ಹರಿದ್ವಾರದಲ್ಲಿ ನಡೆದ ಕುಂಭಮೇಳದಲ್ಲಿ ಭಾಗಿಯಾದ ಜನತೆ (ಸಂಗ್ರಹ ಚಿತ್ರ) 
ದೇಶ

ಕೋವಿಡ್-19 ಹೆಚ್ಚಳಕ್ಕೆ ಧಾರ್ಮಿಕ ಕಾರ್ಯಕ್ರಮ, ವಲಸಿಗರು ಕಾರಣ: ಐಸಿಎಂಆರ್

ಧಾರ್ಮಿಕ ಕಾರ್ಯಕ್ರಮಗಳು, ವಲಸೆ ಕೋವಿಡ್-19 ಎರಡನೇ ಅಲೆ ಹೆಚ್ಚಳಕ್ಕೆ ಕಾರಣ ಎಂದು ಐಸಿಎಂಆರ್ ನೇತೃತ್ವದ ಅಧ್ಯಯನ ವರದಿಯೊಂದು ಹೇಳಿದೆ. 

ನವದೆಹಲಿ: ಧಾರ್ಮಿಕ ಕಾರ್ಯಕ್ರಮಗಳು, ವಲಸೆ ಕೋವಿಡ್-19 ಎರಡನೇ ಅಲೆ ಹೆಚ್ಚಳಕ್ಕೆ ಕಾರಣ ಎಂದು ಐಸಿಎಂಆರ್ ನೇತೃತ್ವದ ಅಧ್ಯಯನ ವರದಿಯೊಂದು ಹೇಳಿದೆ. 

ವಿದೇಶಿ ಪ್ರಯಾಣಿಕರು ಹಾಗೂ ದೇಶದ ಆಂತರಿಕವಾಗಿ ವಲಸೆ ಕಾರ್ಮಿಕರು, ಧಾರ್ಮಿಕ ಕಾರ್ಯಕ್ರಮಗಳಿಂದ ಕೋವಿಡ್-19 ಪ್ರಸರಣಗೊಂಡಿದ್ದು ಎರಡನೇ ಅಲೆ ಹೆಚ್ಚಳಕ್ಕೆ ಕಾರಣ ಎಂದು ಅಧ್ಯಯನ ವರದಿಯಲ್ಲಿ ಹೇಳಲಾಗಿದೆ. 

ಮಿಂಟ್ ಅಧ್ಯಯನ ವರದಿಯನ್ನು ಉಲ್ಲೇಖಿಸಿ ವರದಿ ಪ್ರಕಟಿಸಿದ್ದು, SARS-CoV-2 ರೂಪಾಂತರಿಗಳಲ್ಲಿ ಕಂಡುಬರುತ್ತಿರುವ ಅಮೀನೋ ಆಸಿಡ್ ರೂಪಾಂತರಗಳು ಈಗ ಪ್ರಸರಣ ಹೊಂದುತ್ತಿರುವ ತಳಿಗಳಲ್ಲಿ ಹೋಸ್ಟ್ ಅಡಾಪ್ಟೇಷನ್ ಗೆ ಸಜ್ಜಾಗಿದ್ದು, ವಿಕಾಸಾತ್ಮಕ ಪ್ರವೃತ್ತಿ ಹೊಂದಿದೆ ಎಂದು ಹೇಳಿದೆ. 

ಮೂರು ರೂಪಾಂತರಿಗಳಾದ B.1.1.7 ವಂಶಾವಳಿ ಆತಂಕಕ್ಕೆ ಕಾರಣವಾಗಿದೆ. B.1.351 ವಂಶಾವಳಿ ಭಾರತದಲ್ಲಿ ವರದಿಯಾಗಿದೆ. ಆಂಟಿಜೆನಿಕ್ ಡ್ರಿಫ್ಟ್, ಹರಡುವಿಕೆ ಮತ್ತು ರೋಗನಿರೋಧಕವನ್ನೂ ಮೀರಿಸುವ ಸಾಮರ್ಥ್ಯದಿಂದಾಗಿ (ಪ್ರಮುಖವಾಗಿ B.1.351) ಇವೆರಡೂ ಆತಂಕಗಳಿಗೆ ಕಾರಣವಾಗಿದೆ ಎಂದು ಐಸಿಎಂಆರ್ ಹೇಳಿದೆ. ಭಾರತದಲ್ಲಿ ಇತ್ತೀಚೆಗೆ ಡಬಲ್ ಮ್ಯುಟೆಂಟ್ (ಡಬಲ್ ರೂಪಾಂತರಿ) ವೈರಾಣು ಎಂದೇ ಕುಖ್ಯಾತವಾಗಿರುವ B.1.617 ವೈರಾಣು ಪತ್ತೆಯಾಗಿದ್ದು ಹೆಚ್ಚಿನ ಪ್ರಸರಣ ಪ್ರಮಾಣದ ಸಾಮರ್ಥ್ಯ ಹೊಂದಿದೆ. ಡಬಲ್ ಮ್ಯುಟೆಂಟ್ ವೈರಾಣುಗಳು ಮಹಾರಾಷ್ಟ್ರ, ತೆಲಂಘಾಣ, ಆಂಧ್ರಪ್ರದೇಶ, ಅಸ್ಸಾಂಗಳಲ್ಲಿ ಮಾರ್ಚ್ ಹಾಗೂ ಜುಲೈ2020 ರಲ್ಲಿ ಪತ್ತೆಯಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT