ಚಂಡಮಾರುತ (ಸಂಗ್ರಹ ಚಿತ್ರ) 
ದೇಶ

ಟೌಕ್ಟೇ ಬೆನ್ನಲ್ಲೇ ಬಂಗಾಳ ಕೊಲ್ಲಿಯಲ್ಲಿ 'ಯಾಸ್' ಚಂಡಮಾರುತ ಸಾಧ್ಯತೆ, ಹವಾಮಾನ ಇಲಾಖೆ ಎಚ್ಚರಿಕೆ

ದೇಶದ ವಿವಿಧ ರಾಜ್ಯಗಳಲ್ಲಿ ಭಾರಿ ಅವಾಂತರ ಮಾಡಿದ್ದ ಟೌಕ್ಟೇ ಚಂಡಮಾರುತದ ಈಗಷ್ಟೇ ತಣ್ಣಗಾಗಿದ್ದು, ಇದರ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತದ ಭೀತಿ ಎದುರಾಗಿದೆ.

ಪೋರ್ಟ್‍ ಬ್ಲೇರ್: ದೇಶದ ವಿವಿಧ ರಾಜ್ಯಗಳಲ್ಲಿ ಭಾರಿ ಅವಾಂತರ ಮಾಡಿದ್ದ ಟೌಕ್ಟೇ ಚಂಡಮಾರುತದ ಈಗಷ್ಟೇ ತಣ್ಣಗಾಗಿದ್ದು, ಇದರ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತದ ಭೀತಿ ಎದುರಾಗಿದೆ.

ಬಂಗಾಳ ಕೊಲ್ಲಿಯ ಪೂರ್ವ ಕೇಂದ್ರ ಹಾಗೂ ನೆರೆಯ ಉತ್ತರ ಅಂಡಮಾನ್‍ ಸಮುದ್ರದಲ್ಲಿ ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಕರಾವಳಿ ರಕ್ಷಣಾ ಪಡೆ ಅಧಿಕೃತ ಎಚ್ಚರಿಕೆ ಹೊರಡಿಸಿದೆ. ಈ ತಿಂಗಳ 21ರಿಂದ 23ರವರೆಗೆ ಬಂಗಾಳ ಕೊಲ್ಲಿಯ ಪೂರ್ವ ಕೇಂದ್ರ ಹಾಗೂ ನೆರೆಯ ಉತ್ತರ  ಅಂಡಮಾನ್‍ ಸಮುದ್ರದಲ್ಲಿ ವಾಯಭಾರ ಕುಸಿತವಾಗಲಿದ್ದು, ಇದು ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆ ಇರುವುದಾಗಿ ಹವಾಮಾನ ಮುನ್ಸೂಚನೆ ತಿಳಿಸಿದೆ ಎಂದು ಪ್ರಕಟಣೆ ತಿಳಿಸಿದೆ.

ಇದರ ಪ್ರಭಾವದಿಂದ ಗಾಳಿಯ ವೇಗ ಹೆಚ್ಚಾಗಿ ಈ ತಿಂಗಳ 21ರಿಂದ 26ರವರೆಗೆ ಅಂಡಮಾನ್‍ ಸಮುದ್ರದಲ್ಲಿ ಪ್ರತಿಕೂಲ ಹವಾಮಾನ ಉಂಟಾಗಲಿದೆ. ಮೀನುಗಾರಿಕೆ ಇಲಾಖೆಗಳು ಮತ್ತು ನಾಗರಿಕ ಆಡಳಿತಗಳೊಂದಿಗೆ ಭಾರತೀಯ ಕರಾವಳಿ ಪಡೆ ಹವಾಮಾನ ಮಾಹಿತಿಯನ್ನು ಹಂಚಿಕೊಂಡಿದೆ ಎಂದು ಪ್ರಕಟಣೆ  ತಿಳಿಸಿದೆ. 

ಮೇ 23 ರ ಆಸುಪಾಸಿನಲ್ಲಿ ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆ ಇದ್ದು, ಈ ಚಂಡಮಾರುತವು ಬಂಗಾಳಕೊಲ್ಲಿ ಸಮುದ್ರ ಭಾಗದಿಂದ ಬರಲಿದೆ. ಅರಬ್ಬೀ ಸಮುದ್ರ ಹಾಗೂ ಬಂಗಾಳ ಕೊಲ್ಲಿ ಎರಡರಲ್ಲೂ ಸಮುದ್ರದ ಮೇಲ್ಮೈ ಉಷ್ಣಾಂಶ ಸುಮಾರು ಒಂದರಿಂದ ಎರಡು ಡಿಗ್ರಿ ಸೆಲ್ಸಿಯಸ್ ಹೆಚ್ಚಿದೆ. ಇದು  ಚಂಡಮಾರುತ ರಚನೆಗೆ ಪೂರಕ ವಾತಾವರಣವಾಗಿದ್ದು, ಮೇ 23ರ ಹೊತ್ತಿಗೆ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಉದ್ಭವಿಸುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ.

ಅಂತೆಯೇ ಹವಾಮಾನ ಇಲಾಖೆಯ ಸದ್ಯದ ಅಂದಾಜಿನ ಪ್ರಕಾರ ಈ ಚಂಡಮಾರುತವು ಮಯನ್ಮಾರ್​ ಕಡೆಗೆ ಚಲಿಸುವ ಸಾಧ್ಯತೆ ಇದ್ದು, ಭಾರತಕ್ಕೆ ಅಪ್ಪಳಿಸುವ ಸಂಭವ ಕಡಿಮೆ ಇದೆ ಎನ್ನಲಾಗುತ್ತಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT