ಜಮ್ಮುವಿನಲ್ಲಿ ಲಸಿಕಾ ಕೇಂದ್ರಕ್ಕೆ ಸಿರೆಂಜ್ ಕೊಂಡೊಯ್ಯುತ್ತಿರುವ ಆರೋಗ್ಯ ಕಾರ್ಯಕರ್ತರು (ಸಂಗ್ರಹ ಚಿತ್ರ) 
ದೇಶ

ಒಂದೇ ದಿನದಲ್ಲಿ ದಾಖಲೆಯ 20 ಲಕ್ಷ ಕೊರೋನಾ ವೈರಸ್ ಪತ್ತೆ ಪರೀಕ್ಷೆ; ಚೇತರಿಕೆ ಪ್ರಮಾಣ ಶೇ.86.23: ಆರೋಗ್ಯ ಸಚಿವಾಲಯ

ದೇಶಾದ್ಯಂತ 24 ಗಂಟೆಗಳಲ್ಲಿ ದಾಖಲೆಯ 20 ಲಕ್ಷ ಕೊರೋನಾ ವೈರಾಣು ಸೋಂಕು ಪತ್ತೆ ಪರೀಕ್ಷೆ ಮಾಡಲಾಗಿದೆ. ಇದು ಜಾಗತಿಕ ಮಟ್ಟದಲ್ಲಿ ಸೋಂಕು ಪತ್ತೆ ಪರೀಕ್ಷೆಯ ದಾಖಲೆ ಸಂಖ್ಯೆಯಾಗಿದೆ. 

ನವದೆಹಲಿ: ದೇಶಾದ್ಯಂತ 24 ಗಂಟೆಗಳಲ್ಲಿ ದಾಖಲೆಯ 20 ಲಕ್ಷ ಕೊರೋನಾ ವೈರಾಣು ಸೋಂಕು ಪತ್ತೆ ಪರೀಕ್ಷೆ ಮಾಡಲಾಗಿದೆ. ಇದು ಜಾಗತಿಕ ಮಟ್ಟದಲ್ಲಿ ದಾಖಲೆಯ ಸೋಂಕು ಪತ್ತೆ ಪರೀಕ್ಷೆಯ ಸಂಖ್ಯೆಯಾಗಿದ್ದು, ಭಾರತದಲ್ಲಿ ಒಂದೇ ದಿನ ನಡೆದ ಅತಿ ಹೆಚ್ಚಿನ ಪರೀಕ್ಷೆಯಾಗಿದೆ. 

ದಿನನಿತ್ಯದ ಸೋಂಕು ವರದಿಯ ಪ್ರಮಾಣ ಶೇ.13.31 ಕ್ಕೆ ಕುಸಿತ ಕಂಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಹೊಸ ಪ್ರಕರಣಗಳಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಚೇತರಿಕೆ ಕಾಣುತ್ತಿರುವುದು ಸತತ 6 ನೇ ದಿನವೂ ಮುಂದುವರೆದಿದೆ ಎಂದು ಹೇಳಿದೆ. 

ಈ ವರೆಗೂ ಒಟ್ಟು 2,19,86,363 ಮಂದಿ ಚೇತರಿಕೆ ಕಂಡಿದ್ದು, 3,89,851 ರೋಗಿಗಳು ದಿನವೊಂದಕ್ಕೆ ಚೇತರಿಕೆ ಕಾಣುತ್ತಿದ್ದು ರಾಷ್ಟ್ರೀಯ ಚೇತರಿಕೆ ಪ್ರಮಾಣ ಶೇ.86.23 ರಷ್ಟಿದೆ. ಈ ವರೆಗೂ ದೇಶಾದ್ಯಂತ 32 ಕೋಟಿ ಟೆಸ್ಟ್ ಗಳನ್ನು ಮಾಡಲಾಗಿದ್ದು, ಒಟ್ಟು ಪಾಸಿಟಿವಿಟಿ ಪ್ರಮಾಣ ಶೇ.7.96 ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ. 

ಸತತ ಮೂರನೇ ದಿನವೂ 3 ಲಕ್ಷಕ್ಕಿಂತ ಕಡಿಮೆ ಪ್ರಕರಣಗಳು ದೇಶದಲ್ಲಿ ವರದಿಯಾಗಿದೆ. ತಮಿಳುನಾಡು, ಕೇರಳ, ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ಪಶ್ಚಿಮ ಬಂಗಾಳ, ಒಡಿಶಾ, ಉತ್ತರ ಪ್ರದೇಶ, ರಾಜಸ್ಥಾನ, ಹರ್ಯಾಣಗಳಲ್ಲಿ ದೇಶದ ಶೇ.74.46 ಕೊರೋನಾ ಪ್ರಕರಣಗಳಿದ್ದು, 24 ಗಂಟೆಗಳಲ್ಲಿ 2,67,334  ಪ್ರಕರಣಗಳು ವರದಿಯಾಗಿವೆ, ತಮಿಳುನಾಡಿನಲ್ಲಿ ಅತಿ ಹೆಚ್ಚು ಅಂದರೆ ದಿನವೊಂದಕ್ಕೆ 33,059, ಕೇರಳದಲ್ಲಿ 31,337 ಹೊಸ ಪ್ರಕರಣಗಳು ವರದಿಯಾಗಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT