ಪ್ರಜ್ಞಾ ಸಿಂಗ್ ಠಾಕೂರ್ 
ದೇಶ

ಪ್ರಜ್ಞಾ ಠಾಕೂರ್ 'ಗೋಮೂತ್ರ' ಹೇಳಿಕೆಯನ್ನು ವೈಜ್ಞಾನಿಕವಾಗಿ ಸಾಬೀತುಪಡಿಸಿ: ಕೇಂದ್ರ ಸಚಿವರಿಗೆ ಕಾಂಗ್ರೆಸ್ ಶಾಸಕ ಪತ್ರ

ಕೊರೋನಾ ವಿರುದ್ಧದ 'ಗೋಮೂತ್ರ' ದ ಸಂರಕ್ಷಣೆ ಬಗ್ಗೆ ಭೋಪಾಲ್ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರ ಹೇಳಿಕೆಯನ್ನು ವೈಜ್ಞಾನಿಕವಾಗಿ ಸಾಬೀತುಪಡಿಸುವಂತೆ ಕಾಂಗ್ರೆಸ್ ಶಾಸಕರೊಬ್ಬರು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ ಗೆ ಮನವಿ ಮಾಡಿದ್ದಾರೆ.

ಭೋಪಾಲ್: ಕೊರೋನಾ ವಿರುದ್ಧದ 'ಗೋಮೂತ್ರ' ದ ಸಂರಕ್ಷಣೆ ಬಗ್ಗೆ ಭೋಪಾಲ್ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರ ಹೇಳಿಕೆಯನ್ನು ವೈಜ್ಞಾನಿಕವಾಗಿ ಸಾಬೀತುಪಡಿಸುವಂತೆ ಕಾಂಗ್ರೆಸ್ ಶಾಸಕರೊಬ್ಬರು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ ಗೆ ಮನವಿ ಮಾಡಿದ್ದಾರೆ.

ಹರ್ಷ್ ವರ್ಧನ್ ಅವರಿಗೆ ಬರೆದ ಪತ್ರದಲ್ಲಿ, ಕಾಂಗ್ರೆಸ್ ಹಿರಿಯ ಮುಖಂಡ ಪಿಸಿ ಶರ್ಮಾ, "ಪ್ರಜ್ಞಾ ಸಿಂಗ್ ಠಾಕೂರ್ ಅವರು ಬಿಜೆಪಿಯ ಹಿರಿಯ ಮುಖಂಡರು, ಭೋಪಾಲ್ ಸಂಸದರಾಗಿದ್ದಾರೆ. ಗೋಮೂತ್ರ  ಶ್ವಾಸಕೋಶದ ಸೋಂಕು ಮತ್ತು ಕೋವಿಡ್-19 ಅನ್ನು ಗುಣಪಡಿಸುತ್ತದೆ ಎಂದು ಅವರು ಹೇಳಿದ್ದಾರೆ. ಅವರ ಮಾತುಗಳು ವಿಶ್ವಾಸಾರ್ಹವಾಗಿರಬೇಕು". ಗೋಮೂತ್ರದ ರವು ಶ್ವಾಸಕೋಶದ ಸೋಂಕು ಮತ್ತು ಕೊರೋನಾ ವಿರುದ್ಧ ರಕ್ಷಣೆ ನೀಡುತ್ತದೆ ಎಂದು ಭಾನುವಾರ ಸಂಸದೆ ಒಂದು ಕಾರ್ಯಕ್ರಮದಲ್ಲಿ ಹೇಳಿದ್ದರು.

"ಈಗ ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗ ಹರಡಿದೆ. ಠಾಕೂರ್ ಅವರ ಹೇಳಿಕೆಗಳುಗೋಮೂತ್ರದಲ್ಲಿ ಹೊಂದಿರುವ ಗ್ರಾಮಸ್ಥರನ್ನು ಗೊಂದಲಕ್ಕೀಡುಮಾಡುತ್ತವೆ ಮತ್ತು ಅಲೋಪತಿಯ ಸುಸ್ಥಾಪಿತ ಚಿಕಿತ್ಸೆಯನ್ನು ನಿರ್ಲಕ್ಷಿಸಿ ಅವರು ಈ ಔಷಧಿಗಳನ್ನು ತೆಗೆದುಕೊಳ್ಲಲು ಪ್ರಾರಂಭಿಸುತ್ತಾರೆ" ಭೋಪಾಲ್ ನೈಋತ್ಯ ಕ್ಷೇತ್ರದ ಶಾಸಕ ಶರ್ಮಾ ಹೇಳಿದರು

"ಈ ಗೊಂದಲವನ್ನು ಕೊನೆಗೊಳಿಸಲು ಮತ್ತು ಠಾಕೂರ್ ಮಾಡಿದ 'ಗೋಮೂತ್ರ' ಹಕ್ಕನ್ನು ವೈಜ್ಞಾನಿಕವಾಗಿ ಪ್ರಮಾಣೀಕರಿಸಲು" ಅವರು ಹರ್ಷ್ ವರ್ಧನ್ ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ದೇಸಿ ಹಸುವಿನ ಮೂತ್ರದ ಸಾರವನ್ನು ಸೇವಿಸಿದರೆ ಶ್ವಾಸಕೋಶದ ಸೋಂಕಿನಿಂದ ದೂರವಾಗಲಿದೆ ಎಂದು ಸಂಸದೆ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT