ಪಿಣರಾಯಿ ವಿಜಯನ್ 
ದೇಶ

ಕೇರಳ ಸಂಪುಟ ವಿಸ್ತರಣೆ: ಪಿಣರಾಯಿ ಬಳಿ ಗೃಹ, ಅಳಿಯನಿಗೆ ಲೋಕೋಪಯೋಗಿ, ವೀಣಾ ಜಾರ್ಜ್ ಗೆ ಆರೋಗ್ಯ ಖಾತೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಖಾತೆ ಹಂಚಿಕೆ  ಮಾಡಿದ್ದು 20 ಸಚಿವರಿಗೆ ಹೊಣೆಗಾರಿಕೆ ನೀಡಿದ್ದಾರೆ.

ತಿರುವನಂತಪುರ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಖಾತೆ ಹಂಚಿಕೆ  ಮಾಡಿದ್ದು 20 ಸಚಿವರಿಗೆ ಹೊಣೆಗಾರಿಕೆ ನೀಡಿದ್ದಾರೆ.

ಗೃಹ ಹಾಗೂ ಐಟಿ ಖಾತೆಗಳನ್ನು ತಮ್ಮ ಬಳಿ ಇಟ್ಟುಕೊಂಡಿರುವ ಪಿಣರಾಯಿ ವಿಜಯನ್ ಮೊದಲ ಬಾರಿಗೆ ಸಚಿವರಾಗಿರುವ ಅವರ ಅಳಿಯ ಪಿ.ಎ. ಮೊಹಮ್ಮದ್‌ ರಿಯಾಸ್‌ಗೆ ಲೋಕೋಪಯೋಗಿ ಹಾಗೂ ಕೆಕೆ ಶೈಲಜಾ ಅವರ ಬಳಿಯಿದ್ದ ಆರೋಗ್ಯ ಖಾತೆಯನ್ನು ವೀಣಾ ಜಾರ್ಜ್‌ ಅವರಿಗೆ ನೀಡಿದ್ದಾರೆ.

ಎಂ.ವಿ.ಗೋವಿಂದನ್‌ ಅವರಿಗೆ ಸ್ಥಳೀಯ ಸಂಸ್ಥೆಗಳು ಹಾಗೂ ಅಬಕಾರಿ, ಆರ್‌.ಬಿಂದು ಅವರಿಗೆ ಉನ್ನತ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ, ಜೆ.ಚಿಂಚುರಾಣಿ ಅವರಿಗೆ ಪಶು ಸಂಗೋಪನೆ ಹಾಗೂ ಡೇರಿ ಅಭಿವೃದ್ಧಿ ಖಾತೆಗಳನ್ನು ನೀಡಲಾಗಿದೆ. 

ಐದು ಬಾರಿ ಶಾಸಕ ಹಾಗೂ ಮಾಜಿ ಸ್ಪೀಕರ್‌ ಕೆ.ರಾಧಾಕೃಷ್ಣನ್ ಅವರಿಗೆ ಮಹತ್ವದ ಬೆಳವಣಿಗೆಯಲ್ಲಿ ದೇವಸ್ವಂ ಖಾತೆ ನೀಡಲಾಗಿದೆ. ಇವರು ವಿಜಯನ್‌ ನೇತೃತ್ವದ ಸಂಪುಟದಲ್ಲಿನ ಪರಿಶಿಷ್ಟ ಜನಾಂಗದ ಮುಖ. ಸರಳ ಹಾಗೂ ಭ್ರಷ್ಟಾಚಾರದ ಕಳಂಕ ರಹಿತರು ಎಂಬ ಖ್ಯಾತಿ ರಾಧಾಕೃಷ್ಣನ್‌ ಅವರದು. ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇಗುಲ ಸೇರಿದಂತೆ ರಾಜ್ಯದಲ್ಲಿರುವ ನೂರಾರು ದೇವಸ್ಥಾನಗಳ ನಿರ್ವಹಣೆಯ ಸವಾಲು ಅವರ ಮುಂದಿದೆ. ಕೆ.ರಾಜನ್ ಅವರಿಗೆ ಕಂದಾಯ ಖಾತೆ ನೀಡಲಾಗಿದೆ,ಪಿ ರಾಜೀವ್ ಅವರಿಗೆ
ಕಾನೂನು ಇಲಾಖೆ ಸೇರಿದಂತೆ 20 ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ.

21 ಸಚಿವರನ್ನು ಒಳಗೊಂಡ ಸಂಪುಟದಲ್ಲಿ 17 ಸಚಿವರು ಹೊಸಬರೇ ಆಗಿರುವುದು ವಿಶೇಷ. ಸಿಪಿಐನ ನಾಲ್ವರು, ಕೇರಳ ಕಾಂಗ್ರೆಸ್‌ (ಎಂ), ಜೆಡಿಎಸ್‌ ಹಾಗೂ ಎನ್‌ಸಿಪಿಯ ತಲಾ ಒಬ್ಬರು ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT