ರಘು ರಾಮಕೃಷ್ಣ ರಾಜು 
ದೇಶ

ದೇಶದ್ರೋಹ ಪ್ರಕರಣ: ವೈಎಸ್ಆರ್ ಕಾಂಗ್ರೆಸ್ ಬಂಡಾಯ ಸಂಸದನಿಗೆ ಸುಪ್ರೀಂನಿಂದ ಜಾಮೀನು

ದೇಶದ್ರೋಹ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ವೈಎಸ್ಆರ್ ಕಾಂಗ್ರೆಸ್ ಬಂಡಾಯ ಸಂಸದ ಕೆ.ರಘು ರಾಮಕೃಷ್ಣ ರಾಜು ಅವರಿಗೆ ಶುಕ್ರವಾರ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.

ನವದೆಹಲಿ: ದೇಶದ್ರೋಹ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ವೈಎಸ್ಆರ್ ಕಾಂಗ್ರೆಸ್ ಬಂಡಾಯ ಸಂಸದ ಕೆ.ರಘು ರಾಮಕೃಷ್ಣ ರಾಜು ಅವರಿಗೆ ಶುಕ್ರವಾರ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.

ನ್ಯಾಯಮೂರ್ತಿಗಳಾದ ವಿನೀತ್ ಸರನ್ ಮತ್ತು ಬಿ ಆರ್ ಗವಾಯಿ ಅವರ ರಜೆ ಪೀಠ, ಸಿಕಂದರಾಬಾದ್‌ನ ಸೇನಾ ಆಸ್ಪತ್ರೆಯಲ್ಲಿರುವ ರಾಜು ಅವರ ವೈದ್ಯಕೀಯ ವರದಿಯನ್ನು ಉಲ್ಲೇಖಿಸಿ ಜಾಮೀನು ನೀಡಿದೆ.

ರಾಜು ಅವರಿಗೆ ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಮಾಧ್ಯಮಗಳಿಗೆ ಯಾವುದೇ ಸಂದರ್ಶನವನ್ನು ನೀಡುವಂತಿಲ್ಲ ಎಂದು ಹೇಳಿದೆ.

ಮುಂದಿನ ಆದೇಶದವರೆಗೂ ರಾಜು ಅವರನ್ನು ನೆರೆಯ ತೆಲಂಗಾಣದ ಸಿಕಂದರಾಬಾದ್‌ನ ಸೇನಾ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುವಂತೆ ಮೇ 17 ರಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಕೆ.ರಘು ರಾಮಕೃಷ್ಣ ರಾಜು ಅವರ ವಿರುದ್ಧ ಆಂಧ್ರ ಪ್ರದೇಶದ ಅಪರಾಧ ತನಿಖಾ ಇಲಾಖೆ(ಸಿಐಡಿ) ದೇಶದ್ರೋಹ ಪ್ರಕರಣ ದಾಖಲಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪುತ್ರಿಯರ ಅಕ್ರಮ ನೇಮಕಕ್ಕೆ ನೆರವು: 'KPSC' ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತುಗೊಳಿಸಿ ರಾಜ್ಯಪಾಲರ ಆದೇಶ

US-Iran ಸಂಘರ್ಷ ತೀವ್ರ: Hormuz ಜಲಸಂಧಿ ಬಳಿ ಅಮೆರಿಕ ಭೀಕರ ವೈಮಾನಿಕ ದಾಳಿ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ..!

ಬದಲಾದ ಸಂಸತ್ ಬಲಾಬಲದ ನಡುವೆ ಮುಂಗಾರು ಅಧಿವೇಶನ; ಜು.19 ರಂದು ಸರ್ವಪಕ್ಷಗಳ ಸಭೆ; ಜಿದ್ದಾಜಿದ್ದಿನ ರಾಜಕೀಯಕ್ಕೆ ವೇದಿಕೆ ಸಜ್ಜು..!

ನ್ಯಾಷನಲ್ ಕಾನ್ಫರೆನ್ಸ್ ಶಾಸಕರ ಖರೀದಿ ಆರೋಪ: CM ಒಮರ್ ಅಬ್ದುಲ್ಲಾಗೆ ಬಿಗ್ ಶಾಕ್, 100 ಕೋಟಿ ರೂ. ಮಾನನಷ್ಟ ನೋಟಿಸ್!

'Jurassic Park' ಖ್ಯಾತಿಯ ಹಿರಿಯ ನಟ ಸ್ಯಾಮ್ ನೀಲ್ ಹಠಾತ್ ನಿಧನ!