ರಕ್ಷಣೆಗೊಂಡ ಜನರು ಮುಂಬೈಯಲ್ಲಿ ಐಎನ್ ಎಸ್ ಕೊಚ್ಚಿ ಮೂಲಕ ಹೊರಬರುತ್ತಿರುವುದು 
ದೇಶ

ಟೌಕ್ಟೇ ಚಂಡಮಾರುತ: ಬಾರ್ಜ್ ನಲ್ಲಿದ್ದ 37 ಮಂದಿ ಸಾವು, 38 ಮಂದಿ ಕಣ್ಮರೆ, ನೌಕಾಪಡೆಯಿಂದ ಶೋಧ ಮುಂದುವರಿಕೆ

ನಾಲ್ಕು ದಿನಗಳ ಹಿಂದೆ ಅರಬ್ಬೀ ಸಮುದ್ರದಲ್ಲಿ ಟೌಕ್ಟೇ ಚಂಡಮಾರುತದ ರಭಸವಾದ ಅಲೆಗೆ ಸಿಲುಕಿ ನಾವೆ ಮುಳುಗಿ ಹೋಗಿ 38 ಮಂದಿ ಕಣ್ಮರೆಯಾಗಿದ್ದು ಭಾರತೀಯ ನೌಕಾಪಡೆ ಸಿಬ್ಬಂದಿ ರಾತ್ರಿ ಹಗಲು ಸತತವಾಗಿ ಹುಡುಕಾಟ ನಡೆಸಿದರೂ ಮುಳುಗಿಹೋದವರ ಪತ್ತೆ ಸಿಗುವ ಸಾಧ್ಯತೆ ದುರ್ಬಲವಾಗಿದೆ.

ಮುಂಬೈ: ನಾಲ್ಕು ದಿನಗಳ ಹಿಂದೆ ಅರಬ್ಬೀ ಸಮುದ್ರದಲ್ಲಿ ಟೌಕ್ಟೇ ಚಂಡಮಾರುತದ ರಭಸವಾದ ಅಲೆಗೆ ಸಿಲುಕಿ ನಾವೆ ಮುಳುಗಿ ಹೋಗಿ 38 ಮಂದಿ ಕಣ್ಮರೆಯಾಗಿದ್ದು ಭಾರತೀಯ ನೌಕಾಪಡೆ ಸಿಬ್ಬಂದಿ ರಾತ್ರಿ ಹಗಲು ಸತತವಾಗಿ ಹುಡುಕಾಟ ನಡೆಸಿದರೂ ಮುಳುಗಿಹೋದವರ ಪತ್ತೆ ಸಿಗುವ ಸಾಧ್ಯತೆ ದುರ್ಬಲವಾಗಿದೆ.

ಇಂದು ಬೆಳಗ್ಗೆ ನೌಕಾಪಡೆ ಸಿಬ್ಬಂದಿ ಹೊಸದಾಗಿ ವೈಮಾನಿಕ ಶೋಧ ಕಾರ್ಯ ಆರಂಭಿಸಿದರು. ಮುಂಬೈ ತೀರದಲ್ಲಿ ಹೆಲಿಕಾಪ್ಟರ್ ಗಳ ಮೂಲಕ ಶೋಧ ಕಾರ್ಯ ಆರಂಭಿಸಿದ್ದರು. ಕಳೆದ ಸೋಮವಾರ ಪಿ305 ದೋಣಿ ಮುಳುಗಿಹೋಗಿತ್ತು.

ನಾವೆಯಲ್ಲಿದ್ದ 37 ಮಂದಿ ಸಿಬ್ಬಂದಿ ಸಮುದ್ರದ ಅಲೆಯಲ್ಲಿ ಮುಳುಗಿ ಮೃತಪಟ್ಟಿದ್ದು, 38 ಮಂದಿ ಕಣ್ಮರೆಯಾಗಿದ್ದಾರೆ. ತೀವ್ರ ಪ್ರತಿಕೂಲ ಹವಾಮಾನದಲ್ಲಿಯೂ ನೌಕಾಪಡೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಇದುವರೆಗೆ ನಾವೆಯಲ್ಲಿದ್ದ 186 ಮಂದಿಯನ್ನು ಕಾಪಾಡಿದ್ದು, ಒಟ್ಟು 261 ಸಿಬ್ಬಂದಿ ಪಿ305ಯಲ್ಲಿ ಇದ್ದರು, ಇಬ್ಬರು ಸಿಬ್ಬಂದಿ ವರಪ್ರದ ಟಗ್ ಬೋಟ್ ನಲ್ಲಿಂದ ಸೇರಿದ್ದರು.

ಸಮುದ್ರ ನೀರಿನಲ್ಲಿ ಮುಳುಗಿ ಮೃತಪಟ್ಟವರ ದೇಹಗಳನ್ನು ಐಎನ್ ಎಸ್ ಕೊಚ್ಚಿ ಮತ್ತು ಐಎನ್ ಎಸ್ ಕೋಲ್ಕತ್ತಾ ಮುಂಬೈಗೆ ಕರೆತಂದಿದೆ ಎಂದು ನೌಕಾಪಡೆ ವಕ್ತಾರ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಇನ್ನಷ್ಟು ಮಂದಿ ಬದುಕುಳಿದಿರುವ ಸಾಧ್ಯತೆ ಕಡಿಮೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ. ಟೌಕ್ಟೇ ಚಂಡಮಾರುತ ಬಗ್ಗೆ ಪದೇ ಪದೇ ಎಚ್ಚರಿಕೆ ನೀಡಿದ್ದರೂ ನಾವೆಯಲ್ಲಿ ಅಪಾಯಕಾರಿ ಪ್ರದೇಶದಲ್ಲಿ ಜನರು ಏಕೆ ಇದ್ದರು ಎಂಬ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CET Result 2026 Announced: ಬೆಂಗಳೂರಿನ ಆರ್ ವಿ ಕಾಲೇಜಿನ ತನಿಷಾ ಕಾರ್ತಿಕ್ ಮೊದಲ ಸ್ಥಾನ, 2,92,782 ಅಭ್ಯರ್ಥಿಗಳು ಪ್ರವೇಶಕ್ಕೆ ಅರ್ಹತೆ!

'ನಮ್ಮ ಪೋಸ್ಟ್‌ಗಳನ್ನು ಡಿಲೀಟ್ ಮಾಡಬಹುದು, ಆದರೆ ನಮ್ಮನ್ನು ಅಳಿಸಲು ಸಾಧ್ಯವಿಲ್ಲ': Cockroach Janta Party ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕೇರಳದಲ್ಲಿ ಮುಂಗಾರು ಅಬ್ಬರ: ರಾತ್ರಿಯಿಡೀ ಭಾರಿ ಮಳೆ, ರಸ್ತೆಗಳು ಜಲಾವೃತ, ಧರೆಗುರುಳಿದ ಮರಗಳು, ಒಂದು ಸಾವು; 5 ಜಿಲ್ಲೆಗಳಿಗೆ ರೆಡ್ ಅಲರ್ಟ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೇಡಿಕೆ ಕೇವಲ ಆರಂಭ ಅಷ್ಟೇ.. CJP ಪ್ರತಿಭಟನೆಯಲ್ಲಿ ಸೋನಮ್ ವಾಂಗ್‌ಚುಕ್ ಗುಡುಗು!

International Cricket: ಪಂದ್ಯವನ್ನೇ ಆಡದೇ 3 ದಶಕಗಳ ಹಳೆಯ ತೆಂಡೂಲ್ಕರ್ ದಾಖಲೆ ಮುರಿದ Vaibhav Sooryavanshi

SCROLL FOR NEXT