ಸಂಗ್ರಹ ಚಿತ್ರ 
ದೇಶ

ಕೇಂದ್ರ ಸರ್ಕಾರದಿಂದ ರೈತರಿಗೆ ಶುಭಸುದ್ದಿ: ರಸಗೊಬ್ಬರದ ಮೇಲಿನ ಸಬ್ಸಿಡಿ ಶೇ.140 ರಷ್ಟು ಹೆಚ್ಚಳ!

ರೈತರ ಕಲ್ಯಾಣವೇ ನಮ್ಮ ಸರ್ಕಾರದ ಕೇಂದ್ರ ಉದ್ದೇಶ ಎಂದಿರುವ ಪ್ರಧಾನಿ ನರೇಂದ್ರ ಮೋದಿ ರಸಗೊಬ್ಬರ ಸಬ್ಸಿಡಿಯನ್ನು ಶೇಕಡಾ 140 ರಷ್ಟು ಹೆಚ್ಚಿಸಿ ಐತಿಹಾಸಿಕ ಹೆಜ್ಜೆ ಇಟ್ಟಿದ್ದಾರೆ.

ನವದೆಹಲಿ: ರೈತರ ಕಲ್ಯಾಣವೇ ನಮ್ಮ ಸರ್ಕಾರದ ಕೇಂದ್ರ ಉದ್ದೇಶ ಎಂದಿರುವ ಪ್ರಧಾನಿ ನರೇಂದ್ರ ಮೋದಿ ರಸಗೊಬ್ಬರ ಸಬ್ಸಿಡಿಯನ್ನು ಶೇಕಡಾ 140 ರಷ್ಟು ಹೆಚ್ಚಿಸಿ ಐತಿಹಾಸಿಕ ಹೆಜ್ಜೆ ಇಟ್ಟಿದ್ದಾರೆ.

ಈ ನಿರ್ಧಾರ ರೈತರಿಗೆ ಅನುಕೂಲವಾಗಿದ್ದು ಡಿಎಪಿ ಗೊಬ್ಬರದ ಸಬ್ಸಿಡಿ ಪ್ರತಿ ಚೀಲಕ್ಕೆ 500 ರೂ.ನಿಂದ 1200 ರೂ. ಗೆ ಹೆಚ್ಚಳವಾಗಿದೆ. ಅದರಿಂದಾಗಿ ಒಂದು ಚೀಲ ಡಿಎಪಿ 2400 ರೂ. ಗೆ ಬದಲು 1200 ರೂ. ಗೆ ಸಿಕ್ಕಲಿದೆ.

ಈ ಸಬ್ಸಿಡಿಗಾಗಿ ಸರ್ಕಾರ ಸುಮಾರು 14,775 ಕೋಟಿ ರೂ. ವೆಚ್ಚ ಮಾಡಲಿದೆ.

"ರೈತರ ಜೀವನವನ್ನು ಸುಧಾರಿಸಲು ಸರ್ಕಾರ ಬದ್ಧವಾಗಿದೆ. ಆದ್ದರಿಂದ, ಜಾಗತಿಕ ಬೆಲೆಗಳ ಹೆಚ್ಚಳದ ಹೊರತಾಗಿಯೂ, ಗೊಬ್ಬರವನ್ನು ಹಳೆಯ ದರದಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳುತ್ತೇವೆ" ಎಂದು ಪ್ರಧಾನಿ ಮೋದಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಡಿಎಪಿಯ ಅಂತರರಾಷ್ಟ್ರೀಯ ಮಾರುಕಟ್ಟೆ ಬೆಲೆಗಳ ಏರಿಕೆಯ ಹೊರತಾಗಿಯೂ, ಹಳೆಯ ಚೀಲಕ್ಕೆ 1,200 ರೂ.ಗೆ ಮಾರಾಟ ಮಾಡುವುದನ್ನು ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.

ಡಿಎಪಿಯ ನಿಜವಾದ ಬೆಲೆ ಈಗ ಪ್ರತಿ ಚೀಲಕ್ಕೆ 2,400 ರೂ., ರಸಗೊಬ್ಬರ ಕಂಪೆನಿಗಳು 500 ರೂ.ಗಳ ಸಬ್ಸಿಡಿಯನ್ನು ಪರಿಗಣಿಸಿ 1,900 ರೂ.ಗೆ ಮಾರಾಟ ಮಾಡುತ್ತಿದ್ದವು.

"ಬೆಲೆ ಏರಿಕೆಯ ಎಲ್ಲಾ ಹೊರೆಗಳನ್ನು ಹೊರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರತಿ ಚೀಲಕ್ಕೆ ಸಬ್ಸಿಡಿ ಪ್ರಮಾಣವನ್ನು ಒಂದೇ ಬಾರಿಗೆ ಹೆಚ್ಚಿಸಿಲ್ಲ" ಎಂದು ಅದು ಹೇಳಿದೆ. ರಾಸಾಯನಿಕ ಗೊಬ್ಬರಗಳಿಗೆ ಸಬ್ಸಿಡಿ ನೀಡಲು ಸರ್ಕಾರ ಪ್ರತಿವರ್ಷ ಸುಮಾರು 80,000 ಕೋಟಿ ರೂ. ವೆಚ್ಚ ಮಾಡಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT