ನೌಕಪಡೆಯಿಂದ ರಕ್ಷಣಾ ಕಾರ್ಯಾಚರಣೆ 
ದೇಶ

ಬಾರ್ಜ್ ದುರಂತ: 30 ಮೃತದೇಹಗಳ ಗುರುತು ಪತ್ತೆಗಾಗಿ ಡಿಎನ್ಎ ಪರೀಕ್ಷೆ ಆರಂಭಿಸಿದ ಪೊಲೀಸರು!

 ಬಾರ್ಜ್ ಪಿ-305 ದುರಂತದಲ್ಲಿ ಮೃತಪಟ್ಟ 61 ಜನರ ಪೈಕಿ 30 ಮಂದಿಯ ಗುರುತು ಪತ್ತೆ ಹಚ್ಚಲು ಹರಸಾಹಸಪಡುತ್ತಿರುವ ಪೊಲೀಸರು, ಡಿಎನ್ಎ ಪರೀಕ್ಷೆ ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಮುಂಬೈ: ಬಾರ್ಜ್ ಪಿ-305 ದುರಂತದಲ್ಲಿ ಮೃತಪಟ್ಟ 61 ಜನರ ಪೈಕಿ 30 ಮಂದಿಯ ಗುರುತು ಪತ್ತೆ ಹಚ್ಚಲು ಹರಸಾಹಸಪಡುತ್ತಿರುವ ಪೊಲೀಸರು, ಡಿಎನ್ಎ ಪರೀಕ್ಷೆ ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ನೌಕಪಡೆ ಈವರೆಗೂ ಅರಬಿಯನ್ ಸಮುದ್ರದಿಂದ 61 ಮೃತದೇಹಗಳನ್ನು ವಶಕ್ಕೆ ಪಡೆದಿದ್ದು, ಅವುಗಳನ್ನು ನಗರ ಪೊಲೀಸರ ವಶಕ್ಕೆ
ಹಸ್ತಾಂತರಿಸಿದೆ ಎಂದು ಮುಂಬೈ ಪೊಲೀಸರು ವಕ್ತಾರರೊಬ್ಬರು ತಿಳಿಸಿದ್ದಾರೆ. ಬಾರ್ಜ್ ಪಿ-305 ರ ಸೋಮವಾರ ಟೌಕ್ಟೇ ಚಂಡಮಾರುತದ ಹೊಡೆತಕ್ಕೆ ಸಿಲುಕಿ ಸೋಮವಾರ ಸಂಜೆ  ಮುಳುಗಿತ್ತು.

28 ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಂತರ ಅವರ ಕುಟುಂಬಸ್ಥರಿಗೆ ಪೊಲೀಸರು ಹಸ್ತಾಂತರಿಸಿದ್ದಾರೆ. ಆದಾಗ್ಯೂ, 30 ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ. ಕೆಲ ಮೃತದೇಹಗಳು ಕೊಳೆತ ಸ್ಥಿತಿಯಲ್ಲಿದ್ದರೆ, ಮತ್ತೆ ಕೆಲವರಿಗೆ ತೀವ್ರವಾದ ಗಾಯಗಳಾಗಿವೆ. ಆದ್ದರಿಂದ ಗುರುತಿಸುವಿಕೆ ಕಷ್ಟವಾಗುತ್ತಿದೆ ಎಂದು ಅಧಿಕಾರಿ ಹೇಳಿದರು.

ಈ ಹಿನ್ನೆಲೆಯಲ್ಲಿ ಮೃತದೇಹಗಳ ಡಿಎನ್ ಎ ಪರೀಕ್ಷೆ ನಡೆಸಲು ಪೊಲೀಸರು ನಿರ್ಧರಿಸಿದ್ದಾರೆ. ಮೃತರ ರಕ್ತದ ಮಾದರಿಗಳನ್ನು ಸಂಗ್ರಹಿಸಿ, ಸಾಂತಕ್ರೂಜ್ ನ ಕಲಿನಾದಲ್ಲಿರುವ ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಮಧ್ಯೆ, ನೌಕಪಡೆಯಿಂದ ನೀರಿನೊಳಗೆ ಬಾರ್ಜ್ ಹಡಗಿನ ಭಗ್ನಾವಶೇಷಗಳ ಹುಡುಕಾಟ ನಡೆಯುತ್ತಿದ್ದು, ಡೈವಿಂಗ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT