ರಘು ರಾಮಕೃಷ್ಣ ರಾಜು 
ದೇಶ

ದೇಶದ್ರೋಹ ಪ್ರಕರಣ: ವೈಎಸ್ಆರ್ ಕಾಂಗ್ರೆಸ್ ಬಂಡಾಯ ಸಂಸದನಿಗೆ ಸುಪ್ರೀಂನಿಂದ ಜಾಮೀನು

ದೇಶದ್ರೋಹ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ವೈಎಸ್ಆರ್ ಕಾಂಗ್ರೆಸ್ ಬಂಡಾಯ ಸಂಸದ ಕೆ.ರಘು ರಾಮಕೃಷ್ಣ ರಾಜು ಅವರಿಗೆ ಶುಕ್ರವಾರ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.

ನವದೆಹಲಿ: ದೇಶದ್ರೋಹ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ವೈಎಸ್ಆರ್ ಕಾಂಗ್ರೆಸ್ ಬಂಡಾಯ ಸಂಸದ ಕೆ.ರಘು ರಾಮಕೃಷ್ಣ ರಾಜು ಅವರಿಗೆ ಶುಕ್ರವಾರ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.

ನ್ಯಾಯಮೂರ್ತಿಗಳಾದ ವಿನೀತ್ ಸರನ್ ಮತ್ತು ಬಿ ಆರ್ ಗವಾಯಿ ಅವರ ರಜೆ ಪೀಠ, ಸಿಕಂದರಾಬಾದ್‌ನ ಸೇನಾ ಆಸ್ಪತ್ರೆಯಲ್ಲಿರುವ ರಾಜು ಅವರ ವೈದ್ಯಕೀಯ ವರದಿಯನ್ನು ಉಲ್ಲೇಖಿಸಿ ಜಾಮೀನು ನೀಡಿದೆ.

ರಾಜು ಅವರಿಗೆ ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಮಾಧ್ಯಮಗಳಿಗೆ ಯಾವುದೇ ಸಂದರ್ಶನವನ್ನು ನೀಡುವಂತಿಲ್ಲ ಎಂದು ಹೇಳಿದೆ.

ಮುಂದಿನ ಆದೇಶದವರೆಗೂ ರಾಜು ಅವರನ್ನು ನೆರೆಯ ತೆಲಂಗಾಣದ ಸಿಕಂದರಾಬಾದ್‌ನ ಸೇನಾ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುವಂತೆ ಮೇ 17 ರಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಕೆ.ರಘು ರಾಮಕೃಷ್ಣ ರಾಜು ಅವರ ವಿರುದ್ಧ ಆಂಧ್ರ ಪ್ರದೇಶದ ಅಪರಾಧ ತನಿಖಾ ಇಲಾಖೆ(ಸಿಐಡಿ) ದೇಶದ್ರೋಹ ಪ್ರಕರಣ ದಾಖಲಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT