ಸಾಂದರ್ಭಿಕ ಚಿತ್ರ 
ದೇಶ

ಕಪ್ಪು ಶಿಲೀಂಧ್ರ ಅಧಿಸೂಚಿತ ಸಾಂಕ್ರಾಮಿಕ ರೋಗ ಎಂದು ಘೋಷಿಸಿ: ರಾಜ್ಯಗಳಿಗೆ ಕೇಂದ್ರ ಸೂಚನೆ

ಸಾಂಕ್ರಾಮಿಕ ರೋಗಗಳ ಕಾಯ್ದೆ 1897 ರ ಅಡಿಯಲ್ಲಿ ಕಪ್ಪು ಶಿಲೀಂಧ್ರ ಅಥವಾ ಮ್ಯೂಕಾರ್ಮೈಕೋಸಿಸ್ ಅನ್ನು ಅಧಿಸೂಚಿತ ಸಾಂಕ್ರಾಮಿಕ ರೋಗ ಎಂದು ಘೋಷಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

ನವದೆಹಲಿ: ಸಾಂಕ್ರಾಮಿಕ ರೋಗಗಳ ಕಾಯ್ದೆ 1897 ರ ಅಡಿಯಲ್ಲಿ ಕಪ್ಪು ಶಿಲೀಂಧ್ರ ಅಥವಾ ಮ್ಯೂಕಾರ್ಮೈಕೋಸಿಸ್ ಅನ್ನು ಅಧಿಸೂಚಿತ ಸಾಂಕ್ರಾಮಿಕ ರೋಗ ಎಂದು ಘೋಷಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ. ಈ ಸೋಂಕು COVID-19 ರೋಗಿಗಳಲ್ಲಿ ದೀರ್ಘಕಾಲದ ಕಾಯಿಲೆ ಮತ್ತು ಮರಣಕ್ಕೆ ಕಾರಣವಾಗಿದೆ ಎಂದು ಕೇಂದ್ರ ಹೇಳಿದೆ.

ಈ ಸಂಬಂಧ  ಕೇಂದ್ರ ಆರೋಗ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ರಾಜ್ಯಗಳಿಗೆ ಪತ್ರ ಬರೆದಿದ್ದು, ಇತ್ತೀಚಿನ ದಿನಗಳಲ್ಲಿ ಮ್ಯೂಕೋರ್ಮೈಕೋಸಿಸ್ ಎಂಬ ಶಿಲೀಂಧ್ರ ಸೋಂಕಿನ ರೂಪದಲ್ಲಿ ಹೊಸ ಸವಾಲಾಗಿ ಹೊರಹೊಮ್ಮಿದೆ ಮತ್ತು ಕೋವಿಡ್ ರೋಗಿಗಳಲ್ಲಿ ಅನೇಕ ರಾಜ್ಯಗಳಿಂದ ವರದಿಯಾಗಿದೆ ಎಂದು ತಿಳಿಸಿದ್ದಾರೆ.

"ಈ ಶಿಲೀಂಧ್ರ ಸೋಂಕು ಕೋವಿಡ್ ರೋಗಿಗಳಲ್ಲಿ ದೀರ್ಘಕಾಲದ ಕಾಯಿಲೆ ಮತ್ತು ಮರಣಕ್ಕೆ ಕಾರಣವಾಗಿದೆ" ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್ ಪತ್ರದಲ್ಲಿ ತಿಳಿಸಿದ್ದಾರೆ.

ಕಪ್ಪು ಶಿಲೀಂಧ್ರ ಮತ್ತು ಕೊರೋನಾ ವೈರಸ್‌ ಸೋಂಕು ಎರಡಕ್ಕೂ ಸಮಗ್ರ ಮತ್ತು ಸಂಘಟಿತ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ರಾಜಸ್ಥಾನದಲ್ಲಿ ಸುಮಾರು 100 ಕ್ಕೂ ಹೆಚ್ಚು ಜನರಲ್ಲಿ ಈ ವೈರಸ್​ ಕಂಡು ಬಂದಿತ್ತು. ಹೀಗಾಗಿ ರಾಜಸ್ಥಾನ ಸರ್ಕಾರ ಮೊದಲ ಬಾರಿಗೆ ಇದೊಂದು ಸಾಂಕ್ರಾಮಿಕ ರೋಗ ಎಂದು ಬುಧವಾರ ಅಧಿಕೃತವಾಗಿ ಘೋಷಿಸಿತ್ತು. ಇಂದು ತೆಲಂಗಾಣ ಸರ್ಕಾರ ಸಹ ಕಪ್ಪು ಶಿಲೀಂಧ್ರ ಸಾಂಕ್ರಾಮಿಕ ರೋಗ ಎಂದು ಘೋಷಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ಅಧಿಸೂಚನೆ ಹೊರಡಿಸಿರುವುದು ಆತಂಕಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT