ನು ಸೇವಿಸಿದರೆ ಶ್ವಾಸಕೋಶದ ಸೋಂಕಿನಿಂದ ದೂರವಾಗಲಿದೆ ಎಂದು ಸಂಸದೆ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT